ಬೈಕ್‌ಗೆ ಗುದ್ದಿ ಬಸ್‌ ನಿಲ್ದಾಣಕ್ಕೆ ನುಗ್ಗಿದ ಬಸ್‌: ಓರ್ವ ಸಾವು

Kannadaprabha News   | Asianet News
Published : Sep 07, 2020, 08:19 AM IST
ಬೈಕ್‌ಗೆ ಗುದ್ದಿ ಬಸ್‌ ನಿಲ್ದಾಣಕ್ಕೆ ನುಗ್ಗಿದ ಬಸ್‌: ಓರ್ವ ಸಾವು

ಸಾರಾಂಶ

ಹೆಸರುಘಟ್ಟ ಮುಖ್ಯರಸ್ತೆಯ 8ನೇ ಮೈಲಿ ಬಸ್‌ ನಿಲ್ದಾಣದಲ್ಲಿ ಘಟನೆ| ಖಾಸಗಿ ಬಸ್‌ ಚಾಲಕ ದೇವರಾಜ್‌ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ| ಘಟನೆಯಲ್ಲಿ ಐವರಿಗೆ ಗಂಭೀರ ಗಾಯ, ಖಾಸಗಿ ಆಸ್ಪತ್ರೆಗೆ ದಾಖಲು| 

ಬೆಂಗಳೂರು(ಸೆ.07): ಖಾಸಗಿ ಬಸ್‌ವೊಂದು ನಿಲ್ದಾಣ ಬಳಿ ನಿಂತಿದ್ದ ಪ್ರಯಾಣಿಕರಿಗೆ ಡಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕನೊಬ್ಬ ಮೃತಪಟ್ಟು, ಐವರು ಗಾಯಗೊಂಡಿರುವ ಘಟನೆ ಎಂಟನೇ ಮೈಲಿ ಸಮೀಪ ಭಾನುವಾರ ರಾತ್ರಿ ಸಂಭವಿಸಿದೆ.

ಮೃತರನ್ನು ಲಿಂಗಸೂರು ಮೂಲದ ಜ್ಞಾನಪ್ಪ ಎಂದು ಗುರುತಿಸಲಾಗಿದೆ. ಖಾಸಗಿ ಬಸ್‌ ಚಾಲಕ ದೇವರಾಜ್‌ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಲಾಗಿದೆ ಎಂದು ಪೀಣ್ಯ ಸಂಚಾರ ಠಾಣೆ ಪೊಲೀಸರು ಹೇಳಿದ್ದಾರೆ.

ಲಾರಿ - ಕಾರು ಡಿಕ್ಕಿ : ಮೂವರು ಸ್ಥಳದಲ್ಲೇ ಸಾವು

ಭಾನುವಾರ ರಾತ್ರಿ ಏಳು ಗಂಟೆ ಸುಮಾರಿಗೆ ಪ್ರಯಾಣಿಕರು ಹೆಸರುಘಟ್ಟ ಮುಖ್ಯರಸ್ತೆಯ ಎಂಟನೇ ಮೈಲಿ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಯುತ್ತಾ ನಿಂತಿದ್ದರು. ಈ ವೇಳೆ ವೇಗವಾಗಿ ಬಂದ ಖಾಸಗಿ ಬಸ್‌ ಮುಂದೆ ಹೋಗುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ನಿಲ್ದಾಣಕ್ಕೆ ನುಗ್ಗಿದೆ. ಪರಿಣಾಮ ಬಸ್‌ ನಿಲ್ದಾಣದಲ್ಲಿ ಕುಳಿತಿದ್ದ ಜ್ಞಾನಪ್ಪ ಗಂಭೀರವಾಗಿ ಗಾಯಗೊಂಡು, ಸ್ಥಳದಲ್ಲಿಯೇ ಅಸು ನೀಗಿದ್ದಾರೆ. ಉಳಿದು ಐವರಿಗೆ ಗಂಭೀರ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್‌ ಚಾಲಕನ ಅಜಾಗರೂಕತೆಯೇ ಘಟನೆಗೆ ಕಾರಣ ಎಂದು ತಿಳಿದು ಬಂದಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Bengaluru: 75 ಕೋಟಿ ರು. ವೆಚ್ಚದಲ್ಲಿ ಹೊಸ ಹೈ ಪರ್ಫಾರ್ಮೆನ್ಸ್‌ ಸೆಂಟರ್; NIPER ಸ್ಥಾಪನೆಗೆ ಕೇಂದ್ರಕ್ಕೆ ಮನವಿ
ಜೈಲಿನಿಂದ ಹೊರಬಂದ ಶಾಸಕ ಪಪ್ಪಿ: ನಟ ದರ್ಶನ್‌ ಭೇಟಿ, ಡಿಕೆ ಶಿವಕುಮಾರ್ ಬಗ್ಗೆ ಹೇಳಿದ್ದೇನು?