ದರ್ಶನ್‌ ಮನೆ ನಾಯಿ ಕಚ್ಚಿದ ಪ್ರಕರಣ: ಹೀಗೇ ಆದರೆ ಕೋರ್ಟಿಗೆ ಹೋಗುವೆ ಎಂದ ದೂರುದಾರೆ!

Published : Nov 03, 2023, 08:48 AM IST
ದರ್ಶನ್‌ ಮನೆ ನಾಯಿ ಕಚ್ಚಿದ ಪ್ರಕರಣ: ಹೀಗೇ ಆದರೆ ಕೋರ್ಟಿಗೆ ಹೋಗುವೆ ಎಂದ ದೂರುದಾರೆ!

ಸಾರಾಂಶ

ನಟ ದರ್ಶನ್‌ ದೊಡ್ಡ ವ್ಯಕ್ತಿಯಾಗಿದ್ದು, ಪೊಲೀಸರ ಮೇಲೆ ಒತ್ತಡ ಹೇರಿದ್ದಾರೆ ಎಂದು ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ನಟ ದರ್ಶನ್‌ ಅವರ ಸಾಕು ನಾಯಿಗಳಿಂದ ದಾಳಿಗೊಳಾಗಿದ್ದ ಸಂತ್ರಸ್ತೆ ಅಮಿತಾ ಜಿಂದಾಲ್ ಆರೋಪಿಸಿದ್ದಾರೆ. 

ಬೆಂಗಳೂರು (ನ.03): ನಟ ದರ್ಶನ್‌ ದೊಡ್ಡ ವ್ಯಕ್ತಿಯಾಗಿದ್ದು, ಪೊಲೀಸರ ಮೇಲೆ ಒತ್ತಡ ಹೇರಿದ್ದಾರೆ ಎಂದು ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ನಟ ದರ್ಶನ್‌ ಅವರ ಸಾಕು ನಾಯಿಗಳಿಂದ ದಾಳಿಗೊಳಾಗಿದ್ದ ಸಂತ್ರಸ್ತೆ ಅಮಿತಾ ಜಿಂದಾಲ್ ಆರೋಪಿಸಿದ್ದಾರೆ. ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅಮಿತಾ ಅವರು, ನಾಯಿ ದಾಳಿ ಪ್ರಕರಣ ಸಂಬಂಧ ಇದುವರೆಗೆ ದರ್ಶನ್‌ ಹಾಗೂ ಅವರ ಮನೆಯ ಸಹಾಯಕರನ್ನು ಪೊಲೀಸರು ವಿಚಾರಣೆ ನಡೆಸಿಲ್ಲ ಎಂದು ದೂರಿದರು.

ದರ್ಶನ್‌ ದೊಡ್ಡ ವ್ಯಕ್ತಿಯಾಗಿದ್ದಾರೆ. ಹೀಗಾಗಿ ತನಿಖೆ ನಡೆಸದಂತೆ ಪೊಲೀಸರ ಮೇಲೆ ಅವರು ಒತ್ತಡ ಹಾಕುತ್ತಿದ್ದಾರೆ. ಇದರಿಂದ ಅವರನ್ನು ಪೊಲೀಸರು ವಿಚಾರಣೆ ನಡೆಸಿಲ್ಲ. ಆದರೆ ನನಗೆ ಮಾತ್ರ ಹೇಳಿಕೆ ಪಡೆಯಲು ನೋಟಿಸ್ ಕೊಟ್ಟಿದ್ದಾರೆ ಎಂದು ಅಮಿತಾ ಆಪಾದಿಸಿದರು. ನನ್ನ ಮೇಲೆ ಬೇಕು ಅಂತಲೇ ನಾಯಿಗಳಿಂದ ದರ್ಶನ್ ಮನೆಯ ಸಹಾಯಕರು ದಾಳಿ ಮಾಡಿಸಿದ್ದಾರೆ. ನಾನು ವಿಚಾರಣೆಗೆ ಹೋಗಲು ಎರಡು ದಿನಗಳ ಸಮಯ ಕೇಳಿದ್ದೇನೆ. ಇನ್ನು ಘಟನೆ ಸಂಬಂಧ ಐಪಿಸಿ 307 (ಕೊಲೆ ಯತ್ನ) ಆರೋಪದಡಿ ಎಫ್‌ಐಆರ್ ದಾಖಲಿಸುವಂತೆ ಪೊಲೀಸರಿಗೆ ಮನವಿ ಮಾಡಿದ್ದೆ. ಆದರೆ ಅವರು ಪುರಸ್ಕರಿಸಿಲ್ಲ ಎಂದು ಕಿಡಿಕಾರಿದರು.

ನಿಮ್ಮನ್ನ ಈ ಲುಕ್‌ನಲ್ಲಿ ನೋಡುತ್ತಿದ್ರೆ... ಪಡ್ಡೆಹೈಕ್ಳ ಎದೆಯಲ್ಲಿ ಪ್ರೀತಿಯ ಕಿಚ್ಚು ಹಚ್ಚಿದ ರಚ್ಚು!

ಈ ವಿಚಾರವನ್ನು ನ್ಯಾಯಾಲಯದಲ್ಲಿ ನಾನು ಪ್ರಶ್ನಿಸುತ್ತೇನೆ. ಪೊಲೀಸರು ನ್ಯಾಯ ಕೊಡಿಸದೆ ಹೋದರೆ ನನಗೆ ಕಾನೂನು ಹೋರಾಟ ಅನಿರ್ವಾಯವಾಗಲಿದೆ. ನನಗೆ ನ್ಯಾಯಬೇಕಿದೆ ಎಂದು ಅಮಿತಾ ಹೇಳಿದರು. ಕೆಲ ದಿನಗಳ ಹಿಂದೆ ದರ್ಶನ್‌ರ ರಾಜರಾಜೇಶ್ವರಿ ನಗರದ ಮನೆ ಮುಂದಿನ ಖಾಲಿ ಪ್ರದೇಶದಲ್ಲಿ ಕಾರು ನಿಲುಗಡೆ ವಿಚಾರವಾಗಿ ಅಮಿತಾ ಹಾಗೂ ದರ್ಶನ್ ಮನೆ ಸಹಾಯಕರ ಮಧ್ಯೆ ಜಗಳ‍ವಾಗಿತ್ತು. ಆ ವೇಳೆ ಅಮಿತಾ ಅವರಿಗೆ ದರ್ಶನ್‌ ಮನೆಯ ಸಾಕು ನಾಯಿಗಳು ಕಚ್ಚಿದ್ದವು. ಈ ಸಂಬಂಧ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪಬ್‌ನಲ್ಲಿ ಶಾರುಖ್ ಪುತ್ರನ ದುರ್ವರ್ತನೆ ಕೇಸ್: ಆರ್ಯನ್ ಖಾನ್ ಸೇರಿ ಮೂವರ ವಿರುದ್ಧ ಹಿಂದೂ ಮುಖಂಡನಿಂದ ದೂರು
Namma Metro Update: ಕೆಂಗೇರಿ ಮೆಟ್ರೋ ದುರಂತ; ಮೃತರ ಗುರುತು ಪತ್ತೆ, ಸಂಚಾರ ಸಹಜ ಸ್ಥಿತಿಗೆ!