Dinesh gundu rao: ಆಕ್ಸಿಜನ್‌ ದುರಂತ ಮರುತನಿಖೆ: ರಾಜ್ಯ ಸರ್ಕಾರದಿಂದ ತಯಾರಿ

Published : Aug 22, 2023, 04:41 AM IST
Dinesh gundu rao: ಆಕ್ಸಿಜನ್‌ ದುರಂತ ಮರುತನಿಖೆ: ರಾಜ್ಯ ಸರ್ಕಾರದಿಂದ ತಯಾರಿ

ಸಾರಾಂಶ

ಕೋವಿಡ್‌ ಸಂದರ್ಭ ಚಾಮರಾಜನಗರದಲ್ಲಿ ಆಕ್ಸಿಜನ್‌ ಅಭಾವದಿಂದ 36 ಮಂದಿ ಮೃತಪಟ್ಟಿದ್ದ ದುರಂತದ ಬಗ್ಗೆ ತನಿಖೆ ನಡೆಸಲು ನಿರ್ಧರಿಸಿದ್ದು, ಈ ಬಗ್ಗೆ ಅಡ್ವೋಕೇಟ್‌ ಜನರಲ್‌ ಅವರ ಸಲಹೆ ಪಡೆದು ಯಾವ ರೀತಿಯ ತನಿಖೆಗೆ ವಹಿಸಬೇಕು ಎಂದು ಕ್ರಮ ಕೈಗೊಳ್ಳುತ್ತೇವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ಬೆಂಗಳೂರು (ಆ.22) :  ಕೋವಿಡ್‌ ಸಂದರ್ಭ ಚಾಮರಾಜನಗರದಲ್ಲಿ ಆಕ್ಸಿಜನ್‌ ಅಭಾವದಿಂದ 36 ಮಂದಿ ಮೃತಪಟ್ಟಿದ್ದ ದುರಂತದ ಬಗ್ಗೆ ತನಿಖೆ ನಡೆಸಲು ನಿರ್ಧರಿಸಿದ್ದು, ಈ ಬಗ್ಗೆ ಅಡ್ವೋಕೇಟ್‌ ಜನರಲ್‌ ಅವರ ಸಲಹೆ ಪಡೆದು ಯಾವ ರೀತಿಯ ತನಿಖೆಗೆ ವಹಿಸಬೇಕು ಎಂದು ಕ್ರಮ ಕೈಗೊಳ್ಳುತ್ತೇವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮರಾಜನಗರ ಆಕ್ಸಿಜನ್‌ ದುರಂತದ ಬಗ್ಗೆ ತನಿಖೆಗೆ ವಹಿಸಲು ಈ ಹಿಂದೆಯೇ ಚರ್ಚೆ ನಡೆಸಲಾಗಿತ್ತು. ಆದರೆ ಯಾವ ರೀತಿಯ ತನಿಖೆಗೆ ವಹಿಸಬೇಕು ಎಂಬುದನ್ನು ಇನ್ನೂ ನಿರ್ಧರಿಸಿಲ್ಲ. ಸದ್ಯದಲ್ಲೇ ಅಡ್ವೋಕೇಟ್‌ ಜನರಲ್‌ ಶಶಿಕಿರಣ್‌ಶೆಟ್ಟಿ(Advocate General Sasikiranshetty)ಅವರ ಅಭಿಪ್ರಾಯ ಪಡೆದು ಸೂಕ್ತ ತನಿಖೆಗೆ ವಹಿಸುತ್ತೇವೆ ಎಂದು ತಿಳಿಸಿದರು.

 

ಚಾಮರಾಜನಗರ ಆಕ್ಸಿಜನ್ ದುರಂತ ಮರು ತನಿಖೆಗೆ ಚಾರ್ಚ್ ಫ್ರೇಮ್ ರೆಡಿಯಾಗಿದೆ: ಸಚಿವ ದಿನೇಶ್ ಗುಂಡೂರಾವ್

2021ರ ಮೇ 2 ರಂದು ಚಾಮರಾಜನಗರ(Chamarajanagar) ಜಿಲ್ಲೆಯ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದಾಗಿ 36 ಮಂದಿ ಮೃತಪಟ್ಟಿದ್ದರು. ಕೊರೋನಾ(Corona) ಸೇರಿದಂತೆ ವಿವಿಧ ಸಮಸ್ಯೆಗಳಿಗೆ ಆಸ್ಪತ್ರೆ ಸೇರಿದ್ದ ಅವರು ಐಸಿಯುನಲ್ಲಿ ಆಕ್ಸಿಜನ್‌ ಪೂರೈಕೆಯಿಲ್ಲದೆ ಮೃತಪಟ್ಟಿದ್ದು ದೇಶಾದ್ಯಂತ ತೀವ್ರ ಆತಂಕ ಸೃಷ್ಟಿಸಿತ್ತು. ಆದರೆ ದುರಂತದಲ್ಲಿ ಮೂವರು ಮಾತ್ರ ಆಕ್ಸಿಜನ್‌ ಕೊರತೆಯಿಂದ ಮೃತಪಟ್ಟಿರುವುದಾಗಿ ಅಂದಿನ ಸರ್ಕಾರ ಸಮರ್ಥಿಸಿಕೊಳ್ಳಲು ಯತ್ನಿಸಿತ್ತು. ಬಳಿಕ 24 ಮಂದಿ ಮೃತಪಟ್ಟಿರುವುದಾಗಿ ಹೇಳಿತ್ತು. ಆದರೆ ನ್ಯಾಯಾಲಯದ ಮೇಲುಸ್ತುವಾರಿಯಲ್ಲಿ ತನಿಖೆ ನಡೆದಾಗ 36 ಮಂದಿ ಸಾವನ್ನಪ್ಪಿರುವುದು ಸಾಬೀತಾಗಿತ್ತು. ಈ ವೇಳೆ ಪ್ರತಿಪಕ್ಷದಲ್ಲಿದ್ದ ಕಾಂಗ್ರೆಸ್‌ ನಾಯಕರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ನೇತೃತ್ವದಲ್ಲಿ ಸಾವನ್ನಪ್ಪಿದ ವ್ಯಕ್ತಿಗಳ ಕುಟುಂಬಗಳನ್ನು ಭೇಟಿ ಮಾಡಿ ತಲಾ 1 ಲಕ್ಷ ರು. ಪರಿಹಾರ ನೀಡಿದ್ದರು. ಅಲ್ಲದೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ತನಿಖೆ ನಡೆಸುವುದಾಗಿ ಭರವಸೆ ನೀಡಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸ್ತ್ರಿರೋಗ ತಜ್ಞೆ, ಪುತ್ರನ ದುರಂತ ಅಂತ್ಯ, ರಾತ್ರಿ ಜಗಳವಾಡಿದ ಇಬ್ಬರು ಬೆಳಗ್ಗೆ ಶವವಾಗಿ ಪತ್ತೆ
ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!