ಜನರ ಬೇಜವಾಬ್ದಾರಿ, ಪೌರಕಾರ್ಮಿಕರಿಗೆ ಸೋಂಕಿನ ಭೀತಿ!

Published : May 04, 2020, 07:38 AM ISTUpdated : May 04, 2020, 08:17 AM IST
ಜನರ ಬೇಜವಾಬ್ದಾರಿ, ಪೌರಕಾರ್ಮಿಕರಿಗೆ ಸೋಂಕಿನ ಭೀತಿ!

ಸಾರಾಂಶ

ಕಸದ ಜೊತೆ ಮಾಸ್ಕ್‌ಗಳ ಮಿಶ್ರಣ| ಪೌರಕಾರ್ಮಿಕರಿಗೆ ಸೋಂಕಿನ ಭೀತಿ| ಅವೈಜ್ಞಾನಿಕ ಕ್ರಮದಿಂದ ಪೌರಕಾರ್ಮಿಕರಲ್ಲಿ ದುಗುಡ

ಬೆಂಗಳೂರು(ಮೇ.04): ಕೊರೋನಾ ಸೋಂಕು ಭೀತಿಯಿಂದ ನಗರದಲ್ಲಿ ಲಕ್ಷಾಂ​ತರ ಮಂದಿ ಮಾಸ್ಕ್‌ ಬಳಸುತ್ತಿದ್ದು, ಸಾರ್ವಜನಿಕರು ಬಳಕೆ ಮಾಡಿದ ಮಾಸ್ಕ್‌ಗಳನ್ನು ರಸ್ತೆಯಲ್ಲಿ ಎಸೆಯುವ, ತ್ಯಾಜ್ಯದಲ್ಲಿ ಮಿಶ್ರಣ ಮಾಡುತ್ತಿರುವ ಪರಿಣಾಮ ಬಿಬಿಎಂಪಿ ಪೌರ ಕಾರ್ಮಿಕರಿಗೆ ಇದೀಗ ಕೊರೋನಾ ಸೋಂಕು ತಗುಲುವ ಆತಂಕ ಎದುರಾಗಿದೆ.

ಬಿಬಿಎಂಪಿಯ 39 ವಾರ್ಡ್‌ಗಳಲ್ಲಿ ಈವರೆಗೆ ಕೊರೋನಾ ಸೋಂಕು ಪ್ರಕರಣ ಪತ್ತೆಯಾಗಿವೆ. ಅದ​ರಲ್ಲಿ ಈಗಾಗಲೇ 16 ವಾರ್ಡ್‌ಗಳಲ್ಲಿ ಕಳೆದ 28 ದಿನ​ಗಳಿಂದ ಹೊಸದಾಗಿ ಸೋಂಕು ಪ್ರಕರಣ ಪತ್ತೆಯಾ​ಗಿಲ್ಲ. ಇನ್ನು 23 ವಾರ್ಡ್‌ಗಳನ್ನು ಕಂಟೈನ್ಮೆಂಟ್‌ ಮಾಡಿ​ಲಾಗಿದೆ. ಈ ಎಲ್ಲ ವಾರ್ಡ್‌ಗಳು ಸೇರಿದಂತೆ 198 ವಾರ್ಡ್‌ಗಳಲ್ಲಿ ಇರುವ ಸಾರ್ವಜನಿಕರು ಕೊರೋನಾ ಸೋಂಕಿನಿಂತ ಬಚಾವ್‌ ಆಗುವುದಕ್ಕೆ ಮಾಸ್ಕ್‌ಗಳನ್ನು ಬಳಕೆ ಮಾಡುತ್ತಿದ್ದಾರೆ.

ದಾವಣಗೆರೆಯಲ್ಲಿ 21 ಕೇಸ್‌ ಸ್ಫೋಟ: ರಾಜ್ಯದಲ್ಲಿ ಒಂದೇ ದಿನ 34 ಮಂದಿಗೆ ಸೋಂಕು!

ಆದರೆ, ಬಳಕೆ ಮಾಡಿದ ಮಾಸ್ಕ್‌ಗಳನ್ನು ಸಾರ್ವಜನಿಕರು ರಸ್ತೆಯಲ್ಲಿ ಎಸೆಯುವುದು, ಹಸಿ ಮತ್ತು ಒಣ ಕಸದಲ್ಲಿ ಮಿಶ್ರಣ ಮಾಡಿ ಪೌರಕಾರ್ಮಿಕರಿಗೆ ನೀಡುತ್ತಿದ್ದಾರೆ. ಪೌರಕಾರ್ಮಿಕರು ಈ ಮಾಸ್ಕ್‌ಗಳನ್ನು ತ್ಯಾಜ್ಯದಿಂದ ಪ್ರತ್ಯೇಕ ಮಾಡಬೇಕಾಗಿದೆ. ಹೀಗಾಗಿ ಪೌರಕಾರ್ಮಿಕರಿಗೂ ಕೊರೋನಾ ಸೋಂಕು ಹರಡುವ ಭೀತಿ ಇದೀಗ ಎದುರಾಗಿದೆ.

ಈ ಸಂಬಂಧ ಪ್ರತಿಕ್ರಿಯೆ ನೀಡಿದ ಬಿಬಿಎಂಪಿ ವಿಶೇಷ ಆಯುಕ್ತ (ಘನತ್ಯಾಜ್ಯ ನಿರ್ವಹಣೆ) ರಂದೀಪ್‌, ಸಾರ್ವಜನಿಕರು ತಮ್ಮ ಜವಾಬ್ದಾರಿ ಅರಿತುಕೊಂಡು ಕಸ ನೀಡಬೇಕು. ಇಂತಹ ಕಠಿಣ ಸಂದರ್ಭದಲ್ಲೂ ಪೌರ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಇವರ ಆರೋಗ್ಯ ಕಾಳಜಿಯ ಬಗ್ಗೆ ಬಿಬಿಎಂಪಿಯೊಂದಿಗೆ ಸಾರ್ವಜನಿಕರು ಚಿಂತಿಸಬೇಕು ಎಂದಿದ್ದಾರೆ.

ಕಂಟೈನ್ಮೆಂಟ್‌ ಪ್ರದೇಶದಲ್ಲಿ ಕಸ ಸಂಗ್ರಹಿಸುವ ಪೌರಕಾರ್ಮಿಕರಿಗೆ ಸಂಪೂರ್ಣ ರಕ್ಷಣಾ ಕವಚ ನೀಡುವ ಕೆಲಸವನ್ನು ಪ್ರಾರಂಭಿಸಿದ್ದೇವೆ. ಪ್ರತ್ಯೇಕವಾಗಿ ವೈದ್ಯಕೀಯ ತ್ಯಾಜ್ಯ ಸಂಗ್ರಹವಾಗದೆ ಇರುವ ಬಗ್ಗೆ ಪರಿಶೀಲನೆ ಮಾಡಲಾಗುತ್ತದೆ.

-ರಂದೀಪ್‌, ಬಿಬಿಎಂಪಿ ವಿಶೇಷ ಆಯುಕ್ತ (ಘನತ್ಯಾಜ್ಯ ನಿರ್ವಹಣೆ).

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಈಶ್ವರನ ಫ್ಲೆಕ್ಸ್‌ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು; ಸಾಸ್ವೆಹಳ್ಳಿ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ
'ಉಪಲೋಕಾಯುಕ್ತರಿಗೆ ಒಂದ್ ನಮಸ್ಕಾರ': ಭ್ರಷ್ಟಾಚಾರದ ಬಗ್ಗೆ ಹೇಳಿಕೆ ನೀಡಲು ಮಾತ್ರ ಅಧಿಕಾರವಿದೆಯೇ? – ಹೆಚ್‌ಡಿಕೆ ವ್ಯಂಗ್ಯ