ರಾಜ್ಯಕ್ಕಿದೆಯಾದ ‘ಯಾಸ್‌’ಚಂಡಮಾರುತ : ಹವಾಮಾನ ಇಲಾಖೆ ಸ್ಪಷ್ಟನೆ

Kannadaprabha News   | Asianet News
Published : May 25, 2021, 06:59 AM IST
ರಾಜ್ಯಕ್ಕಿದೆಯಾದ ‘ಯಾಸ್‌’ಚಂಡಮಾರುತ : ಹವಾಮಾನ ಇಲಾಖೆ ಸ್ಪಷ್ಟನೆ

ಸಾರಾಂಶ

ಬಂಗಾಳ ಕೊಲ್ಲಿಯಲ್ಲಿ ‘ಯಾಸ್‌’ ಚಂಡಮಾರುತ ಸೃಷ್ಟಿ  ಕರ್ನಾಟಕದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇಲ್ಲ ರಾಜ್ಯದ ಕರಾವಳಿ ಭಾಗದ ಜನರು ‘ಯಾಸ್‌’ಗೆ ಭಯಪಡುವ ಅಗತ್ಯವಿಲ್ಲ

 ಬೆಂಗಳೂರು (ಮೇ.25): ಸೋಮವಾರ ಬಂಗಾಳ ಕೊಲ್ಲಿಯಲ್ಲಿ ‘ಯಾಸ್‌’ ಚಂಡಮಾರುತ ಸೃಷ್ಟಿಯಾಗಿದೆ. ಇದು ಮೇ 26ರಂದು ಒಡಿಶಾ ಮಾರ್ಗವಾಗಿ ಸಾಗುವುದರಿಂದ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇಲ್ಲ. ಈ ಕಾರಣದಿಂದ ಈಗಾಗಲೇ ‘ತೌಕ್ಟೆ’ ಚಂಡಮಾರುತಕ್ಕೆ ತುತ್ತಾಗಿದ್ದ ರಾಜ್ಯದ ಕರಾವಳಿ ಭಾಗದ ಜನರು ‘ಯಾಸ್‌’ಗೆ ಭಯಪಡುವ ಅಗತ್ಯವಿಲ್ಲ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

26ರವರೆಗೆ ಕರಾವಳಿಯಲ್ಲಿ ಉತ್ತಮ ಮಳೆಯಾದರೆ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಭಾಗದಲ್ಲಿ ತುಂತುರು ಮಳೆ ಸಂಭವವಿದೆ. ಕಳೆದ ಕೆಲವು ದಿನಗಳಿಂದ ರಾಜ್ಯಾದ್ಯಂತ ಆರ್ಭಟಿಸಿದ್ದ ವರುಣ ಮೇ 26ರ ನಂತರದ 2-3 ದಿನ ತಾತ್ಕಾಲಿಕವಾಗಿ ವಿರಾಮ ಪಡೆಯಲಿದ್ದಾನೆ ಎಂದು ಹೇಳಿದೆ.

ಬುಧವಾರ ಅಪ್ಪಳಿಸಲಿದೆ ಪ್ರಚಂಡಮಾರುತ ದಾಳಿ! ...

ಮೇ 24ರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಬೆಳಗಾವಿ, ಬಾಗಲಕೋಟೆ ಜಿಲ್ಲೆಯ ಹುನಗುಂದ, ಯಾದಗಿರಿಯ ಕೆಂಬಾವಿ ಮತ್ತು ಜಾಲಹಳ್ಳಿ, ಉತ್ತರ ಕನ್ನಡದ ಕದ್ರಾ, ಬೆಳಗಾವಿಯ ಚಿಕ್ಕೋಡಿ ಮತ್ತಿತರೆಡೆ ಕೆಲ ಹೊತ್ತು ಗಾಳಿ ಸಹಿತ ಮಳೆ ಸುರಿದಿದೆ.

ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದ ಬಹುತೇಕ ಕಡೆಗಳಲ್ಲಿ ಮೇ 26ರವರೆಗೆ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ಉಳಿದೆಡೆ ಚದುರಿದಂತೆ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದಶದಿಕ್ಕುಗಳಿಂದ ಕರ್ನಾಟಕಕ್ಕೆ ಡ್ರಗ್ಸ್‌ ಗಂಡಾಂತರ
Karnataka News Live: ಆಲೂಗಡ್ಡೆಗೆ ಮೊಳಕೆ ಬಂದರೆ ತಿನ್ನಬಹುದಾ? ತಜ್ಞರ ಎಚ್ಚರಿಕೆ ಏನು, ಯಾವುದು- ಯಾರಿಗೆ ಅಪಾಯ?