Omicron Crisis Karnataka : ಸಿಎಂ ಮಹತ್ವದ ಸಭೆ - ರಾಜ್ಯದಲ್ಲಿ ಟಫ್ ರೂಲ್ಸ್

Suvarna News   | Asianet News
Published : Dec 26, 2021, 10:26 AM ISTUpdated : Dec 26, 2021, 10:57 AM IST
Omicron  Crisis Karnataka  :  ಸಿಎಂ ಮಹತ್ವದ ಸಭೆ - ರಾಜ್ಯದಲ್ಲಿ ಟಫ್ ರೂಲ್ಸ್

ಸಾರಾಂಶ

ಹೈ ವೋಲ್ಟೇಜ್ ಓಮಿಕ್ರಾನ್ ಮೀಟಿಂಗ್ - ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ಸಭೆಗೆ ಆಗಮಿಸಿದ ಸುಧಾಕರ್, ಅಶೋಕ್, ಗೃಹ ಸಚಿವ ಅರಗ ಜ್ಞಾನೇಂದ್ರ, ಭಾಗಿ

ಬೆಂಗಳೂರು (ಡಿ.26): ರಾಜ್ಯದಲ್ಲಿ ಒಮಿಕ್ರಾನ್ (Omicron) ಆತಂಕ ದಿನದಿನವೂ ಎರಿಕೆಯಾಗುತ್ತಲೇ ಇದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai)  ಹೈ ವೋಲ್ಟೇಜ್ ಓಮಿಕ್ರಾನ್ ಮೀಟಿಂಗ್ (Meeting) ಕರೆದಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಯುತ್ತಿದ್ದು ರಾಜ್ಯದಲ್ಲಿ ಟಫ್ ರೂಲ್ಸ್ ಜಾರಿ ಮಾಡಲಾಗುತ್ತಿದೆ.  ನೈಟ್ ಕರ್ಫ್ಯೂ ಬಗ್ಗೆ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ. ಡಿ.28ರಿಂದ 10 ದಿನ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.  ಜನವರಿ 6ರವರೆಗೆ ನೈಟ್ ಕರ್ಫ್ಯೂ ಇರಲಿದೆ. ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆವರೆಗೆ ಸಂಪೂರ್ಣ ಬಂದ್ ಮಾಡಲಾಗುತ್ತದೆ. 

ನಿಯಮ ಮೀರಿದಲ್ಲಿ ಕಠಿಣ ಕ್ರಮ ಜರುಗಿಸಲಾಗುತ್ತಿದೆ. ಅಲ್ಲದೇ  ಕರ್ಫ್ಯೂ ಸಂದರ್ಭದಲ್ಲಿ ಎಲ್ಲವೂ ಸಂಪೂರ್ಣ ಬಂದ್ ಆಗಲಿದೆ. ಹಗಲು ಹೊತ್ತಿನಲ್ಲಿ ಕೆಲ ಸೇವೆಗಳಿಗೆ 50 :50 ಅವಕಾಶ ಕಲ್ಪಿಸಲಾಗಿದೆ. 

ಸಿಎಂ ನೇತೃತ್ವದಲ್ಲಿ ಕೆಲ  ಸಭೆ ನಡೆಯುತ್ತಿದ್ದು, ಹೊಸ ವರ್ಷಾಚರಣೆಗೆ ಹೊಸ ರೂಲ್ಸ್ (Rules) ಜಾರಿಯಾಗಲಿದೆ. ನೈಟ್ ಕರ್ಫ್ಯೂ ಹೇರುವ ಸಂಬಂಧ   ನಿರ್ಣಯ ಕೈಗೊಳ್ಳಲಿದ್ದಾರೆ.  ಸಭೆಯಲ್ಲಿ ಸುಧಾಕರ್, ಅಶೋಕ್, ಗೃಹ ಸಚಿವ ಅರಗ ಜ್ಞಾನೇಂದ್ರ, ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್, ಶಿಕ್ಷಣ ಇಲಾಖೆ ಕಮೀಷನರ್, ಆರೋಗ್ಯ ಇಲಾಖೆಯ ಪ್ರಮುಖ ಅಧಿಕಾರಿಗಳು ಭಾಗಿಯಾಗಿದ್ದಾರೆ. 

"

ರಾಜ್ಯದಲ್ಲಿಯೂ ಒಮಿಕ್ರಾನ್ ಸ್ಫೋಟ : 

ವಿದೇಶಗಳಿಂದ ಕಳೆದ ವಾರ ರಾಜ್ಯಕ್ಕೆ ಆಗಮಿಸಿದ 9 ಪ್ರಯಾಣಿಕರು ಹಾಗೂ ಅವರ ಕುಟುಂಬದ (Family)  ಮೂವರು ಸೇರಿ 12 ಮಂದಿಯಲ್ಲಿ ಒಮಿಕ್ರೋನ್‌ ಸೋಂಕು ಗುರುವಾರ ದೃಢಪಟ್ಟಿದೆ. 12 ಮಂದಿಯಲ್ಲಿ ಇಬ್ಬರು ಬಾಲಕಿಯರೂ ಇದ್ದಾರೆ. ಇದರೊಂದಿಗೆ ರಾಜ್ಯದಲ್ಲಿ (Karnataka) ಈ ರೂಪಾಂತರಿ ಸೋಂಕಿತರ ಒಟ್ಟು ಸಂಖ್ಯೆ 31ಕ್ಕೆ ಏರಿಕೆಯಾಗಿದೆ. ಡಿ.18ರಂದು ಒಂದೇ ದಿನ 6 ಪ್ರಕರಣ ಪತ್ತೆಯಾಗಿದ್ದು ಈವರೆಗಿನ ಗರಿಷ್ಠ ಆಗಿತ್ತು. ಇದೀಗ ಒಂದೇ ದಿನ ಅದರ ದುಪ್ಪಟ್ಟು ಪ್ರಕರಣಗಳು ದೃಢಪಟ್ಟಿದೆ. ಹೈರಿಸ್ಕ್‌ ದೇಶಗಳಿಂದ ರಾಜ್ಯಕ್ಕೆ ಬಂದವರು ಮತ್ತು ಅವರ ಸಂಪರ್ಕಿತ ಸ್ಥಳೀಯರಲ್ಲಿ ಒಮಿಕ್ರೋನ್‌ (Omicron) ಸೋಂಕು ಹೆಚ್ಚಳವಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

"

ಡಿ.17ರಂದು ಲಂಡನ್‌ನಿಂದ (London) ಬೆಂಗಳೂರಿಗೆ ಬಂದ ಐದು ಪ್ರಯಾಣಿಕರು (12 ವರ್ಷದ ಬಾಲಕಿ ಸೇರಿ), ಡೆನ್ಮಾರ್ಕ್ ಮತ್ತು ನೈಜೀರಿಯಾದಿಂದ ಬೆಂಗಳೂರಿಗೆ (Bengaluru) ಬಂದ ತಲಾ ಒಬ್ಬರು ವಯಸ್ಕರು, ಸ್ವಿಜರ್ಲೆಂಡ್‌ನಿಂದ ಮೈಸೂರಿಗೆ ಬಂದ 9 ವರ್ಷದ ಮಗು ಹಾಗೂ ಘಾನಾದಿಂದ ಮಂಗಳೂರಿಗೆ ಬಂದಿದ್ದ ಒಬ್ಬರಲ್ಲಿ ರೂಪಾಂತರಿ ದೃಢಪಟ್ಟಿದೆ. ಜತೆಗೆ ವಿದೇಶದಿಂದ ಬಂದ ಸೋಂಕಿತರೊಬ್ಬರ ಕುಟುಂಬದ ಮೂರು ಮಂದಿಯಲ್ಲಿ ಒಮಿಕ್ರೋನ್‌ ಪತ್ತೆಯಾಗಿದೆ.

ಡಿ.1ರಿಂದ 22ವರೆಗೂ 6 ವಿದೇಶಿ ಪ್ರಯಾಣಿಕರು, 13 ಸ್ಥಳೀಯರು ಸೇರಿ 19 ಮಂದಿಯಲ್ಲಿ ಒಮಿಕ್ರೋನ್‌ ಪತ್ತೆಯಾಗಿತ್ತು. ವಿದೇಶದಿಂದ ಬಂದವರಿಗಿಂತ ಸ್ಥಳೀಯರಲ್ಲೇ ರೂಪಾಂತರಿ ಹೆಚ್ಚು ಕಾಣಿಸಿಕೊಂಡು ಆತಂಕ ಮೂಡಿಸಿತ್ತು. ಆದರೆ, ಕಳೆದ ಒಂದು ವಾರದಿಂದ ವಿದೇಶದಿಂದ ಬರುತ್ತಿರುವವರಲ್ಲಿ ಕೊರೋನಾ ಹೆಚ್ಚು ಪತ್ತೆಯಾಗುತ್ತಿದೆ. ಅವರೆಲ್ಲರನ್ನು ವಂಶವಾಹಿ ಪರೀಕ್ಷೆಗೆ ಒಳಪಡಿಸಲಾಗಿದ್ದು, ಹಲವರಲ್ಲಿ ಒಮಿಕ್ರೋನ್‌ ಕಾಣಿಸಿಕೊಳ್ಳುತ್ತಿದೆ.

ಯಾರಿಗೂ ಸೋಂಕು ಲಕ್ಷಣ ಇಲ್ಲ:

12 ಸೋಂಕಿತರಲ್ಲಿ ಬೌರಿಂಗ್‌, ವೆನ್ಲಾಕ್‌ ಆಸ್ಪತ್ರೆಗೆ (Hospital) ತಲಾ ಒಬ್ಬರು ದಾಖಲಾಗಿದ್ದರೆ, 10 ಮಂದಿ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಯಾರೊಬ್ಬರಿಗೂ ಸೋಂಕಿನ ಲಕ್ಷಣಗಳಿಲ್ಲ. ಎಲ್ಲರ ಆರೋಗ್ಯಸ್ಥಿರವಾಗಿದೆ. ಸರ್ಕಾರದ ನಿಯಮದಂತೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 10 ದಿನಗಳ ಆಸ್ಪತ್ರೆ ಚಿಕಿತ್ಸೆ ಬಳಿಕ ಎರಡು ಬಾರಿ ಪರೀಕ್ಷೆ ನಡೆಸಿ ನೆಗೆಟಿವ್‌ ಬಂದ ಬಳಿಕ ಬಿಡುಗಡೆ ಮಾಡಲಾಗುವುದು ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಒಂದೇ ಕುಟುಂಬದ ನಾಲ್ವರಿಗೆ ಸೋಂಕು:

ಡಿ.12ರಂದು ಇಂಗ್ಲೆಂಡ್‌ನಿಂದ ಬೆಂಗಳೂರಿಗೆ ಬಂದಿದ್ದ ಪ್ರಯಾಣಿಕರೊಬ್ಬರಿಗೆ ಸೋಂಕು ದೃಢಪಟ್ಟಿತ್ತು. ಅವರ ತಂಗಿ (22), ತಂದೆ (56), ತಾಯಿ(54)ಗೆ ಒಮಿಕ್ರೋನ್‌ ತಗುಲಿದೆ. ಈ ಮೂಲಕ ಒಂದೇ ಕುಟುಂಬದ ನಾಲ್ಕು ಮಂದಿಯೂ ಸೋಂಕಿತರಾಗಿದ್ದು, ಮಣಿಪಾಲ್‌ ಆಸ್ಪತ್ರೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಏಳು ಜಿಲ್ಲೆಗೆ ಹಬ್ಬಿದ ಸೋಂಕು:

ಈ ಹಿಂದೆ ಬೆಂಗಳೂರು, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಧಾರವಾಡ, ಬೆಳಗಾವಿ ಸೇರಿ ಆರು ಜಿಲ್ಲೆಗಳಲ್ಲಿ ಒಮಿಕ್ರೋನ್‌ ಪತ್ತೆಯಾಗಿತ್ತು. ಡಿ.19ರಂದು ಸ್ವಿಜರ್ಲೆಂಡ್‌ನಿಂದ ಮೈಸೂರಿಗೆ ಬಂದಿದ್ದ 9 ವರ್ಷದ ಬಾಲಕಿಗೆ ಒಮಿಕ್ರೋನ್‌ ದೃಢವಾಗಿದೆ. ಈ ಮೂಲಕ ಒಮಿಕ್ರೋನ್‌ ಕಾಣಿಸಿಕೊಂಡ ಜಿಲ್ಲೆಗಳ ಸಂಖ್ಯೆ 7ಕ್ಕೆ ಹೆಚ್ಚಳವಾಗಿದೆ.

ಸೋಂಕಿತನಿಗೆ 6 ಜಿಲ್ಲೆ ಸಂಪರ್ಕ:

ಡಿ.15ರಂದು ಘಾನಾದಿಂದ ಮಂಗಳೂರಿಗೆ ಬಂದಿದ್ದ ಸೋಂಕಿತನಿಗೆ ವಿಮಾನ ನಿಲ್ದಾಣದಲ್ಲಿ ಸೋಂಕು ದೃಢಪಟ್ಟಿದೆ. ಆತನಿಗೆ ತಗುಲಿರುವುದು ಒಮಿಕ್ರೋನ್‌ ಎಂದು ಪತ್ತೆಯಾಗಿದ್ದು, ಪ್ರಾಥಮಿಕ ಸಂಪರ್ಕ ಹೊಂದಿದ್ದ ದಕ್ಷಿಣ ಕನ್ನಡದ 17, ಉಡುಪಿಯ 5, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ ಹಾಗೂ ಮೈಸೂರಿನ ತಲಾ ಒಬ್ಬರನ್ನು ಗುರುತಿಸಿ ಸೋಂಕು ಪರೀಕ್ಷೆಗೊಳಪಡಿಸಲಾಗಿದೆ. ದಕ್ಷಿಣ ಕನ್ನಡದ 17 ಮಂದಿಯಲ್ಲಿ ಯಾರೊಬ್ಬರಲ್ಲೂ ಸೋಂಕು ಕಾಣಿಸಿಕೊಂಡಿಲ್ಲ.

ವಿದೇಶದಿಂದ ಬಂದ 40 ಮಂದಿಗೆ ಸೋಂಕು

ಒಮಿಕ್ರೋನ್‌ ಹೆಚ್ಚಿರುವ ಹೈರಿಸ್ಕ್‌ ದೇಶಗಳಿಂದ ಡಿ.1 ರಿಂದ 22ವರೆಗೂ ರಾಜ್ಯಕ್ಕೆ 12 ಸಾವಿರಕ್ಕೂ ಅಧಿಕ ಪ್ರಯಾಣಿಕರು ಆಗಮಿಸಿದ್ದಾರೆ. ಈ ಪೈಕಿ 40 ಮಂದಿಯಲ್ಲಿ ತಪಾಸಣೆ ವೇಳೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಈ ಪೈಕಿ 30 ಮಂದಿ ವಂಶವಾಹಿ ವರದಿ ಬಂದಿದ್ದು, 15 ಮಂದಿಗೆ ತಗುಲಿರುವುದು ಒಮಿಕ್ರೋನ್‌ ರೂಪಾಂತರಿ ಎಂದು ದೃಢಪಟ್ಟಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!
'ಅಫಿಡವಿಟ್‌ನಲ್ಲಿ ಡಿಕ್ಲೇರ್ ಮಾಡಿದ್ದರೂ ಟೀಕೆ 'ಚಿಲ್ಲರ್ ಕೆಲಸ': ಸಿಎಂ ಡಿಸಿಎಂ ದುಬಾರಿ ವಾಚ್ ಬಗ್ಗೆ ಬಿಜೆಪಿ ಹೇಳಿಕೆಗೆ ಕಾಶೆಪ್ಪನವರು ಕಿಡಿ