ಕಾಂಗ್ರೆಸ್‌ನ ಬೆಳವಣಿಗೆ ನೋಡಿ ಹೆಜ್ಜೆ ಇಡು!: ಪುತ್ರನಿಗೆ ದೇವೇಗೌಡ ಸಲಹೆ

Published : Jan 16, 2019, 10:24 AM IST
ಕಾಂಗ್ರೆಸ್‌ನ ಬೆಳವಣಿಗೆ ನೋಡಿ ಹೆಜ್ಜೆ ಇಡು!: ಪುತ್ರನಿಗೆ ದೇವೇಗೌಡ ಸಲಹೆ

ಸಾರಾಂಶ

ಪುತ್ರನಿಗೆ ದೇವೇಗೌಡ ಸಲಹೆ| ಉದ್ವೇಗ ಬೇಡ, ತಾಳ್ಮೆ ಇರಲಿ: ಪುತ್ರನಿಗೆ ದೇವೇಗೌಡರ ಸಲಹೆ| ತಂದೆಯನ್ನು ಭೇಟಿ ಮಾಡಿ ಚರ್ಚಿಸಿದ ಎಚ್‌ಡಿಕೆ| ಆಪರೇಷನ್‌ ಕಮಲ, ಪಕ್ಷೇತರರ ಬೆಂಬಲ ವಾಪಸ್‌ ಬಗ್ಗೆ ಚರ್ಚೆ

ಬೆಂಗಳೂರು[ಜ.16]: ರಾಜ್ಯ ರಾಜಕೀಯ ಬೆಳವಣಿಗೆ ಬಗ್ಗೆ ಮೇಲ್ನೋಟಕ್ಕೆ ಯಾವುದೇ ಆತಂಕ ವ್ಯಕ್ತಪಡಿಸದ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಅವರನ್ನು ಭೇಟಿ ಮಾಡಿ ರಾಜಕೀಯವಾಗಿ ಇಡಬೇಕಾದ ಹೆಜ್ಜೆಗಳ ಬಗ್ಗೆ ಚರ್ಚಿಸಿದರು.

ಮಂಗಳವಾರ ಪದ್ಮನಾಭನಗರ ನಿವಾಸದಲ್ಲಿನ ದೇವೇಗೌಡರ ನಿವಾಸಕ್ಕೆ ತೆರಳಿ ಕೆಲ ಕಾಲ ಆಪರೇಷನ್‌ ಕಮಲ ಮತ್ತು ಪಕ್ಷೇತರ ಶಾಸಕರು ಬೆಂಬಲ ಹಿಂಪಡೆದಿರುವ ಬಗ್ಗೆ ಸಮಾಲೋಚನೆ ನಡೆಸಿದರು.

ಈ ವೇಳೆ ದೇವೇಗೌಡ ಅವರು ಕುಮಾರಸ್ವಾಮಿಗೆ ಕೆಲವೊಂದು ಸಲಹೆಗಳನ್ನು ನೀಡಿದ್ದಾರೆ. ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಗಮನಿಸಿ ಮುಂದುವರಿಬೇಕು. ಯಾವುದೇ ಕಾರಣಕ್ಕೂ ಆತುರದ ನಿರ್ಧಾರ ಕೈಗೊಳ್ಳಬಾರದು. ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವ ವೇಳೆ ಎಚ್ಚರಿಕೆಯಿಂದ ಇರುವಂತೆ ಕಿವಿಮಾತು ಹೇಳಿದ್ದಾರೆ ಎಂದು ತಿಳಿದು ಬಂದಿದೆ.

ತಾಳ್ಮೆಯಿಂದ ವರ್ತನೆ ಮಾಡುವ ಮೂಲಕ ರಾಜಕೀಯ ಬೆಳವಣಿಗೆಯನ್ನು ನಿಭಾಯಿಸಬೇಕು. ಏಕಾಏಕಿ ಉದ್ವೇಗಕ್ಕೊಳಗಾಗಿ ಹೇಳಿಕೆಗಳನ್ನು ನೀಡಬಾರದು. ಎಚ್ಚರಿಕೆ ಹೆಜ್ಜೆಗಳನ್ನು ಇಡಬೇಕು. ರಾಜಕೀಯದಲ್ಲಿ ಯಾವ ಸಮಯದಲ್ಲಿ ಏನೂ ಬೇಕಾದರೂ ನಡೆಯಬಹುದು. ಹೀಗಾಗಿ ಸೂಕ್ಷ್ಮವಾಗಿ ಎಲ್ಲಾವನ್ನು ಗಮನಿಸಿ ಸೂಕ್ತವಾಗಿ ನಿರ್ಧಾರ ಕೈಗೊಳ್ಳಬೇಕು ಎಂದು ಗೌಡರು ಹೇಳಿದ್ದಾರೆ ಎನ್ನಲಾಗಿದೆ.

ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನಗಳು ನಡೆದಾಗ ರಾಜಕೀಯದಲ್ಲಿ ಮುಂದಿನ ಹೆಜ್ಜೆ ಯಾವ ರೀತಿ ಇಡಬೇಕು ಎಂಬುದರ ಬಗ್ಗೆ ದೇವೇಗೌಡ ಅವರಿಂದ ಕುಮಾರಸ್ವಾಮಿ ಮಾಹಿತಿ ಪಡೆದುಕೊಂಡಿದ್ದಾರೆ. ದೇವೇಗೌಡ ಅವರು ರಾಜಕೀಯ ಜೀವನದಲ್ಲಿ ಇಂತಹ ಹಲವು ಪರಿಸ್ಥಿತಿಗಳನ್ನು ಎದುರಿಸಿದ್ದಾರೆ. ಇಂತಹ ಸಮಯದಲ್ಲಿ ಯಾವ ರೀತಿಯಲ್ಲಿ ಎಚ್ಚರಿಕೆಯ ಹೆಜ್ಜೆಗಳು ಇಡಬೇಕು ಎಂಬುದರ ಬಗ್ಗೆ ದೇವೇಗೌಡರು ಸಲಹೆಗಳನ್ನು ನೀಡಿದ್ದಾರೆ ಎಂದು ಮೂಲಗಳು ತಿಳಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಾಜ್ಯದಲ್ಲಿ ಕೈ ಮೀರಿದ ಕಳ್ಳರ ಹಾವಳಿ, ಕಾನೂನು ವ್ಯವಸ್ಥೆ ಸಂಪೂರ್ಣ ವಿಫಲ? ಪೊಲೀಸರ ಮನೆಗಳನ್ನೇ ಬಿಡುತ್ತಿಲ್ಲ ಖದೀಮರು!
ಕಿತ್ತೂರು ಕರ್ನಾಟಕಕ್ಕೆ 5 ಸಾವಿರ ಕೋಟಿ ನೀಡಿ, ಇಲ್ಲವೇ ಪ್ರತ್ಯೇಕ ರಾಜ್ಯ ಕೊಡಿ: ಶಾಸಕ ರಾಜು ಕಾಗೆ