ಮುಂದುವರಿದ ಶಕ್ತಿ ಯೋಜನೆ ಅವಾಂತರ: ಸೀಟು ಹಿಡಿಯಲು ಹೋದ ವೃದ್ಧ ಬಸ್ಸಿನ ಚಕ್ರಕ್ಕೆ ಸಿಲುಕಿ ತೀವ್ರ ಗಾಯ!

Published : Nov 28, 2023, 08:46 AM IST
ಮುಂದುವರಿದ ಶಕ್ತಿ ಯೋಜನೆ ಅವಾಂತರ: ಸೀಟು ಹಿಡಿಯಲು ಹೋದ ವೃದ್ಧ ಬಸ್ಸಿನ ಚಕ್ರಕ್ಕೆ ಸಿಲುಕಿ ತೀವ್ರ ಗಾಯ!

ಸಾರಾಂಶ

ಬಸ್ಸಿನಲ್ಲಿ ಸೀಟು ಹಿಡಿಯಲು ಹೋಗಿ ಆಯತಪ್ಪಿ ಬಿದ್ದು ವ್ಯಕ್ತಿಯೊಬ್ಬ ಬಸ್ ಚಕ್ರಕ್ಕೆ ಸಿಲುಕಿದ ಘಟನೆ ವಿಜಯನಗರದ ಕೊಟ್ಟೂರು ಪಟ್ಟಣದ ಬಸ್‌ನಿಲ್ದಾಣದಲ್ಲಿ ನಡೆದಿದೆ. ವೃದ್ಧ  ಬಸವರಾಜಪ್ಪ , ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿ.

ವಿಜಯನಗರ (ನ.28): ಬಸ್ಸಿನಲ್ಲಿ ಸೀಟು ಹಿಡಿಯಲು ಹೋಗಿ ಆಯತಪ್ಪಿ ಬಿದ್ದು ವ್ಯಕ್ತಿಯೊಬ್ಬ ಬಸ್ ಚಕ್ರಕ್ಕೆ ಸಿಲುಕಿದ ಘಟನೆ ವಿಜಯನಗರದ ಕೊಟ್ಟೂರು ಪಟ್ಟಣದ ಬಸ್‌ನಿಲ್ದಾಣದಲ್ಲಿ ನಡೆದಿದೆ.

ವೃದ್ಧ  ಬಸವರಾಜಪ್ಪ , ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿ. ನಡುಮಾವಿನಹಳ್ಳಿ ಗ್ರಾಮದ  ಬಸವರಾಜಪ್ಪಕೆಲಸದ ನಿಮಿತ್ತ ಕೊಟ್ಟೂರು ಪಟ್ಟಣಕ್ಕೆ ಬಂದಿದ್ದಾನೆ. ಶಕ್ತಿ ಯೋಜನೆ ಜಾರಿಯಾದ ಬಳಿಕ ಬಸ್ ಗಳು ತುಂಬಿತುಳುಕುವುದರಿಂದ ಸೀಟು ಸಿಗದೆ ಪರದಾಟ. ಈ ಪರದಾಟ ತಪ್ಪಿಸಲು ಬಸ್ ಬರುತ್ತಿದ್ದಂತೆ ಸೀಟು ಹಿಡಿಯಲು ಮುಂದಾಗಿದ್ದ ವೃದ್ಧ  ಬಸವರಾಜಪ್ಪ ಆಯಾತಪ್ಪಿ ಕೆಳಗೆ ಬಿದ್ದಿದ್ದಾನೆ. ಸಂಡೂರು ಘಟಕಕ್ಕೆ ಸೇರಿದ KA 35 F 353 ಸಂಖ್ಯೆಯ ಬಳ್ಳಾರಿ - ಸಂಡೂರು ಹರಪನಹಳ್ಳಿ ಮಾರ್ಗ ಸಂಚರಿಸುವ ಬಸ್. ಚಲಿಸುವ ವೇಳೆ ಬಸ್ಸಿನ ಚಕ್ರ ಬಸವರಾಜಪ್ಪರ ಕಾಲು ಮೇಲೆ ಹತ್ತಿದೆ.

ಮನೆ ಕರೆಂಟ್ ಬಿಲ್ ಹೆಚ್ಚಿಗೆ ಬಂದಿದ್ದಕ್ಕೆ ಕೈ ಕಾಲು ಮುರಿದುಕೊಂಡು ಆಸ್ಪತ್ರೆ ಸೇರಿದ ವ್ಯಕ್ತಿ!

ಕರೆ ಮಾಡಿದ್ರೂ ಸ್ಥಳಕ್ಕೆ ಬಾರದ ಆಂಬುಲೆನ್ಸ್:

ಬಸ್ಸಿನ ಚಕ್ರಕ್ಕೆ ಸಿಲುಕಿ ತೀವ್ರ ಗಾಯಗೊಂಡಿದ್ದ ವೃದ್ಧನನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಬಳಿಕ ಆಂಬುಲೆನ್ಸ್ ಗೆ ಕರೆ ಮಾಡಿದ್ರೂ ಸ್ಥಳಕ್ಕೆ ಬಾರದ ಆಂಬುಲೆನ್ಸ್. ಅಂಬುಲೆನ್ಸ್ ಕಾದರೂ ಬಾರದ ಹಿನ್ನೆಲೆ ಬಳಿಕ ಬಸ್‌ನಲ್ಲಿಯೇ ವೃದ್ಧನನ್ನು ಸಮುದಾಯ ಆರೋಗ್ಯ ಕೇಂದ್ರ ರವಾನಿಸಿದ ಸ್ಥಳೀಯರು. ಗಂಭೀರವಾಗ ಗಾಯಗೊಂಡಿರುವುದರಿಂದ ಹೆಚ್ಚಿನ ಚಿಕಿತ್ಸೆಗೆ ದಾವಣಗೆರೆಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಶಕ್ತಿ ಯೋಜನೆ ಎಫೆಕ್ಟ್: ಸಾರಿಗೆ ಸಿಬ್ಬಂದಿಗಿಲ್ಲ ವೇತನ ಗ್ಯಾರಂಟಿ, ಪಗಾರ ಸಿಗದೆ ಪರದಾಟ..!

ಕೊಟ್ಟೂರು ಬಸ್ ನಿಲ್ದಾಣದ ಸುತ್ತ ಜನಸಂದಣಿ. ಅದರಲ್ಲೂ ಶಕ್ತಿಯೋಜನೆ ಜಾರಿಯಾದ ಬಳಿಕ ಬಸ್ ಗಳು ಫುಲ್ ರಶ್. ಸೀಟಿಗಾಗಿ ಇಲ್ಲಿ ಆಗಾಗ ಜಗಳಗಳು ನಡೆಯುತ್ತವೆ.  ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ರೂ ಅಧಿಕಾರಿಗಳ ನಿರ್ಲಕ್ಷ್ಯ. ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಇದೀಗ ಮತ್ತೊಂದು ಆಪಘಾತ ಸಂಭವಿಸಿದೆ ಎಂದು ಸಾರ್ವಜನಿಕರು ಸಾರಿಗೆ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊಟ್ಟೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಲೀಚೆಟ್ ಸಂಸ್ಕರಣಾ ಘಟಕ:ಬೆಂಗಳೂರಲ್ಲಿ ಜಟಿಲವಾಗಿರುವ ಕಸದ ಸಮಸ್ಯೆಗೆ ಕೊನೆಗೂ ಮುಕ್ತಿ !
ಇಂಡಿಗೋ ವಿಮಾನ ರದ್ದು, ಬೆಂಗ್ಳೂರು ಏರ್‌ಪೋರ್ಟ್‌ನಲ್ಲಿ ನೂಕು ನುಗ್ಗಲು, ಟಿಕೆಟ್ ಬೆಲೆ 15ರಿಂದ 80,000ಕ್ಕೆ ಏರಿಕೆ