80ರ ಗಡಿ ಮುಟ್ಟಿದ ಈರುಳ್ಳಿ ದರ: ಬೆಲೆ ಕೇಳಿದ್ರೆ ಗ್ರಾಹಕರ ಕಣ್ಣಲ್ಲಿ ನೀರು ಬರೋದು ಗ್ಯಾರಂಟಿ!

Published : Oct 09, 2024, 05:00 AM IST
80ರ ಗಡಿ ಮುಟ್ಟಿದ ಈರುಳ್ಳಿ ದರ: ಬೆಲೆ ಕೇಳಿದ್ರೆ ಗ್ರಾಹಕರ ಕಣ್ಣಲ್ಲಿ ನೀರು ಬರೋದು ಗ್ಯಾರಂಟಿ!

ಸಾರಾಂಶ

ದರ ಹೆಚ್ಚಿರುವ ಕಾರಣ ತೇವಾಂಶ ಇರುವ ಈರುಳ್ಳಿಯನ್ನೂ ರೈತರು ಮಾರುಕಟ್ಟೆಗೆ ತರುತ್ತಿದ್ದಾರೆ. ಹೀಗಾಗಿ ಹೆಚ್ಚಿನ ಸರಬರಾಜು ಆಗುತ್ತಿರುವಂತೆ ಕಂಡುಬರುತ್ತಿದೆ. ಆದರೆ, ವಾಸ್ತವವಾಗಿ ರಾಜ್ಯದಲ್ಲಿ ಹೆಚ್ಚು ಈರುಳ್ಳಿ ಇಲ್ಲ. ಮಳೆಯಿಂದ ನಾಶವಾಗಿವೆ. ಮುಂದಿನ ದಿನಗಳಲ್ಲಿ ಇಷ್ಟು ಪ್ರಮಾಣದಲ್ಲಿ ಬರುವುದಿಲ್ಲ. ಸಹಜವಾಗಿ ದರ ಮತ್ತಷ್ಟು ಹೆಚ್ಚಲಿದೆ.   

ಬೆಂಗಳೂರು(ಅ.09): ದಿನದಿಂದ ದಿನಕ್ಕೆ ದರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರ ನಗರದ ಕೃಷಿ ಉತ್ಪನ್ನ ಮಾರುಕಟ್ಟೆಗಳಿಗೆ ಒಂದು ಲಕ್ಷ ಚೀಲಕ್ಕೂ ಅಧಿಕ ಈರುಳ್ಳಿ ಪೂರೈಕೆಯಾಗಿದ್ದು, ಚಿಲ್ಲರೆ ಮಾರುಕಟ್ಟೆಯಲ್ಲಿ ಕೇಜಿಗೆ ₹75- 80ಕ್ಕೆ ಮಾರಾಟವಾಗಿದೆ. ಬೆಲೆ ಮತ್ತಷ್ಟು ಹೆಚ್ಚುವ ಆತಂಕ ಗ್ರಾಹಕರನ್ನು ಕಾಡುತ್ತಿದೆ. 

ದರ ಏರಿಕೆಯಲ್ಲಿ ಸ್ಪರ್ಧೆಗೆ ಬಿದ್ದಂತಿರುವ ತರಕಾರಿಗಳು ದಿನೇ ದಿನೇ ಗ್ರಾಹಕರ ಜೇಬಿಗೆ ಕತ್ತರಿ ಹಾಕುತ್ತಿವೆ. ಮಹಾರಾಷ್ಟ್ರದಿಂದಲೇ ಈರುಳ್ಳಿ ಹೊತ್ತು ತಂದ 500ಕ್ಕೂ ಹೆಚ್ಚು ಲಾರಿಗಳು ಸೇರಿ ಒಟ್ಟಾರೆ 980 ಲಾರಿಗಳು ನಗರಕ್ಕೆ ಬಂದಿವೆ. ಯಶವಂತಪುರ ಕೃಷಿ ಉತ್ಪನ್ನ ಮಾರುಕಟ್ಟೆಗೆ 95,783, ದಾಸನಪುರ ಮಾರುಕಟ್ಟೆಗೆ 4,427 ಚೀಲ ಈರುಳ್ಳಿ ತಂದಿದ್ದವು. ಸಗಟು ಮಾರುಕಟ್ಟೆಯಲ್ಲಿ ಮಹಾರಾಷ್ಟ್ರದಿಂದ ಬಂದಿದ್ದ ಹಳೆ ಈರುಳ್ಳಿ ಕ್ವಿಂಟಲ್‌ಗೆ ಬರೋಬ್ಬರಿ ₹5200ವರೆಗೆ ಗರಿಷ್ಠ ದರಕ್ಕೆ ಹರಾಜಾಯಿತು. ಕನಿಷ್ಠ ದರವೇ ₹3500.

ಕೇವಲ 15 ದಿನದಲ್ಲಿ ಮತ್ತೆ 400ಕ್ಕೆ ತಲುಪಿದ ಬೆಳ್ಳುಳ್ಳಿ ಬೆಲೆ!

ಕರ್ನಾಟಕದ ಹೊಸ ಈರುಳ್ಳಿಗೂ ಉತ್ತಮ ದರವಿದ್ದು, ಒಂದೇ ದಿನ ಇಟ್ಟು ಖರ್ಚು ಮಾಡಬೇಕಾದಂತಹ ಮೂರನೇ ದರ್ಜೆ ಈರುಳ್ಳಿಗೂ ಕ್ವಿಂಟಲ್‌ಗೆ ₹2800 ಯಿಂದ ಉತ್ತಮ ಗುಣಮಟ್ಟದ ಈರುಳ್ಳಿಗೆ ಗರಿಷ್ಠ ₹4000 ದರವಿತ್ತು. ಇದರ ಪರಿಣಾಮ ಒಂದೆರಡು ದಿನಗಳಲ್ಲೇ ಚಿಲ್ಲರೆ ಮಾರುಕಟ್ಟೆಯಲ್ಲಿ ಕಂಡುಬರಲಿದ್ದು, ದರ ಇನ್ನಷ್ಟು ಹೆಚ್ಚಲಿದೆ ಎಂದು ವರ್ತಕರು ಹೇಳಿದ್ದಾರೆ. 

ದರ ಹೆಚ್ಚಿರುವ ಕಾರಣ ತೇವಾಂಶ ಇರುವ ಈರುಳ್ಳಿಯನ್ನೂ ರೈತರು ಮಾರುಕಟ್ಟೆಗೆ ತರುತ್ತಿದ್ದಾರೆ. ಹೀಗಾಗಿ ಹೆಚ್ಚಿನ ಸರಬರಾಜು ಆಗುತ್ತಿರುವಂತೆ ಕಂಡುಬರುತ್ತಿದೆ. ಆದರೆ, ವಾಸ್ತವವಾಗಿ ರಾಜ್ಯದಲ್ಲಿ ಹೆಚ್ಚು ಈರುಳ್ಳಿ ಇಲ್ಲ. ಮಳೆಯಿಂದ ನಾಶವಾಗಿವೆ. ಮುಂದಿನ ದಿನಗಳಲ್ಲಿ ಇಷ್ಟು ಪ್ರಮಾಣದಲ್ಲಿ ಬರುವುದಿಲ್ಲ. ಸಹಜವಾಗಿ ದರ ಮತ್ತಷ್ಟು ಹೆಚ್ಚಲಿದೆ ಎಂದು ವರ್ತಕರು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌