
ಬೆಂಗಳೂರು(ಏ.26): ಕೋವಿಡ್ ನಿಯಂತ್ರಣ ಮಾರ್ಗಸೂಚಿ ಆದೇಶವನ್ನು ಕೊಂಚ ಪರಿಷ್ಕರಿಸಿರುವ ರಾಜ್ಯ ಸರ್ಕಾರ ಅಂತ್ಯಕ್ರಿಯೆಯಲ್ಲಿ ಗರಿಷ್ಠ 20 ಜನರ ಬದಲು ಕೇವಲ ಐದು ಜನರು ಮಾತ್ರ ಭಾಗವಹಿಸಬಹುದು ಎಂದು ತಿಳಿಸಿದೆ.
ರಾಜ್ಯವನ್ನು ಭೀಕರವಾಗಿ ಕಾಡುತ್ತಿರುವ ಕೋವಿಡ್ ಎರಡನೇ ಅಲೆ ನಿಯಂತ್ರಣಕ್ಕೆ ಏ.21ರಿಂದ ನೈಟ್ ಕರ್ಫ್ಯೂ ಮತ್ತು ಶುಕ್ರವಾರ ರಾತ್ರಿ 9ರಿಂದ ಸೋಮವಾರ ಬೆಳಗ್ಗೆ 6ರವರೆಗೆ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಿ ಆದೇಶ ಮಾಡಿತ್ತು.
ಕೊರೋನಾ ಇದೆಯಾ? ಇವರನ್ನು ಸಂಪರ್ಕಿಸಿ
ಈ ಆದೇಶದಲ್ಲಿ ಯಾವುದೇ ಮೃತ ವ್ಯಕ್ತಿಗಳ ಅಂತ್ಯಕ್ರಿಯೆಯಲ್ಲಿ ಗರಿಷ್ಠ 20 ಜನರು ಭಾಗವಹಿಸಲು ಅವಕಾಶ ನೀಡಲಾಗಿತ್ತು. ಈಗ ಅದನ್ನು ಮಾರ್ಪಡಿಸಿ ಕೇವಲ ಐದು ಜನರಿಗೆ ಮಿತಿಗೊಳಿಸಿ ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ) ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್ ಭಾನುವಾರ ಆದೇಶ ಹೊರಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ