ರಾಜ್ಯದಲ್ಲಿ ಯಾವ ಸರ್ಕಾರ ಬಂದ್ರೂ ಇವೆರಡು ಖಾತೆ ಒಟ್ಟಿಗಿರಲಿ : ಸುಧಾಕರ್

Kannadaprabha News   | Asianet News
Published : Jan 26, 2021, 08:39 AM IST
ರಾಜ್ಯದಲ್ಲಿ ಯಾವ ಸರ್ಕಾರ ಬಂದ್ರೂ ಇವೆರಡು ಖಾತೆ ಒಟ್ಟಿಗಿರಲಿ : ಸುಧಾಕರ್

ಸಾರಾಂಶ

ರಾಜ್ಯದಲ್ಲಿ  ಯಾವುದೇ ಸರ್ಕಾರ ಬರಲಿ ಆರೋಗ್ಯ ಮತ್ತು  ವೈದ್ಯಕೀಯ ಶಿಕ್ಷಣ ಎರಡನ್ನು ಒಬ್ಬರೆ ನಿರ್ವಹಣೆ ಮಾಡಬೇಕು ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದರು. 

 ಬೆಂಗಳೂರು (ಜ.26):  ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಎರಡೂ ಖಾತೆಗಳು ಒಬ್ಬರ ಬಳಿಯೇ ಇದ್ದರೆ ನಿರ್ವಹಣೆ ಮಾಡುವುದು ಸುಲಭ. ಯಾರಿಗೇ ಕೊಡಲಿ ಆದರೆ ಒಬ್ಬರಿಗೇ ಎರಡೂ ಖಾತೆ ನೀಡಬೇಕು. ಮುಂದೆ ಯಾವುದೇ ಸರ್ಕಾರ ಬಂದರೂ ಹೀಗೆಯೇ ಇರಬೇಕು ಎಂಬುದು ನನ್ನ ಅಭಿಪ್ರಾಯ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ಹೇಳಿದ್ದಾರೆ.

 ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನಾ ಲಸಿಕೆ ಅಭಿಯಾನದ ಹಿನ್ನೆಲೆಯಲ್ಲಿ ಎರಡೂ ಇಲಾಖೆ ಸಮನ್ವಯದಿಂದ ಕೆಲಸ ಮಾಡಬೇಕು. ಯಾರಿಗೇ ಆದರೂ ಕೊಡಲಿ, ಆದರೆ ಒಬ್ಬರಿಗೇ ಖಾತೆ ನೀಡಲಿ. ಕೊರೋನಾ ತಾರ್ಕಿಕ ಅಂತ್ಯ ಕಾಣಲು ಇದು ಶಾಶ್ವತವಾಗಿ ಒಂದಾಗಬೇಕು. ಮುಂದೆ ಯಾವುದೇ ಸರ್ಕಾರ ಬಂದರೂ ಹೀಗೆಯೇ ಇರಬೇಕು ಎಂದು ಅಭಿಪ್ರಾಯಪಟ್ಟರು.

ಬ್ರಿಟನ್‌ ವೈರಸ್‌ ಬಗ್ಗೆ ಯಾವುದೇ ಆತಂಕ ಇಲ್ಲ: ಸಚಿವ ಸುಧಾಕರ್‌ ...

ಖಾತೆಗಳ ಹಂಚಿಕೆ ಪ್ರಹಸನದ ಬಗ್ಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳಿಗೆ ಕಠಿಣ ಸವಾಲಿದೆ. ಲಭ್ಯವಿರುವ ಖಾತೆಯನ್ನು ಹಂಚುವುದು ಸಾಹಸದ ಕೆಲಸ. ಈಗ ನಮ್ಮ ಮುಂದೆ ಅತಿ ಹೆಚ್ಚು ಜನರಿಗೆ ಲಸಿಕೆ ನೀಡುವ ಸವಾಲಿದೆ. ಅದನ್ನು ಹೇಳುತ್ತಿದ್ದೇನೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಧರ್ಮಸ್ಥಳ ವಿರುದ್ಧ ಷಡ್ಯಂತ್ರದ ಬಗ್ಗೆ ಅಂದೇ ಹೇಳಿದ್ದೆ : ಡಿ.ಕೆ.ಶಿವಕುಮಾರ್‌
ಶಾಲಾ-ಕಾಲೇಜು ಹುಡುಗಿಯರಿಗೂ ಋತುಚಕ್ರ ರಜೆ?: ಸಂಪುಟ ಸಭೆಯಲ್ಲಿ ಕಾಯ್ದೆಗೆ ಅನುಮೋದನೆ ಸಾಧ್ಯತೆ