ರಾಜ್ಯಕ್ಕೆ ಹಿಂಗಾರು ಮಳೆ ಪ್ರವೇಶ : ಯಾವಾಗ, ಎಷ್ಟು ಮಳೆಯಾಗಲಿದೆ..?

Kannadaprabha News   | Asianet News
Published : Oct 29, 2020, 07:06 AM IST
ರಾಜ್ಯಕ್ಕೆ ಹಿಂಗಾರು ಮಳೆ ಪ್ರವೇಶ : ಯಾವಾಗ, ಎಷ್ಟು ಮಳೆಯಾಗಲಿದೆ..?

ಸಾರಾಂಶ

ರಾಜ್ಯಕ್ಕೆ ಹಿಂಗಾರು ಮಳೆ ಪ್ರವೇಶವಾಗಿದ್ದು, ಯಾವಾಗ ಎಲ್ಲಿ ಎಷ್ಟು ಪ್ರಮಾಣದಲ್ಲಿ ರಾಜ್ಯದಲ್ಲಿ ಮಳೆ ಸುರಿಯಲಿದೆ ಇಲ್ಲಿದೆ ಸಂಪೂರ್ಣ ಮಾಹಿತಿ 

ಬೆಂಗಳೂರು (ಅ.29):  15 ದಿನ ತಡವಾಗಿ ರಾಜ್ಯಕ್ಕೆ ಬುಧವಾರ ಹಿಂಗಾರು ಮಳೆ ಪ್ರವೇಶವಾಗಿದೆ. ಈ ಕಾರಣ ರಾಜ್ಯದಲ್ಲಿ ನ.1ರ ಬಳಿಕ ಹಗುರದಿಂದ ಸಾಧಾರಣ ಮಳೆ ಬರುವ ಸಂಭವವಿದ್ದು, ಅಲ್ಲಿವರೆಗೆ ಒಣ ಹವೆ ಮುಂದುವರಿಯಲಿದೆ. ಹಿಂಗಾರು ಮಳೆ ಸುರಿಸುವ ಈಶಾನ್ಯ ಮಾರುತಗಳು ಅ.28ಕ್ಕೆ ರಾಜ್ಯ ಪ್ರವೇಶಿಸಿವೆ. 

ಕೂಡ ಅದರ ಪ್ರಭಾವ ಕರ್ನಾಟಕಕ್ಕೆ ನವೆಂಬರ್‌ 1ರ ನಂತರ ಉಂಟಾಗಲಿದೆ. ಅಲ್ಲಿಯವರೆಗೂ ರಾಜ್ಯದಲ್ಲಿ ಒಣ ಹವೆ ಮುಂದುವರಿಯುವ ಜೊತೆಗೆ ಅಲ್ಲಲ್ಲಿ ಸಾಮಾನ್ಯ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಅ. 30ರಂದು ಸಾಮಾನ್ಯ ಮಳೆ ಬೀಳಲಿದೆ. ಅ. 31 ಮತ್ತು ನ. 1ರಂದು ಪುನಃ ಇವೆರಡು ಭಾಗದ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ಅ. 31 ಹಾಗೂ ನ.1ರಂದು ಸಾಮಾನ್ಯ ಮಳೆಯಾಗುವ ನಿರೀಕ್ಷೆ ಇದೆ ಎನ್ನಲಾಗಿದೆ.

ನೆರೆ ಪರಿಹಾರ ಮೊತ್ತ ಹೆಚ್ಚಳ: ಯಾರ್ಯಾರಿಗೆ ಎಷ್ಟೆಷ್ಟು? ಇಲ್ಲಿದೆ ಡೀಟೆಲ್ಸ್ ...

ಅಧಿಕೃತ ಹಿಂಗಾರು ಆರಂಭ:  ದೇಶದಾದ್ಯಂತ ನೈಋುತ್ಯ ಮುಂಗಾರು ಮಳೆ ಪ್ರಮಾಣ ಗಣನೀಯವಾಗಿ ಕ್ಷಿಣಿಸಿದೆ. ಇದರ ಬೆನ್ನಲ್ಲೆ ಅ. 28ರಿಂದ ಹಿಂಗಾರು ಮಳೆ ಸುರಿಸುವ ಈಶಾನ್ಯ ಮಾರುತಗಳು ದಕ್ಷಿಣ ಭಾರತದಲ್ಲಿ ಬೀಸುತ್ತಿವೆ. ಇದು ಹಿಂಗಾರು ಮಳೆಯ ಆರಂಭ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹಿಂಗಾರು ಪ್ರವೇಶಕ್ಕೆ ಪೂರಕವಾಗಿ ತಮಿಳುನಾಡು ಕರಾವಳಿ ಹತ್ತಿರ ಬಂಗಾಳಕೊಲ್ಲಿಯ ನೈಋುತ್ಯ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿದೆ. ಇವುಗಳ ಪ್ರಭಾವದಿಂದ ರಾಜ್ಯದಲ್ಲಿ ನ. 1ರ ನಂತರ ಮಳೆ ಸುರಿಯುವ ಲಕ್ಷಣ ಇದೆ ಎಂದು ತಿಳಿಸಿದೆ.

- ಅಲ್ಲಲ್ಲಿ ಸಾಮಾನ್ಯ ಮಳೆ ಸಾಧ್ಯತೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮಹಿಳಾ ನೌಕರರಿಗೆ ಬ್ಯಾಡ್ ನ್ಯೂಸ್: ಮುಟ್ಟಿನ ರಜೆಗೆ ಹೈಕೋರ್ಟ್ ತಡೆ: ಸರ್ಕಾರದ ಆದೇಶಕ್ಕೆ ಹಿನ್ನಡೆ?
ಡಿಕೆಸು ಹೆಸರಿನಲ್ಲಿ ಕೋಟ್ಯಂತರ ವಂಚನೆ ಪ್ರಕರಣ.. 'ಬಂಗಾರಿ' ಕೇಸ್‌ನಲ್ಲಿ ನಟ ಧರ್ಮಗೆ ಧ್ವನಿ ಪರೀಕ್ಷೆ?