ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರಿ ನೌಕರಿ: ಅಧಿಕೃತ ಆದೇಶ

Published : Sep 16, 2022, 09:00 AM IST
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರಿ ನೌಕರಿ: ಅಧಿಕೃತ ಆದೇಶ

ಸಾರಾಂಶ

ಕಳೆದ ಆ.15ರಂದು ನಡೆದ 75ನೇ ಸ್ವಾತಂತ್ರ್ಯೋತ್ಸವದ ಸಮಾರಂಭದಲ್ಲಿ ಈ ಬಗ್ಗೆ ಘೋಷಣೆ ಮಾಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 

ಬೆಂಗಳೂರು(ಸೆ.16):  ಕರ್ತವ್ಯನಿರತ ಸಮಯದಲ್ಲಿ ಹುತಾತ್ಮರಾದ ಯೋಧರ ಕುಟುಂಬದ ಅವಲಂಬಿತ ಸದಸ್ಯರಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ನೌಕರಿ ಕಲ್ಪಿಸುವ ಸಂಬಂಧ ಸರ್ಕಾರವು ಆದೇಶ ಹೊರಡಿಸಿದೆ.
ಕಳೆದ ಆ.15ರಂದು ನಡೆದ 75ನೇ ಸ್ವಾತಂತ್ರ್ಯೋತ್ಸವದ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಬಗ್ಗೆ ಘೋಷಣೆ ಮಾಡಿದ್ದರು. ಬಳಿಕ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿಯೂ ತೀರ್ಮಾನ ಕೈಗೊಳ್ಳಲಾಗಿತ್ತು. ಅದರಂತೆ ಇದೀಗ ಸರ್ಕಾರದಿಂದ ಆದೇಶ ಹೊರಬಿದ್ದಿದೆ.

ಕರ್ತವ್ಯದ ಸಮಯದಲ್ಲಿ ಯೋಧರು ಹುತಾತ್ಮರಾದರೆ ಅವರ ಕುಟುಂಬದ ಸದಸ್ಯರಿಗೆ ಜೀವನ ಭದ್ರತೆ ಕಲ್ಪಿಸುವ ಉದ್ದೇಶದಿಂದ ಅನುಕಂಪದ ಆಧಾರದ ಮೇಲೆ ಸರ್ಕಾರಿ ನೌಕರಿ ಕಲ್ಪಿಸುವ ತೀರ್ಮಾನ ಮಾಡಲಾಗಿದೆ. ವೀರಮರಣವನ್ನಪ್ಪಿದ ಯೋಧರ ಕುಟುಂಬದ ಸದಸ್ಯರಿಗೆ ಆಸರೆಯಾಗಿ ನಿಲ್ಲುವ ಉದ್ದೇಶದಿಂದ ಅವರ ಅವಲಂಬಿತರಲ್ಲಿ ಒಬ್ಬರಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ಕೆಲಸ ನೀಡಲು ಸರ್ಕಾರವು ಅನುಮೋದನೆ ನೀಡಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರಿ ಸೌಕರಿ

ರಾಜ್ಯದಲ್ಲಿ ಒಟ್ಟು 400 ಯೋಧರು ಕರ್ತವ್ಯದ ವೇಳೆ ಹುತಾತ್ಮರಾಗಿದ್ದು, ಈ ಪೈಕಿ 200 ಹುತಾತ್ಮ ಯೋಧರ ಕುಟುಂಬದ ಸದಸ್ಯರು ಸರ್ಕಾರಿ ನೌಕರಿಗೆ ಅರ್ಹ ಇದ್ದಾರೆ. ಅವರಿಗೆ ಸರ್ಕಾರಿ ಉದ್ಯೋಗ ನೀಡಲು ಕ್ರಮ ವಹಿಸಲಾಗುವುದು. ಇದೇ ವೇಳೆ ಮೃತ ಯೋಧರ ಕುಟುಂಬದವರಿಗೆ 25 ಲಕ್ಷ ರು. ಪರಿಹಾರ ಮತ್ತು ನಿವೇಶನ ನೀಡಲಾಗುತ್ತಿದ್ದು, ಇದೀಗ ಪರಿಹಾರ ಬದಲಿಗೆ ಕುಟುಂಬದ ಸದಸ್ಯರಿಗೆ ಸರ್ಕಾರಿ ನೌಕರಿ ನೀಡಲಾಗುವುದು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ದಶದಿಕ್ಕುಗಳಿಂದ ಕರ್ನಾಟಕಕ್ಕೆ ಡ್ರಗ್ಸ್‌ ಗಂಡಾಂತರ
Karnataka News Live: 4,808 ಕೋಟಿ ವೆಚ್ಚದಲ್ಲಿ ರಸ್ತೆಗಳ ಅಭಿವೃದ್ಧಿ