9 ಲಕ್ಷ ಕೊಟ್ಟರಷ್ಟೇ ಮೃತದೇಹ ಕೊಡ್ತೀವಿ: ಖಾಸಗಿ ಆಸ್ಪತ್ರೆ ನಡೆಗೆ ವ್ಯಾಪಕ ಆಕ್ರೋಶ

Kannadaprabha News   | Asianet News
Published : Aug 10, 2020, 07:23 AM IST
9 ಲಕ್ಷ ಕೊಟ್ಟರಷ್ಟೇ ಮೃತದೇಹ ಕೊಡ್ತೀವಿ: ಖಾಸಗಿ ಆಸ್ಪತ್ರೆ ನಡೆಗೆ ವ್ಯಾಪಕ ಆಕ್ರೋಶ

ಸಾರಾಂಶ

ಮೃತದೇಹ ನೀಡಲು ಚಿಕಿತ್ಸಾ ವೆಚ್ಚ ಒಂಬತ್ತು ಲಕ್ಷ ರು. ಪಾವತಿಸುವಂತೆ ಬೇಡಿಕೆ ಇಟ್ಟ ಖಾಸಗಿ ಆಸ್ಪತ್ರೆ| ಚಿಕಿತ್ಸಾ ವೆಚ್ಚ ಭರಿಸಿದ ಬಳಿಕವೇ ದೇಹ ಹಸ್ತಾಂತರ| ಕಳೆದ ಎರಡು ದಿನಗಳಿಂದ ಮೃತ ದೇಹಕ್ಕಾಗಿ ಆಸ್ಪತ್ರೆ ಮುಂದೆ ಕಾಯುತ್ತಿದ್ದೇವೆ ಎಂದು ಮಾಧ್ಯಮಗಳ ಮುಂದೆ ಅಳಲು ತೋಡಿಕೊಂಡ ಸಂಬಂಧಿಕರು|

ಬೆಂಗಳೂರು(ಆ.10): ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾದ ವ್ಯಕ್ತಿಯ ಮೃತದೇಹವನ್ನು ನೀಡಲು ಚಿಕಿತ್ಸಾ ವೆಚ್ಚ ಒಂಬತ್ತು ಲಕ್ಷ ರು. ಪಾವತಿಸುವಂತೆ ನಗರದ ಖಾಸಗಿ ಆಸ್ಪತ್ರೆಯೊಂದು ಬೇಡಿಕೆ ಇಟ್ಟಿರುವ ಆರೋಪ ಕೇಳಿ ಬಂದಿದೆ.

ನಗರದ ಆರ್‌ಪಿಸಿ ಲೇಔಟ್‌ನ ನಿವಾಸಿಯೊಬ್ಬರಿಗೆ ಜ್ವರ ಹಾಗೂ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜು.19ರಂದು ಪರೀಕ್ಷೆಗಾಗಿ ನಗರದ ಕುಮಾರಸ್ವಾಮಿ ಲೇಔಟ್‌ನಲ್ಲಿರುವ ಸಾಗರ್‌ ಆಸ್ಪತ್ರೆ ದಾಖಲಾಗಿದ್ದರು. ಪರೀಕ್ಷೆ ನಡೆಸಿದ್ದ ಆಸ್ಪತ್ರೆಯ ವೈದ್ಯರು ಮೂತ್ರಪಿಂಡ ಮತ್ತು ಶ್ವಾಸಕೋಶದ ಸಮಸ್ಯೆಯಿದೆ ಎಂದು ಚಿಕಿತ್ಸೆ ಮುಂದುವರೆಸಿದ್ದರು.

ಬೆಂಗಳೂರಲ್ಲಿ ಮಹಾಮಾರಿ ಕೊರೋನಾ ಸಾವಿನ ಪ್ರಮಾಣ ಇಳಿಮುಖ!

ಈ ಮಧ್ಯರೋಗಿಯ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ತಿಳಿಸಿದ್ದ ವೈದ್ಯರು ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆ.7ರಂದು ರೋಗಿಯು ಸಾವನ್ನಪ್ಪಿದ್ದರು. ಈ ವೇಳೆ ಆಸ್ಪತ್ರೆ ಸಿಬ್ಬಂದಿ, ರೋಗಿಗೆ ಈವರೆಗೂ ಚಿಕಿತ್ಸೆ ನೀಡಿರುವುದಕ್ಕೆ ವೆಚ್ಚವಾಗಿರುವ 9 ಲಕ್ಷ ರು.ಗಳನ್ನು ಪಾವತಿ ಮಾಡಿದಲ್ಲಿ ಮಾತ್ರ ಮೃತದೇಹ ಹಸ್ತಾಂತರಿಸಲಾಗುವುದು ಎಂದು ತಿಳಿಸಿದ್ದಾರೆ. ಕಳೆದ ಎರಡು ದಿನಗಳಿಂದ ಮೃತ ದೇಹಕ್ಕಾಗಿ ಆಸ್ಪತ್ರೆ ಮುಂದೆ ಕಾಯುತ್ತಿದ್ದೇವೆ ಎಂದು ಸಂಬಂಧಿಕರು ಮಾಧ್ಯಮಗಳ ಮುಂದೆ ಅಳಲು ತೋಡಿಕೊಂಡಿದ್ದಾರೆ.

ಮೃತದೇಹ ಹಸ್ತಾಂತರಕ್ಕೆ ಕ್ರಮ

ಕುಮಾರಸ್ವಾಮಿ ಲೇಔಟ್‌ನ ಸಾಗರ್‌ ಆಸ್ಪತ್ರೆಯಲ್ಲಿ ಮೃತಪಟ್ಟರೋಗಿಯ ದೇಹ ಹಸ್ತಾಂತರಿಸಲು 9 ಲಕ್ಷ ರು. ಬಿಲ್‌ ಪಾವತಿಸುವಂತೆ ಕುಟುಂಬದವರಿಗೆ ಹಿಂಸೆ ಮಾಡುತ್ತಿರುವುದು ಖಂಡನೀಯ. ಆಸ್ಪತ್ರೆ ಮುಖ್ಯಸ್ಥರ ಜೊತೆ ಮಾತನಾಡಿ ಮೃತದೇಹ ಹಸ್ತಾಂತರಕ್ಕೆ ಕ್ರಮ ಕೈಗೊಳ್ಳುವುದಾಗಿ ಸಚಿವ ಡಾ. ಕೆ.ಸುಧಾಕರ್‌ ಹೇಳಿದ್ದಾರೆ. ಕೊರೋನಾ ಸಂಕಷ್ಟದ ಕಾಲದಲ್ಲಿ ಹಣ ಗಳಿಸುವುದು ಖಾಸಗಿ ಆಸ್ಪತ್ರೆಗಳಿಗೆ ಮಾನದಂಡವಾಗಬಾರದು. ಆಸ್ಪತ್ರೆ ಮುಖ್ಯಸ್ಥರೊಂದಿಗೆ ಮಾತನಾಡಿ, ಕುಟುಂಬಕ್ಕೆ ನ್ಯಾಯ ಕೊಡಿಸುತ್ತೇನೆ ಎಂದು ಟ್ವೀಟ್‌ನಲ್ಲಿ ಭರವಸೆ ನೀಡಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!