
ಬೆಂಗಳೂರು(ಫೆ.19): ಬೆಂಗಳೂರು ಏರ್ ಶೋಗೂ ಮುನ್ನವೇ ಭಾರೀ ಅವಘಢ ಸಂಭವಿಸಿದ್ದು, ಎರಡು ಲಘು ವಿಮಾನಗಳು ಡಿಕ್ಕಿ ಹೊಡೆದ ಪರಿಣಾಮ ಓರ್ವ ಪೈಲೆಟ್ ಮೃತಪಟ್ಟಿರುವ ಘಟನೆ ನಡೆದಿದೆ.
ಏರ್ ಶೋಗೆ ತಾಲೀಮು ನಡೆಸುತ್ತಿದ್ದ ವಾಯುಸೇನೆಯ ಸೂರ್ಯ ಕಿರಣ್ ಲಘು ವಿಮಾನಗಳು, ಆಗಸದಲ್ಲೇ ಪರಸ್ಪರ ಡಿಕ್ಕಿ ಹೊಡೆದಿವೆ. ಕೂಡಲೇ ಪ್ಯಾರಾಚೂಟ್ ಸಹಾಯದಿಂದ ಎರಡೂ ವಿಮಾನಗಳ ಪೈಲೆಟ್ಗಳು ವಿಮಾನದಿಂದ ಜಂಪ್ ಮಾಡಿದ್ದರು.
"
ಆದರೆ ಓರ್ವ ಪೈಲೆಟ್ ಮನೆಯ ಮೇಲೆ ಬಿದ್ದಿದ್ದರಿಂದ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಏರ್ ಶೋಗೆ ತಾಲೀಮು ನಡೆಸುತ್ತಿದ್ದ ಲಘು ವಿಮಾನ ಅಪಘಾತ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ