ಈರುಳ್ಳಿ ಬೆಲೆ ಭಾರೀ ಇಳಿಕೆ : ಗ್ರಾಹಕರಲ್ಲಿ ಸಂತಸ

Kannadaprabha News   | Asianet News
Published : Apr 03, 2021, 08:31 AM IST
ಈರುಳ್ಳಿ ಬೆಲೆ ಭಾರೀ ಇಳಿಕೆ : ಗ್ರಾಹಕರಲ್ಲಿ ಸಂತಸ

ಸಾರಾಂಶ

ಈರುಳ್ಳಿ ಬೆಲೆ ಅತ್ಯಂತ ಕಡಿಮೆಯಾಗಿದ್ದು ಇದರಿಂದ ಗ್ರಾಹಕರ ಮೊಗದಲ್ಲಿ ಸಂತಸ ಮೂಡಿದೆ.  ಅತ್ಯಂಡ ಕಡಿಮೆ ದರಕ್ಕೆ ಈರುಳ್ಳಿ ಬೆಲೆ ಇಳಿಕೆಯಾಗಿದೆ. 

  ಬೆಂಗಳೂರು (ಏ.03):  ರಾಜ್ಯಕ್ಕೀಗ ಈರುಳ್ಳಿ ಹೆಚ್ಚಿನ ಪ್ರಮಾಣದಲ್ಲಿ ಪೂರೈಕೆ ಆಗುತ್ತಿರುವುದರಿಂದ ಮಾರುಕಟ್ಟೆಯಲ್ಲಿ ಬೆಲೆ ಸ್ಥಿರತೆ ಕಾಯ್ದುಕೊಂಡಿದ್ದು, ಗ್ರಾಹಕರ ಮೊಗದಲ್ಲಿ ಸಂತಸ ಮೂಡಿಸಿದೆ.

ಈ ವರ್ಷ ಮಹಾರಾಷ್ಟ್ರದಲ್ಲಿ ಈರುಳ್ಳಿ ಫಸಲು ಉತ್ತಮವಾಗಿದೆ. ಹಾಗೇ ವಿಜಯಪುರ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲೂ ಬೆಳೆ ಚೆನ್ನಾಗಿ ಬಂದಿದೆ. ಹೀಗಾಗಿ ರಾಜ್ಯದ ಮಾರುಕಟ್ಟೆಗಳಿಗೆ ಬೇಡಿಕೆಗೆ ತಕ್ಕಷ್ಟುಬರುತ್ತಿರುವುದರಿಂದ ಬೆಲೆ ಕಡಿಮೆಯಿದೆ.

ಹಾಪ್‌ಕಾಮ್ಸ್‌ಗಳಲ್ಲಿ ದಪ್ಪ ಈರುಳ್ಳಿ ಕೆ.ಜಿ. 27 ರು.ಗೆ ಮಾರಾಟವಾಗುತ್ತಿದೆ. ಇನ್ನು ಬೆಂಗಳೂರು ನಗರದ ಸಗಟು ಮಾರುಕಟ್ಟೆಯಲ್ಲಿ ಗುಣಮಟ್ಟಕ್ಕೆ ಆಧರಿಸಿ ಕೆ.ಜಿ.ಗೆ 5 ರು.ನಿಂದ 16 ರು.ವರೆಗೆ ಬೆಲೆ ನಿಗದಿಯಾಗಿದೆ. ಚಿಲ್ಲರೆ ಮಾರುಕಟ್ಟೆಗಳಲ್ಲಿ ಕೆ.ಜಿ. ಈರುಳ್ಳಿ 15 ರು.ನಿಂದ. 25 ರು.ವರೆಗೆ ಖರೀದಿಯಾಗುತ್ತಿದೆ.

ಕುಡಿಯೊಡೆದ ಈರುಳ್ಳಿ, ಬೆಳ್ಳುಳ್ಳಿ ಎಸೆಯೋ ಮುನ್ನ ಪ್ಲೀಸ್ ಇಲ್ ಕೇಳಿ .

ರಾಜ್ಯದಲ್ಲಿ ಎರಡನೇ ಬೆಳೆ ಬಂದಿದೆ. ಮಹಾರಾಷ್ಟ್ರದಿಂದಲೂ ಸಾಕಷ್ಟುಈರುಳ್ಳಿ ಬರುತ್ತಿದೆ. ಹೀಗಾಗಿ ಒಂದರಿಂದ ಎರಡು ತಿಂಗಳು ಬೆಲೆಯಲ್ಲಿ ಹೆಚ್ಚಿನ ವ್ಯತ್ಯಾಸವಾಗುವುದಿಲ್ಲ. ಪೂರೈಕೆ ಕಡಿಮೆಯಾದರೆ ಮಾತ್ರ ಬೆಲೆ ಹೆಚ್ಚಾಗಲಿದೆ ಎಂದು ಎಪಿಎಂಸಿ ಆಲೂಗಡ್ಡೆ ಮತ್ತು ಈರುಳ್ಳಿ ವರ್ತಕರ ಸಂಘದ ಪ್ರಧಾನ ಕಾರ್ಯದರ್ಶಿ ಉದಯಶಂಕರ್‌ ಹೇಳುತ್ತಾರೆ.

ಯಶವಂತಪುರ ಮಾರುಕಟ್ಟೆಗೆ 50,718 ಬ್ಯಾಗ್‌ಗಳು, ದಾಸನಪುರ ಮಾರುಕಟ್ಟೆಗೆ 1,365 ಬ್ಯಾಗ್‌ಗಳು ಸೇರಿದಂತೆ ಒಟ್ಟಾರೆ ಶುಕ್ರವಾರ 260 ಟ್ರಕ್‌ಗಳಲ್ಲಿ 52,083 ಬ್ಯಾಗ್‌ ಈರುಳ್ಳಿ ಬಂದಿದೆ. ಮಹಾರಾಷ್ಟ್ರದ ಅತ್ಯುತ್ತಮ ಗುಣಮಟ್ಟದ ಈರುಳ್ಳಿ 1,300-1,400 ರು., ಉತ್ತಮ 1,200-1,300 ರು., ಮಧ್ಯಮ 1,000ದಿಂದ 1,100 ರು. ಇದೆ. ರಾಜ್ಯದ ಈರುಳ್ಳಿ ಕ್ವಿಂಟಲ್‌ಗೆ 500 ರು. ನಿಂದ 1,600 ರು.ವರೆಗೆ ಬೆಲೆ ನಿಗದಿಯಾಗಿದೆ. ಆಲೂಗಡ್ಡೆ 100 ಕೆ.ಜಿ.ಗೆ 800ರಿಂದ 1400 ರು.ವರೆಗೆ ಬೆಲೆ ಇದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ವರುಣಾ ಜನತೆಯ ಋಣ ತೀರಿಸಲು ಸಾಧ್ಯವಿಲ್ಲ, ಆದರೂ ಶ್ರಮಿಸುವೆ: ಯತೀಂದ್ರ ಸಿದ್ದರಾಮಯ್ಯ
ಮಹಾಮೇಳಾವ್ ಅನುಮತಿ ನಿರಾಕರಣೆ: ನಾಡದ್ರೋಹಿ ಎಂಇಎಸ್ ‌ಪುಂಡರಿಗೆ ಶಾಕ್ ಕೊಟ್ಟ ಬೆಳಗಾವಿ ಜಿಲ್ಲಾಡಳಿತ