ರೇಣುಕಾಸ್ವಾಮಿ ಮೊಬೈಲ್‌ ಪತ್ತೆಗೆ ಪೌರ ಕಾರ್ಮಿಕರ ಬಳಕೆ: ನೋಟಿಸ್‌

Published : Jun 21, 2024, 12:15 PM IST
ರೇಣುಕಾಸ್ವಾಮಿ ಮೊಬೈಲ್‌ ಪತ್ತೆಗೆ ಪೌರ ಕಾರ್ಮಿಕರ ಬಳಕೆ: ನೋಟಿಸ್‌

ಸಾರಾಂಶ

ಪಟ್ಟಣಗೆರೆ ಶೆಡ್‌ನಲ್ಲಿ ರೇಣುಕಾ ಸ್ವಾಮಿಗೆ ವಿದ್ಯುತ್ ಶಾಕ್ ನೀಡಲು ಎಲೆಕ್ನಿಕ್ ಚಾರ್ಜ ಟಾರ್ಚ್ ಅನ್ನು ಎಲ್ಲಿ ಆರೋಪಿ ಧನರಾಜ್ ಅಲಿಯಾಸ್ ರಾಜು ಖರೀದಿಸಿದ್ದ ಎಂಬ ಬಗ್ಗೆ ತನಿಖೆ ನಡೆಸಬೇಕಿದೆ ಎಂದು ಪೊಲೀಸರು ಹೇಳಿದ್ದಾರೆ. ಈ ಡಿವೈಸ್ ರಾಜು ಬಳಿ ಪತ್ತೆಯಾಗಿದೆ.

ಬೆಂಗಳೂರು(ಜೂ.21):  ಕೊಲೆಯಾದ ರೇಣುಕಾಸ್ವಾಮಿ ಮೊಬೈಲ್‌ಫೋನ್ ಪತ್ತೆ ಮಾಡಲು ರಾಜಕಾಲುವೆಗೆ ಬಿಬಿಎಂಪಿ ಪೌರ ಕಾರ್ಮಿಕರನ್ನಿಳಿಸಿದ ಹಿನ್ನೆಲೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಸಮಾಜ ಕಲ್ಯಾಣ ಇಲಾಖೆ ನೋಟಿಸ್ ಜಾರಿ ಮಾಡಿದೆ. 

ಪ್ರಕರಣದಲ್ಲಿ ಮೊಬೈಲ್‌ ಫೋನ್ ಹುಡುಕಲು ಪೌರಕಾರ್ಮಿಕರನ್ನು ಬಳಸಿರುವ ಬಗ್ಗೆ ಕನ್ನಡಪ್ರಭ ವರದಿ ಮಾಡಿತ್ತು. ಈ ಕಾರ್ಯಾಚರಣೆ ನಿಯಮಗಳ ಉಲ್ಲಂಘನೆಯಾಗಿದೆ. ಸಂಬಂಧಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗಕ್ಕೆ ದೂರು ನೀಡಿತ್ತು. ಅದರಂತೆ ತುರ್ತು ನೋಟಿಸ್ ಜಾರಿ ಮಾಡಿದ್ದಾರೆ.

ದರ್ಶನ್‌ ಕ್ರೌರ್ಯದ ಬಗ್ಗೆ ಸಿಎಂ ಟೀಕೆ ಬರೀ ವದಂತಿ: ಸಂಪುಟ ಸಭೆಯಲ್ಲಿ ರೇಣುಕಾಸ್ವಾಮಿ ಕೊಲೆ ವಿಚಾರ ಚರ್ಚೆಯಾಗಿಲ್ಲ..!

ಶಾಕ್ ಡಿವೈಸ್‌ ಖರೀದಿಸಿದ್ದು ಎಲ್ಲಿ?: 

ಪಟ್ಟಣಗೆರೆ ಶೆಡ್‌ನಲ್ಲಿ ರೇಣುಕಾ ಸ್ವಾಮಿಗೆ ವಿದ್ಯುತ್ ಶಾಕ್ ನೀಡಲು ಎಲೆಕ್ನಿಕ್ ಚಾರ್ಜ ಟಾರ್ಚ್ ಅನ್ನು ಎಲ್ಲಿ ಆರೋಪಿ ಧನರಾಜ್ ಅಲಿಯಾಸ್ ರಾಜು ಖರೀದಿಸಿದ್ದ ಎಂಬ ಬಗ್ಗೆ ತನಿಖೆ ನಡೆಸಬೇಕಿದೆ ಎಂದು ಪೊಲೀಸರು ಹೇಳಿದ್ದಾರೆ. ಈ ಡಿವೈಸ್ ರಾಜು ಬಳಿ ಪತ್ತೆಯಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ