
Pahalgam terror attack: ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್ ಜಿಲ್ಲೆಯ ಪಹಲ್ಗಾಮ್ನಲ್ಲಿ ಹಿಂದೂಗಳನ್ನು ಗುರಿಯಾಗಿಸಿ ನಡೆದ ಭಯೋತ್ಪಾದಕ ದಾಳಿಯನ್ನು ಖ್ಯಾತ ಚಿಂತಕ ಚಕ್ರವರ್ತಿ ಸೂಲಿಬೆಲೆ ತೀವ್ರವಾಗಿ ಖಂಡಿಸಿದ್ದಾರೆ. ಈ ದಾಳಿಯಲ್ಲಿ ಹಲವು ಪ್ರವಾಸಿಗರು ಮೃತಪಟ್ಟಿದ್ದಾರೆ, ಶಿವಮೊಗ್ಗ, ಹಾವೇರಿ ಮೂಲದ ಇಬ್ಬರು ಕನ್ನಡಿಗರ ಸಹ ಮೃತಪಟ್ಟಿದ್ದಾರೆ. ಈ ದಾಳಿಯನ್ನು ಲಷ್ಕರ್-ಎ-ತೊಯ್ಬಾ ಭಯೋತ್ಪಾದಕ ಸಂಘಟನೆ ಈ ದಾಳಿಯ ಜವಾಬ್ದಾರಿಯನ್ನು ಒಪ್ಪಿಕೊಂಡಿದೆ.
ಭಯೋತ್ಪಾದನೆಗೆ ಸ್ಥಳೀಯರ ಕುಮ್ಮಕ್ಕು: ಸೂಲಿಬೆಲೆ
ಈ ದಾಳಿಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಕಳೆದ ಒಂದೂವರೆ ವರ್ಷಗಳ ಹಿಂದೆ ಉಗ್ರರು ಬಸ್ನ್ನು ಕಣಿವೆಗೆ ತಳ್ಳಿದ್ದರು. ಆ ನಂತರ ಇದು ಜಮ್ಮು ಕಾಶ್ಮೀರದಲ್ಲಿ ನಡೆದ ಅತಿದೊಡ್ಡ ದಾಳಿಯಾಗಿದೆ. ಪ್ರವಾಸಿಗರನ್ನೇ ಗುರಿಯಾಗಿಸಿಕೊಂಡು, ಗುರುತು ಪರಿಶೀಲಿಸಿ ಕೊಲೆ ಮಾಡಲಾಗಿದೆ. ಇದು ಜಮ್ಮು ಕಾಶ್ಮೀರದ ಪ್ರವಾಸೋದ್ಯಮಕ್ಕೆ ದೊಡ್ಡ ಆಘಾತವಾಗಿದೆ. 370ನೇ ವಿಧಿಯ ರದ್ದತಿಯ ನಂತರ ಕೆಲವೇ ದಾಳಿಗಳು ನಡೆದಿದ್ದವು, ಆದರೆ ಇದು ದೊಡ್ಡಮಟ್ಟದ ದಾಳಿಯಾಗಿದೆ. ಈ ಭಯೋತ್ಪಾದನೆಗೆ ಸ್ಥಳೀಯರ ಕುಮ್ಮಕ್ಕು ಇದೆ ಎನ್ನುವುದು ಇದರಿಂದ ಸ್ಪಷ್ಟವಾಗಿದೆ ಎಂದರು.
ಇದನ್ನ್ಊ ಓದಿ: Video | ನಮ್ಮ ದುಡಿಮೆನೇ ಹಾಳಾಗೋಯ್ತು..' ಭಯೋತ್ಪಾದಕ ದಾಳಿ ಬಗ್ಗೆ ಸ್ಥಳೀಯರು ಆಕ್ರೋಶ
ತಾತ್ಕಾಲಿಕವಾಗಿ ಪ್ರವಾಸ ನಿಷೇಧಕ್ಕೆ ಸಲಹೆ:
ಜಮ್ಮು ಕಾಶ್ಮೀರದಲ್ಲಿ ಇನ್ನೂ ಭಯದ ವಾತಾವರಣವಿದೆ. ಪ್ರವಾಸೋದ್ಯಮವನ್ನು ಬೆಳೆಸುವುದು ಕೆಲವರಿಗೆ 'ಸಾಂಸ್ಕೃತಿಕ ದಾಳಿ'ಯಂತೆ ಕಾಣುತ್ತದೆ. ತಾತ್ಕಾಲಿಕವಾಗಿ ಜಮ್ಮು ಕಾಶ್ಮೀರಕ್ಕೆ ಪ್ರವಾಸವನ್ನು ನಿಷೇಧಿಸಬೇಕು. ಇಲ್ಲವಾದರೆ, ಪ್ರವಾಸಿಗರು ನೇರವಾಗಿ ಅಮರನಾಥ ಯಾತ್ರೆಗೆ ಹೋಗಬೇಕು ಎಂದು ಸಲಹೆ ನೀಡಿದ್ದಾರೆ.
ದಾಳಿಯ ಹಿಂದೆ ಪಾಕಿಸ್ತಾನದ ಕೈವಾಡ
ಈ ದಾಳಿಯ ಹಿಂದೆ ಪಾಕಿಸ್ತಾನದ ಕೈವಾಡವಿದೆ ಎಂಬುದು ಗೊತ್ತಾಗಿದೆ. ಭಾರತಕ್ಕೆ ಈಗ ಸೂಕ್ತ ಸಮಯ ಬಂದಿದೆ. ಭಾರತ ಇದಕ್ಕೆ ತಕ್ಕ ಪ್ರತಿಕ್ರಿಯೆ ನೀಡುತ್ತದೆ ಎಂಬ ಭಾವನೆ ನನಗಿದೆ ಎಂದು ಸೂಲಿಬೆಲೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಗೃಹ ಸಚಿವರ ಕ್ರಮ:
ಕೇಂದ್ರ ಗೃಹ ಸಚಿವ ಅಮಿತ್ ಶಾ ಘಟನೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿ, ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಿ ಸ್ಥಿತಿಗತಿಯನ್ನು ಪರಿಶೀಲಿಸಿದ್ದಾರೆ. ಭದ್ರತಾ ಪಡೆಗಳು ತನಿಖೆಯನ್ನು ಚುರುಕುಗೊಳಿಸಿವೆ, ಮತ್ತು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಈ ಪ್ರಕರಣವನ್ನು ವಹಿಸಿಕೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.
ಇಇದನ್ನೂ ಓದಿ: Pahalgam terror attack: : ಹಿಂದೂಗಳ ಗುರಿಯಾಗಿಸಿ ದಾಳಿ, ಪಾಕಿಸ್ತಾನದ ಕೈವಾಡ, ಪೊಲೀಸ್ ಸಮವಸ್ತ್ರದಲ್ಲಿದ್ದ ಟೆರರಿಸ್ಟ್!
ಪ್ರವಾಸೋದ್ಯಮಕ್ಕೆ ಆಘಾತ:
ಈ ದಾಳಿಯಿಂದ ಪಹಲ್ಗಾಮ್ನ ಪ್ರವಾಸೋದ್ಯಮಕ್ಕೆ ತೀವ್ರ ಹಿನ್ನಡೆಯಾಗಿದ್ದು, ಭದ್ರತಾ ಕ್ರಮಗಳನ್ನು ಇನ್ನಷ್ಟು ಬಿಗಿಗೊಳಿಸಲಾಗಿದೆ. ಸ್ಥಳೀಯರು ಮತ್ತು ಪ್ರವಾಸಿಗರು ಭಯದ ವಾತಾವರಣದಲ್ಲಿ ಇದ್ದಾರೆ ಎಂದು ವರದಿಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ