Breaking: ಕರ್ನಾಟಕದಲ್ಲಿ ಮತ್ತೊಂದು ಕೊರೋನಾ ಕೇಸ್ ಪತ್ತೆ

Published : Mar 15, 2020, 07:31 PM ISTUpdated : Mar 15, 2020, 08:11 PM IST
Breaking: ಕರ್ನಾಟಕದಲ್ಲಿ ಮತ್ತೊಂದು ಕೊರೋನಾ ಕೇಸ್ ಪತ್ತೆ

ಸಾರಾಂಶ

ಕರ್ನಾಟಕದಲ್ಲಿ ಮತ್ತೊಂದು ಕೊರೋನಾ ವೈರಸ್ ಪತ್ತೆಯಾಗಿದೆ. ಈ ಬಗ್ಗೆ ಆರೋಗ್ಯ ಸಚಿವ ಶ್ರೀರಾಮುಲು ಅಧಿಕೃತವಾಗಿ ತಿಳಿಸಿದ್ದಾರೆ. ಮತ್ತೊಂದು ಕೊರೋನಾ ಕೇಸ್ ಪತ್ತೆಯಾಗಿದ್ದೇಲ್ಲಿ..? ಈ ಕೆಳಗಿನಂತಿದೆ ವಿವರ

ಕಲಬುರಗಿ, (ಮಾ.15): ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ವೈರಸ್​ ಸೋಂಕು ಪತ್ತೆಯಾಗಿದೆ. ಕೆಲ ದಿನಗಳ ಹಿಂದಷ್ಟೇ ಕೊರೋನಾದಿಂದ ಬಳಲುತ್ತಿದ್ದ 76 ವರ್ಷದ ವೃದ್ಧರೊಬ್ಬರು ಮೃತಪಟ್ಟಿದ್ದರು. ಇಂದು (ಭಾನುವಾರ) ಅವರ ಕುಟುಂಬದ ಮತ್ತೊಬ್ಬ ಸದಸ್ಯರಲ್ಲಿಯೇ ಕೊರೋನಾ ಕಾಣಿಸಿಕೊಂಡಿದೆ. 

ಕೊರೋನಾಗೆ ವೃದ್ಧ ಬಲಿ: ತುರ್ತು ಸಂದರ್ಭ ನಿಭಾಯಿಸುವಲ್ಲಿ ಕಲಬುರಗಿ ಜಿಲ್ಲಾಡಳಿತ ನಿರ್ಲಕ್ಷ್ಯ?

ಈ ಬಗ್ಗೆ ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್​ ಮೂಲಕ ಖಚಿತಪಡಿಸಿದ್ದಾರೆ. ಇನ್ನು ಮೃತಪಟ್ಟ ವೃದ್ಧನಿಗೆ ಕೊರೊನಾ ಸೋಂಕು ತಗುಲಿತ್ತು ಅನ್ನೋ ಮಾಹಿತಿ ತಿಳಿಯುತ್ತಿದ್ದಂತೆ ಅಧಿಕಾರಿಗಳು ಎಚ್ಚೆತ್ತುಕೊಂಡು ಅವರ ಕುಟುಂಬಸ್ಥರನ್ನ ತಪಾಸಣೆಗೆ ಒಳಪಡಿಸಿದ್ದರು. 

ಮೃತ ವ್ಯಕ್ತಿಯ ಮನೆಯ ನಾಲ್ವರು ಸದಸ್ಯರ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಲಾಗಿತ್ತು.  ತಪಾಸಣೆಗೆ ಒಳಗಾಗಿದ್ದ ನಾಲ್ವರು ಸದಸ್ಯರ ಪೈಕಿಯಲ್ಲಿ ಮೂವರಿಗೆ ಕೊರೋನಾ ಇಲ್ಲ ಎಂದು ಶನಿವಾರ ಬಂದ ವರದಿಯಲ್ಲಿ ಸಾಬೀತಾಗಿತ್ತು. 

ಮಹಾಮಾರಿ ಕರೋನಾಗೆ ಕರ್ನಾಟಕದಲ್ಲೇ ಮೊದಲ ಬಲಿ..ಎಚ್ಚರ ಎಚ್ಚರ

ಅಲ್ಲದೇ ಒಂದು ರಿಪೋರ್ಟ್ ಬರೋದು ಬಾಕಿ ಇತ್ತು. ಅದು ಭಾನುವಾರ ರಿಪೋರ್ಟ್ ಬಂದಿದ್ದು, ಮೃತ ವೃದ್ಧನ ಮಗಳಿಗೆ ಕೊರೋನಾ ಪಾಜಿಟೀವ್ ಇರುವುದು ​ದೃಢಪಟ್ಟಿದೆ.ಈ ಮೂಲಕ ರಾಜ್ಯದಲ್ಲಿ ಕೊರೋನಾ ಪೀಡಿತರ ಸಂಖ್ಯೆ 7ಕ್ಕೆ ಏರಿಕೆಯಾದಂತಾಗಿದ್ದು, ಕಲಬುರಗಿ ಜನರಲ್ಲಿ ಇದು ದಿನದಿಂದ ದಿನಕ್ಕೆ ಆತಂಕಕ್ಕೆ ಕಾರಣವಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌