ನಮ್ಮ ಶಿಕ್ಷಣ ವ್ಯವಸ್ಥೆಯೇ ಸರಿಯಿಲ್ಲ, ಇದು ಪ್ರಜ್ಞಾಹೀನ ವ್ಯವಸ್ಥೆ: ನಿರ್ಭಯಾನಂದ ಸರಸ್ವತಿ ಸ್ವಾಮೀಜಿ

Published : Jan 30, 2024, 08:56 AM IST
ನಮ್ಮ ಶಿಕ್ಷಣ ವ್ಯವಸ್ಥೆಯೇ ಸರಿಯಿಲ್ಲ, ಇದು ಪ್ರಜ್ಞಾಹೀನ ವ್ಯವಸ್ಥೆ: ನಿರ್ಭಯಾನಂದ ಸರಸ್ವತಿ ಸ್ವಾಮೀಜಿ

ಸಾರಾಂಶ

ಈಗಿರುವ ನಮ್ಮ ಶಿಕ್ಷಣ ವ್ಯವಸ್ಥೆಯನ್ನು ನಾವು ಮಾಡಿದ್ದಲ್ಲ. ಬ್ರಿಟಿಷರು ಮಾಡಿದ ಶಿಕ್ಷಣ ವ್ಯವಸ್ಥೆಯನ್ನು 75 ವರ್ಷಗಳಿಂದ ಮುಂದುರಿಸಿಕೊಂಡು ಹೊರಟಿದ್ದಾರೆ ಎಂದು ಗದಗ ವಿಜಯಪೂರ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಶ್ರೀ ನಿರ್ಭಯಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.

ಬಾದಾಮಿ (ಜ.30): ಈಗಿರುವ ನಮ್ಮ ಶಿಕ್ಷಣ ವ್ಯವಸ್ಥೆಯನ್ನು ನಾವು ಮಾಡಿದ್ದಲ್ಲ. ಬ್ರಿಟಿಷರು ಮಾಡಿದ ಶಿಕ್ಷಣ ವ್ಯವಸ್ಥೆಯನ್ನು 75 ವರ್ಷಗಳಿಂದ ಮುಂದುರಿಸಿಕೊಂಡು ಹೊರಟಿದ್ದಾರೆ ಎಂದು ಗದಗ ವಿಜಯಪೂರ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಶ್ರೀ ನಿರ್ಭಯಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.

ಭಾನುವಾರ ವಿಶ್ವಚೇತನ ಸಂಸ್ಥೆ ವತಿಯಿಂದ ನಗರದ ಶಿವಯೋಗಮಂದಿರ ಶಾಖಾಮಠದ ಆವರಣದಲ್ಲಿ ಹಮ್ಮಿಕೊಂಡಿದ್ದ ನಮ್ಮ ಭವ್ಯ ಭಾರತ ಉಪನ್ಯಾಸ ನೀಡಿದರು. ಅಮೆರಿಕದವರು ಪ್ರಜ್ಞಾವಂತರಾಗುವುದಕ್ಕೆ ಮತ್ತು ಭಾರತೀಯರು ಪ್ರಜ್ಞಾಹೀನರಾಗುವುದಕ್ಕೆ ಅನೇಕ ಕಾರಣಗಳಿವೆ. ನಮ್ಮಲ್ಲಿರುವ ಅರ್ಥಹೀನ ವ್ಯವಸ್ಥೆ ಬೇರೆ ಯಾವ ದೇಶದಲ್ಲೂ ಇಲ್ಲ ಎಂದರು.

 

ರಾಮಮಂದಿರಕ್ಕೆ ಸಿಎಂ ಯಾವತ್ತಾದ್ರೂ ಹೋಗ್ಲಿ, 'ನಾನೂ ರಾಮಭಕ್ತ' ಅಂದ್ರಲ್ಲ ಅಷ್ಟು ಸಾಕು: ನಿರ್ಭಯಾನಂದಶ್ರೀ

ಈ ದೇಶವನ್ನು ಉದ್ಧಾರವಾಗುವುದಕ್ಕೆ ಬಿಡಬಾರದು ಎಂದು ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ಇವರು ಏಳಿಗೆ ಆಗಬಾರದು ಎಂದು ಹಳೆಯ ಶಿಕ್ಷಣ ವ್ಯವಸ್ಥೆ ಮುಂದುವರಿಸಿಕೊಂಡು ಹೋಗುತ್ತಿದ್ದಾರೆ. ಎಲ್ಲ ಸಾಹಿತಿಗಳು ವಿಜ್ಞಾನ ವಿಷಯ ಓದಿಲ್ಲ. ಎಲ್ಲರೂ ಕಲಾ ವಿಭಾಗ ಓದಿದವರು. ಯಾರೂ ಪುಸ್ತಕ ಓದುವ ಗೋಜಿಗೆ ಹೋಗುವುದಿಲ್ಲ. ಇಂದು ಹೇಳುವ ಇತಿಹಾಸದ ಪಾಠದಲ್ಲಿ ನಮ್ಮ ಭಾರತದ ಸೋಲಿನ ನಕಾರಾತ್ಮಕ ಭಾವನೆ ಮಕ್ಕಳಲ್ಲಿ ಬಿಂಬಿಸುತ್ತೇವೆ. ಅದೇ ಬೇರೆ ದೇಶದಲ್ಲಿ ನಮ್ಮ ದೇಶದ ಬಗ್ಗೆ ಒಳ್ಳೆಯ ಭಾವನೆ ಪಾಠ ಹೇಳುತ್ತಾರೆ. ನಮ್ಮ ದೇಶದಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.ಸಂಸ್ಥೆಯ ಕಾರ್ಯದರ್ಶಿ ಇಷ್ಟಲಿಂಗ ಶಿರಶಿ ಸ್ವಾಗತಿಸಿದರು. ಉಜ್ವಲ ಬಸರಿ ನಿರೂಪಿಸಿ ವಂದಿಸಿದರು.

ನಾನೂ ರಾಮಭಕ್ತ, ಕರಸೇವಕ ನನ್ನನ್ನೂ ಬಂಧಿಸಿ: ಪೊಲೀಸ್ ಠಾಣೆ ಮೆಟ್ಟಿಲಲ್ಲಿ ಕುಳಿತು ಸಿ.ಟಿ.ರವಿ ಪ್ರತಿಭಟನೆ


ನಮ್ಮ ರಾಮಕೃಷ್ಣ ಆಶ್ರಮ ಯಾವುದೇ ರಾಜಕೀಯ ಪಕ್ಷದ ಸಂಬಂಧ ಹೊಂದಿಲ್ಲ. ನಮ್ಮಲ್ಲಿ ಪಕ್ಷಾತೀತವಾಗಿದೆ. ಸಂಸ್ಥೆಯ ಬಗ್ಗೆ ನಾವು ಇದ್ದದ್ದನ್ನು ಹೇಳುತ್ತೇವೆ

-ಶ್ರೀ ನಿರ್ಭಯಾನಂದ ಸರಸ್ವತಿ ಸ್ವಾಮೀಜಿ, ರಾಮಕೃಷ್ಣ ಆಶ್ರಮ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌