ಕರ್ನಾಟಕದಲ್ಲಿ ಹತೋಟಿಗೆ ಬಂದ ಕೊರೋನಾ: ಇಲ್ಲಿದೆ ಅ.17ರ ಅಂಕಿ-ಸಂಖ್ಯೆ

Published : Oct 17, 2021, 07:13 PM IST
ಕರ್ನಾಟಕದಲ್ಲಿ ಹತೋಟಿಗೆ ಬಂದ ಕೊರೋನಾ: ಇಲ್ಲಿದೆ ಅ.17ರ ಅಂಕಿ-ಸಂಖ್ಯೆ

ಸಾರಾಂಶ

* ರಾಜ್ಯದಲ್ಲಿ ಹತೋಟಿಗೆ ಬಂದ ಕೊರೋನಾ  * ಸಾವಿನ ಸಂಖ್ಯೆ, ಪಾಸಿಟಿವ್‌ ಕೇಸ್‌ನಲ್ಲಿ ಭಾರೀ ಇಳಿಕೆ * ರಾಜ್ಯ ಆರೋಗ್ಯ ಇಲಾಖೆಯಿಂದ ಮಾಹಿತಿ  

ಬೆಂಗಳೂರು, (ಅ.17): ಕರ್ನಾಟಕದಲ್ಲಿ (Karnataka) ಕೊರೋನಾ ಸೋಂಕು (Coroanvirus) ಹತೋಟಿಗೆ ಬಂದಿದೆ. ಇಂದು (ಅ.17) ಹೊಸದಾಗಿ ಕೇವಲ 326 ಪಾಸಿಟಿವ್ ಕೇಸ್ (Passtive Case) ಪತ್ತೆಯಾಗಿದ್ದು, 4 ಜನರು ಮಾತ್ರ ಸಾವನ್ನಪ್ಪಿದ್ದಾರೆ. 

ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 29,83,459 ಕ್ಕೆ ಏರಿಕೆಯಾಗಿದ್ರೆ, ಈವರೆಗೆ ಕೊರೊನಾದಿಂದ 37,941 ಜನ ಸಾವನ್ನಪ್ಪಿದ್ದಾರೆ. 

ಮಹಾ, ಕೇರಳ ಗಡಿ ನಿರ್ಬಂಧ ಸಡಿಲಿಕೆ ಶೀಘ್ರ : ಸಿಎಂ

 ಸೋಂಕಿತರ ಪೈಕಿ 29,36,039 ಜನ ಗುಣಮುಖರಾಗಿ (recovery) ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ 9,450 ಜನರಲ್ಲಿ ಸಕ್ರಿಯ ಪ್ರಕರಣಗಳಿವೆ (Active Cases). ಇನ್ನು ಪಾಸಿಟಿವಿಟಿ(positivity) ದರ 0.41%ರಷ್ಟು ಇದೆ  ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ (Bengaluru) ಇಂದು (ಭಾನುವಾರ) ಒಂದೇ ದಿನ 173 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದ್ದು, ಸೋಂಕಿನಿಂದ ಒಬ್ಬರು ಮಾತ್ರ ಬಲಿಯಾಗಿದ್ದಾರೆ.
 
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಒಟ್ಟ 12,49,418 ಸೋಂಕಿತರ ಪೈಕಿ 12,26,390 ಜನರು ಗುಣಮುಖರಾಗಿದ್ದು, 6,817 ಸಕ್ರಿಯ ಕೇಸ್ ಇವೆ.

ಜಿಲ್ಲಾವಾರು ಕೊರೋನಾ ಪ್ರಕರಣಗಳು
ಬಾಗಲಕೋಟೆ 0, ಬಳ್ಳಾರಿ 1, ಬೆಳಗಾವಿ 4, ಬೆಂಗಳೂರು ಗ್ರಾಮಾಂತರ 5, ಬೆಂಗಳೂರು ನಗರ 173, ಬೀದರ್ 0, ಚಾಮರಾಜನಗರ 1, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 3, ಚಿತ್ರದುರ್ಗ 1, ದಕ್ಷಿಣ ಕನ್ನಡ 22, ದಾವಣಗೆರೆ 0, ಧಾರವಾಡ 4, ಗದಗ 0, ಹಾಸನ 12, ಹಾವೇರಿ 0, ಕಲಬುರಗಿ 1, ಕೊಡಗು 8, ಕೋಲಾರ 5, ಕೊಪ್ಪಳ 0, ಮಂಡ್ಯ 4, ಮೈಸೂರು 42, ರಾಯಚೂರು 1, ರಾಮನಗರ 0, ಶಿವಮೊಗ್ಗ 5, ತುಮಕೂರು 17, ಉಡುಪಿ 12, ಉತ್ತರ ಕನ್ನಡ 4, ವಿಜಯಪುರ 0, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

'ನಿಮ್ಮ ಸುರಕ್ಷತೆ ನನಗೂ ಮುಖ್ಯ..' ಮಹಿಳಾ ಪ್ರಯಾಣಿಕರ ಮನ ಗೆದ್ದ ಆಟೋ ಚಾಲಕ, ಸಂದೇಶ ವೈರಲ್ ಮಾಡಿದ ಬೆಂಗಳೂರು ಪೊಲೀಸರು!
ರಾಜ್ಯದಲ್ಲಿ ಕೈ ಮೀರಿದ ಕಳ್ಳರ ಹಾವಳಿ, ಕಾನೂನು ವ್ಯವಸ್ಥೆ ಸಂಪೂರ್ಣ ವಿಫಲ? ಪೊಲೀಸರ ಮನೆಗಳನ್ನೇ ಬಿಡುತ್ತಿಲ್ಲ ಖದೀಮರು!