ದಸರಾ ಮಹೋತ್ಸವದ ಗಜಪಡೆ ಮೊದಲ ಪಟ್ಟಿ ಫೈನಲ್: ಆನೆಗಳ ವಿವರ ಇಲ್ಲಿದೆ!

Published : Aug 09, 2023, 09:10 AM IST
ದಸರಾ ಮಹೋತ್ಸವದ ಗಜಪಡೆ ಮೊದಲ ಪಟ್ಟಿ ಫೈನಲ್: ಆನೆಗಳ ವಿವರ ಇಲ್ಲಿದೆ!

ಸಾರಾಂಶ

ದಸರಾ ಮಹೋತ್ಸವಕ್ಕೆ ಮೈಸೂರಿಗೆ ಆಗಮಿಸುವ ಗಜಪಡೆಯ ಮೊದಲ ಪಟ್ಟಿ ತಯಾರಾಗಿದೆ. ಮೊದಲ ಹಂತದಲ್ಲಿ ಬರುವ 9 ಆನೆಗಳ ಪಟ್ಟಿಯನ್ನು ಅರಣ್ಯಾಧಿಕಾರಿಗಳು ಅಂತಿಮಗೊಳಿಸಿದ್ದಾರೆ. ಸೆಪ್ಟೆಂಬರ್ 1 ರ ಗಜಪಯಣದಲ್ಲಿ 9 ಆನೆಗಳು ವೀರನಹೊಸಹಳ್ಳಿಯಿಂದ ಅರಮನೆಗೆ ಆಗಮಿಸಲಿವೆ.  

ಮೈಸೂರು (ಆ.09): ದಸರಾ ಮಹೋತ್ಸವಕ್ಕೆ ಮೈಸೂರಿಗೆ ಆಗಮಿಸುವ ಗಜಪಡೆಯ ಮೊದಲ ಪಟ್ಟಿ ತಯಾರಾಗಿದೆ. ಮೊದಲ ಹಂತದಲ್ಲಿ ಬರುವ 9 ಆನೆಗಳ ಪಟ್ಟಿಯನ್ನು ಅರಣ್ಯಾಧಿಕಾರಿಗಳು ಅಂತಿಮಗೊಳಿಸಿದ್ದಾರೆ. ಸೆಪ್ಟೆಂಬರ್ 1 ರ ಗಜಪಯಣದಲ್ಲಿ 9 ಆನೆಗಳು ವೀರನಹೊಸಹಳ್ಳಿಯಿಂದ ಅರಮನೆಗೆ ಆಗಮಿಸಲಿವೆ.

9 ಆನೆಗಳ ಹೆಸರು ಇಂತಿವೆ:
ನಾಗರಹೊಳೆ ಆನೆ ಶಿಬಿರದಿಂದ – 1)ಅಭಿಮನ್ಯು 2) ಭೀಮ 3) ಮಹೇಂದ್ರ
ನಾಗರಹೊಳೆಯ ಬಳ್ಳೆ ಆನೆ ಶಿಬಿರದಿಂದ – 4) ಅರ್ಜುನ
ದುಬಾರೆ ಆನೆ ಶಿಬಿರದಿಂದ – 5) ಧನಂಜಯ 6) ಗೋಪಿ
ಬಂಡೀಪುರದ ರಾಮಪುರ ಶಿಬಿರದಿಂದ – 7) ಪಾರ್ಥ ಸಾರಥಿ
ದುಬಾರೆ ಆನೆ ಶಿಬಿರದಿಂದ – 8) ವಿಜಯ
ಭೀಮನಕಟ್ಟೆ ಆನೆ ಶಿಬಿರದಿಂದ – 9) ವರಲಕ್ಷಿ ಆನೆಗಳು ಬರಲಿದೆ. 

ಆ.20ಕ್ಕೆ ಗೃಹಲಕ್ಷ್ಮೀ ಯೋಜನೆಗೆ ರಾಹುಲ್‌, ಪ್ರಿಯಾಂಕಾ ಚಾಲನೆ: ಬೆಳಗಾವಿಯಲ್ಲಿ ಲೋಕಾರ್ಪಣೆ

ಸೆ.1ರಂದು ಮೈಸೂರಿನತ್ತ ದಸರಾ ಗಜಪಯಣ ಶುರು: ಈ ಬಾರಿಯ ದಸರಾ ಮಹೋತ್ಸವಕ್ಕೆ ಸೆಪ್ಟೆಂಬರ್‌ 1ಕ್ಕೆ ಗಜಪಯಣ ಆರಂಭವಾಗಲಿದ್ದು, ಅದೇ ದಿನ ಗಜಪಡೆಯು ಮೈಸೂರಿಗೆ ಆಗಮಿಸಲಿವೆ ಎಂದು ಸಮಾಜ ಕಲ್ಯಾಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ತಿಳಿಸಿದರು. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲ ಹಂತದಲ್ಲಿ 14 ಆನೆಗಳು ಮೈಸೂರಿಗೆ ಬರಲಿದ್ದು, ಹುಣಸೂರು ತಾಲೂಕಿನ ವೀರನಹೊಸಹಳ್ಳಿಯಲ್ಲಿ ಸಾಂಪ್ರ ದಾಯಿಕವಾಗಿ ಗಜಪಯಣ ಆಯೋಜಿಸಲಾಗಿದೆ ಎಂದರು. ಈ ಬಾರಿಯ ದಸರಾಗೆ ವಿಶೇಷ ಅನುದಾನವನ್ನೇನೂ ಕೇಳಿಲ್ಲ. ಅದ್ಧೂರಿ ದಸರಾಗೆ ಬೇಕಾಗುವಷ್ಟು ಅನುದಾನ ಸರ್ಕಾರವೇ ಕೊಡುತ್ತದೆ. ಇನ್ನು, ದಸರಾ ಉದ್ಘಾಟಕರ ಬಗ್ಗೆ ತೀರ್ಮಾನವನ್ನು ಮುಖ್ಯಮಂತ್ರಿ ವಿವೇಚನೆಗೇ ಬಿಟ್ಟಿದ್ದೇವೆ. ಮುಖ್ಯಮಂತ್ರಿಗಳೇ ಉದ್ಘಾಟಕರ ಹೆಸರು ಸೂಚಿಸಲಿದ್ದಾರೆ ಎಂದು ಅವರು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ, ಡಿಸಿಎಂ ನಡುವೆ ಬೂದಿ ಮುಚ್ಚಿದ ಕೆಂಡದ ಪರಿಸ್ಥಿತಿ: ಸಂಸದ ಜಗದೀಶ್ ಶೆಟ್ಟರ್
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಮತ್ತು ಬೆಳಗಾವಿ ವಿಭಜನೆ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹತ್ವದ ಮಾಹಿತಿ