ಭಾರತ-ಪಾಕ್ ಯುದ್ಧ ಸಂಘರ್ಷ ಬೆನ್ನಲ್ಲೇ ಸರಕು ಹಡಗಿನಲ್ಲಿ ಭಾರತ ಪ್ರವೇಶಿಸಿದ ಪಾಕಿಸ್ತಾನ ಪ್ರಜೆ!

Published : May 14, 2025, 12:11 PM IST
ಭಾರತ-ಪಾಕ್ ಯುದ್ಧ ಸಂಘರ್ಷ ಬೆನ್ನಲ್ಲೇ ಸರಕು ಹಡಗಿನಲ್ಲಿ ಭಾರತ ಪ್ರವೇಶಿಸಿದ ಪಾಕಿಸ್ತಾನ ಪ್ರಜೆ!

ಸಾರಾಂಶ

ಕಾರವಾರ ಬಂದರಿಗೆ ಎಂಟಿಆರ್ ಓಶಿಯನ್ ಎಂಬ ಸರಕು ಹಡಗಿನಲ್ಲಿ ಆಗಮಿಸಿದ್ದ ಪಾಕಿಸ್ತಾನ ಪ್ರಜೆಯೊಬ್ಬನನ್ನು ಭಾರತದ ನೆಲಕ್ಕೆ ಇಳಿಯಲು ಅನುಮತಿಸದೆ, ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಘಟನೆ ನಡೆದಿದೆ. ಈ ಹಡಗು ಇರಾಕ್‌ನ ಅಲ್ ಜುಬೈರ್‌ನಿಂದ ಮೇ 12 ರಂದು ಬಿಟುಮಿನ್ ತುಂಬಿಕೊಂಡು ಕಾರವಾರಕ್ಕೆ ಆಗಮಿಸಿತ್ತು.

ಕಾರವಾರ (ಮೇ.14): ಕಾರವಾರ ಬಂದರಿಗೆ ಎಂಟಿಆರ್ ಓಶಿಯನ್ ಎಂಬ ಸರಕು ಹಡಗಿನಲ್ಲಿ ಆಗಮಿಸಿದ್ದ ಪಾಕಿಸ್ತಾನ ಪ್ರಜೆಯೊಬ್ಬನನ್ನು ಭಾರತದ ನೆಲಕ್ಕೆ ಇಳಿಯಲು ಅನುಮತಿಸದೆ, ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಘಟನೆ ನಡೆದಿದೆ. ಈ ಹಡಗು ಇರಾಕ್‌ನ ಅಲ್ ಜುಬೈರ್‌ನಿಂದ ಮೇ 12 ರಂದು ಬಿಟುಮಿನ್ ತುಂಬಿಕೊಂಡು ಕಾರವಾರಕ್ಕೆ ಆಗಮಿಸಿತ್ತು.

ಹಡಗಿನಲ್ಲಿ 15 ಭಾರತೀಯರು, 2 ಸಿರಿಯಾ ಪ್ರಜೆಗಳು ಮತ್ತು 1 ಪಾಕಿಸ್ತಾನ ಪ್ರಜೆ ಸೇರಿದಂತೆ ಒಟ್ಟು 18 ಮಂದಿ ಸಿಬ್ಬಂದಿ ಇದ್ದರು. ಹಡಗಿನಲ್ಲಿ ಪಾಕಿಸ್ತಾನ ಪ್ರಜೆಯ ಇರುವ ಬಗ್ಗೆ ಬಂದರು ಇಲಾಖೆಯಿಂದ ಕರಾವಳಿ ಪೊಲೀಸರಿಗೆ ಮಾಹಿತಿ ದೊರೆತಿದ್ದು, ಕೂಡಲೇ ಕೋಸ್ಟಲ್ ಪೊಲೀಸರು ಬಂದರಿಗೆ ತೆರಳಿ ಆತನನ್ನು ಭಾರತದ ನೆಲಕ್ಕೆ ಇಳಿಯದಂತೆ ತಡೆದರು. ಜೊತೆಗೆ, ಆತನ ಮೊಬೈಲ್ ಮತ್ತು ದಾಖಲೆಗಳನ್ನು ಹಡಗಿನ ಕ್ಯಾಪ್ಟನ್ ಮೂಲಕವೇ ವಶಪಡಿಸಿಕೊಂಡರು.

ಎರಡು ದಿನಗಳ ಕಾಲ ಬಿಟುಮಿನ್ ಅನ್‌ಲೋಡ್ ಮಾಡಿದ ನಂತರ, ಇಂದು (ಮೇ 14) ಬೆಳಗ್ಗೆ ಹಡಗು ಕಾರವಾರದಿಂದ ಶಾರ್ಜಾಕ್ಕೆ ತೆರಳಿದೆ. ಈ ಸಂದರ್ಭದಲ್ಲಿ ಪಾಕಿಸ್ತಾನ ಪ್ರಜೆಯನ್ನು ಕೂಡ ಹಡಗಿನಲ್ಲೇ ಕಳುಹಿಸಲಾಗಿದೆ.

ಇದನ್ನೂ ಓದಿ: ಕರ್ನಾಟಕ ಕರಾವಳಿಯಲ್ಲೂ ಕಟ್ಟೆಚ್ಚರ

ಬಂದರು ಇಲಾಖೆಯ ಅಧಿಕಾರಿಯೊಬ್ಬರು, ಪಾಕಿಸ್ತಾನ ಮತ್ತು ಚೀನಾದ ಧ್ವಜವಿರುವ ಹಡಗುಗಳಿಗೆ ಭಾರತೀಯ ಬಂದರುಗಳಿಗೆ ಪ್ರವೇಶ ನಿಷೇಧಿಸಲಾಗಿದೆ. ಈ ಸಂದರ್ಭದಲ್ಲಿ ಪಾಕಿಸ್ತಾನ ಪ್ರಜೆಯೊಬ್ಬ ಹಡಗಿನ ಸಿಬ್ಬಂದಿಯಾಗಿ ಆಗಮಿಸಿದ್ದ ಬಗ್ಗೆ ಮಾಹಿತಿ ದೊರೆತ ಕೂಡಲೇ, ಸಂಬಂಧಪಟ್ಟ ಇಲಾಖೆಗಳಿಗೆ ತಿಳಿಸಿ, ಕಾನೂನುಬದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಭಾರತ ಪಾಕಿಸ್ತಾನ ಸಂಘರ್ಷ ನಡೆದಿರುವ ಹಿನ್ನೆಲೆ ಕರಾವಳಿಯಲ್ಲಿ ಕಟ್ಟೆಚ್ಚರವಹಿಸಲಾಗಿದೆ. ಇಂಥ ಪರಿಸ್ಥಿತಿಯಲ್ಲಿ ಪಾಕಿಸ್ತಾನ ಪ್ರಜೆ ಹಡಗಿನ ಮೂಲಕ ಭಾರತ ಪ್ರವೇಶಿರುವ ಹಿನ್ನೆಲೆ  ಕಾರವಾರ ಬಂದರಿನಲ್ಲಿ ಭದ್ರತೆಯನ್ನು ಇನ್ನಷ್ಟು ಕಟ್ಟುನಿಟ್ಟುಗೊಳಿಸಲಾಗಿದ್ದು, ಕರಾವಳಿ ಪೊಲೀಸರು ಮತ್ತು ಬಂದರು ಇಲಾಖೆಯ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸುತ್ತಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸೇವೆಯಲ್ಲಿಯೇ ಸಾರ್ಥಕತೆ ಪಡೆಯುವ ಗೃಹ ರಕ್ಷಕರು
ನೊಂದವರಿಗೆ ನ್ಯಾಯ ಕೊಡಿಸುವಲ್ಲಿ ರಾಜ್ಯ ಮೊದಲ ಸ್ಥಾನ: ಗೃಹಸಚಿವ ಪರಮೇಶ್ವರ್