
ಬೆಂಗಳೂರು (ಡಿ.2): ಪಕ್ಷದೊಳಗೆ ಏನೂ ಕೆಟ್ಟಿಲ್ಲ ಎಲ್ಲವೂ ಸರಿಯಾಗಿದೆ. ನಮ್ಮಲ್ಲಿ ಯಾವುದೇ ವಾರ್ (ಯುದ್ಧ) ಇಲ್ಲ, ಕೇವಲ ಪೀಸ್ (ಶಾಂತಿ) ಅಷ್ಟೇ. ಅದನ್ನು ಕದಡುವ ಪ್ರಯತ್ನ ಯಾರೂ ಮಾಡಬಾರದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ವಿಧಾನಸೌಧದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕ್ , ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಅವರು ತಮ್ಮಲ್ಲಿ ಯಾವುದೇ ವ್ಯತ್ಯಾಸವಿಲ್ಲ ಎಂದು ಮಾಧ್ಯಮಗಳೆದುರೇ ಹೇಳಿದ್ದಾರೆ. ಇನ್ನು, ಪಕ್ಷದಲ್ಲಿ ಎಲ್ಲವೂ ಸರಿಯಾಗಿದೆ, ಯಾವುದೂ ಕೆಟ್ಟಿಲ್ಲ. ಎಲ್ಲವೂ ಶಾಂತಿಯಾಗಿದ್ದು, ವಿರೋಧ ಪಕ್ಷ, ಮಾಧ್ಯಮಗಳು ಅದನ್ನು ಕದಡುವ ಕೆಲಸ ಮಾಡಬಾರದು ಎಂದರು.
ನಾಯಕತ್ವ ಬದಲಾವಣೆ ಗದ್ದಲ ತಣ್ಣಗಾಗಿಸಲು ನೀವು ನೇತೃತ್ವ ವಹಿಸಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿ, ಇದಕ್ಕೆ ಸಂಬಂಧಿಸಿ ನನಗೆ ಯಾರೂ, ಯಾವುದೇ ಜವಾಬ್ದಾರಿ ನೀಡಿಲ್ಲ. ರಾಹುಲ್ ಗಾಂಧಿ ಅವರನ್ನ ಭೇಟಿಯಾಗಲು ಬೇರೆಯೇ ಕಾರಣವಿತ್ತು ಎಂದರು.
ಅದನ್ನು ಈಗಾಗಲೇ ಹೇಳಿದ್ದೇನೆ. ಮಲ್ಲಿಕಾರ್ಜುನ ಖರ್ಗೆ ಅವರೂ ನನಗೆ ಯಾವುದೇ ಜವಾಬ್ದಾರಿ ನೀಡಿಲ್ಲ. ದೊಡ್ಡವರು ಎಲ್ಲವನ್ನೂ ಸರಿ ಮಾಡಿಕೊಳ್ಳುತ್ತಾರೆ. ನಾನು ಮಧ್ಯಸ್ಥಿತಿಗೆ ವಹಿಸಿದ್ದೇನೆ ಎಂಬುದು ಹೊಸ ವಿಚಾರ. ಈ ರೀತಿಯ ವಿಚಾರ ಹೇಗೆ ಹಬ್ಬುತ್ತದೆಯೋ ತಿಳಿದಿಲ್ಲ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ