
ಬೆಂಗಳೂರು(ಮೇ.30): ಕೊರೋನಾ ವೈರಸ್ ನಿಯಂತ್ರಣ ಹಿನ್ನೆಲೆ ಕರ್ನಾಟಕದಲ್ಲಿ ನಾಲ್ಕನೇ ಹಂತದ ಲಾಕ್ಡೌನ್ ಘೋಷಿಸಲಾಗಿತ್ತು. ಇದರ ಅನ್ವಯ ಕೆಲ ಸಡಿಲಿಕೆ ಘೋಷಿಸಿದ್ದರಾದರೂ, ಭಾನುವಾರ ಅಗತ್ಯ ಸೇವೆ ಹೊರತುಪಡಿಸಿ ಉಳಿದೆಲ್ಲಾ ಸಂಪೂರ್ಣ ಲಾಕ್ಡೌನ್ ಘೋಷಿಸಲಾಗಿತ್ತು.ಆದರೀಗ ರಜಾ ದಿನದಂದು ರಾಜ್ಯದ ಜನತೆಯ ಹಿತದೃಷ್ಟಿಯಿಂದ ಹಾಗೂ ಸಾರ್ವಜನಿಕರಿಗೆ ತೊಂದರೆ ಆಗಬಾರದೆಂದು ಈ ನಿಯಮವನ್ನೂ ಸಡಿಲಿಸಿದೆ. ಸಿಎಂ ಕಚೇರಿಯಿಂದ ಈ ಸಂಬಂಧ ಪ್ರಕಟಣೆ ಹೊರಡಿಸಲಾಗಿದ್ದು, ಭಾನುವಾರ ಸಂಪೂರ್ಣ ಲಾಕ್ಡೌನ್ ಇರುವುದಿಲ್ಲ ಎಂದು ತಿಳಿಸಲಾಗಿದೆ.
ಭಾನುವಾರ ಜನತಾ ಕರ್ಫ್ಯೂ : ಎಲ್ಲಾ ಹೋಟೆಲ್ ಬಂದ್, ಚಿನ್ನದಂಗಡಿಗಳ ಸಪೋರ್ಟ್
ಹೌದು ನಾಲ್ಕನೇ ಹಂತದ ಲಾಕ್ಡೌನ್ ಮಾರ್ಗಸೂಚಿ ಬಿಡುಗಡೆ ಮಾಡಿದ್ದ ಕರ್ನಾಟಕ ಸರ್ಕಾರ ಶನಿವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಗ್ಗೆವರೆಗೆ ರಾಜ್ಯಾದ್ಯಂತ ಕರ್ಫ್ಯೂ ವಿಧಿಸಲಾಗಿತ್ತು. ಆದರೀಗ ವಾರದ ಉಳಿದ ದಿನಗಳಂತೆ 31.05.2020 ರಂದು ಭಾನುವಾರವೂ ದೈನಂದಿನ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡಲಾಗಿದೆ. ರಾಜ್ಯದ ಜನತೆಯ ಹಿತದೃಷ್ಟಿಯಿಂದ ಭಾನುವಾರ ಲಾಕ್ಡೌನ್ ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸಾರ್ವಜನಿಕರ ಒತ್ತಾಯದ ಹಿನ್ನೆಲೆಯಲ್ಲಿ ಸರ್ಕಾರ ಈ ನಿರ್ಧಾರಕ್ಕೆ ತೆಗೆದುಕೊಂಡಿದೆ. ವಿಪಕ್ಷಗಳೂ ಕೂಡ ಭಾನುವಾರದ ಲಾಕ್ಡೌನ್ ಕ್ರಮವನ್ನು ತೀವ್ರವಾಗಿ ಟೀಕೆ ಮಾಡಿದ್ದವು.
ವಾರಕ್ಕೆ ಒಂದು ದಿನ ಲಾಕ್ಡೌನ್ ಮಾಡುವುದು ಅಸಂಬದ್ಧ ಎಂದು ಸಿದ್ದರಾಮಯ್ಯ ಸೇರಿದಂತೆ ಹಲವು ಮುಖಂಡರು ಯಡಿಯೂರಪ್ಪ ಸರ್ಕಾರದ ಸಂಡೇ ಲಾಕ್ಡೌನ್ ಕ್ರಮದ ಔಚಿತ್ಯವನ್ನು ಪ್ರಶ್ನೆ ಮಾಡಿದ್ದರು. ಸರ್ಕಾರ ಭಾನುವಾರದ ಲಾಕ್ಡೌನ್ ಅನ್ನು ಬಹಳ ಗಂಭೀರವಾಗಿ ಪರಿಗಣಿಸಿದೆ. ಇನ್ನಷ್ಟು ಕಟ್ಟುನಿಟ್ಟಾಗಿ ಜಾರಿಗೆ ತರಲು ಮುಂದಾಗಿದೆ ಎಂಬಂತಹ ಸುದ್ದಿಗಳಿದ್ದವು. ಆದರೆ, ಕೊನೆಯ ಕ್ಷಣದಲ್ಲಿ ಸರ್ಕಾರ ನಿರ್ಧಾರ ಬದಲಿಸಿದೆ.
ಇನ್ನು ಮೇ. 24ರ ಭಾನುವಾರ ರಾಜ್ಯಾದ್ಯಂತ ಸಂಪೂರ್ಣ ಲಾಕ್ಡೌನ್ ಇದ್ದು ಯಶಸ್ವಿಯಾಗಿತ್ತು. ಜನರೆಲ್ಲಾ ಓಡಾಟಕ್ಕೆ ಬ್ರೇಕ್ ಹಾಕಿದ್ದು, ಮನೆಯಲ್ಲೇ ಉಳಿದುಕೊಂಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ