ಶಕ್ತಿ ಪ್ರದರ್ಶನಕ್ಕೆ ಮುಂದಾದ ಪಂಚಮಸಾಲಿ ಸಮುದಾಯ..!

Published : Feb 10, 2021, 11:10 PM IST
ಶಕ್ತಿ ಪ್ರದರ್ಶನಕ್ಕೆ ಮುಂದಾದ ಪಂಚಮಸಾಲಿ ಸಮುದಾಯ..!

ಸಾರಾಂಶ

2A ಮೀಸಲಾತಿಗೆ ಆಗ್ರಹಿಸಿ ಪಂಚಮಸಾಲಿ ಸಮುದಾಯದ ನಡೆಸುತ್ತಿರುವ ಪಾದಯಾತ್ರೆ ಇದೀಗ ತುಮಕೂರಿಗೆ ಬಂದಿದೆ. ಈ ವೇಳೆ ಸ್ವಾಮೀಜಿಗಳು ಮಹತ್ವದ ಘೋಷಣೆಯೊಂದನ್ನು ಮಾಡಿದ್ದಾರೆ.

ತುಮಕೂರು, (ಫೆ.10): 2A ಮೀಸಲಾತಿಗೆ ಆಗ್ರಹಿಸಿ ಪಾದಾಯತ್ರೆ ಮಾಡುತ್ತಿರುವ ಪಂಚಮಸಾಲಿ ಸಮುದಾಯ ವಿಧಾನಸಭೆ ಮುತ್ತಿಗೆ ನಿರ್ಧಾರವನ್ನು ಕೈಬಿಟ್ಟಿದೆ. ಆದ್ರೆ, ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ.

ಹೌದು...ಪಂಚಮಸಾಲಿ 2A ಮೀಸಲಾತಿಗೆ ಆಗ್ರಹಿಸಿ ಫೆ.21 ರಂದು ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ನಡೆಯಲಿದೆ ಎಂದು ಬಸವ ಮೃತ್ಯುಂಜಯ ಶ್ರೀ ಸ್ವಾಮೀಜಿ ಹೇಳಿದ್ದಾರೆ.

ತುಮಕೂರಿನ ಖಾಸಗಿ ಹೋಟೆಲ್ ನಲ್ಲಿ ಪಂಚಮಸಾಲಿ  ಜನಪ್ರತಿನಿಧಿಗಳ ಸಭೆ ಬಳಿಕ ಸುದ್ದಿಗಾರರೊಂದಿಗೆ ಮತನಾಡಿದ ಶ್ರೀಗಳು, ಬೆಂಗಳೂರಿನ ನೈಸ್ ರಸ್ತೆ ಬಳಿ ಸಮಾವೇಶ ನಡೆಸಲು ನಿರ್ಧರಿಸಲಾಗಿದ್ದು, ಸಮಾವೇಶದ ಮೂಲಕ ಸರ್ಕಾರಕ್ಕೆ ಹಕ್ಕೊತ್ತಾಯ ಮಾಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.

ವಿವಿಧ ಸಮುದಾಯಗಳ ಮೀಸಲಾತಿ ಬಗ್ಗೆ ಸಿಎಂ ಬಿಎಸ್‌ವೈ ಮಹತ್ವದ ಹೇಳಿಕೆ

ವಿಧಾನಸೌಧ ಮುತ್ತಿಗೆ ನಿರ್ಧಾರವನ್ನು ಕೈ ಬಿಡಲಾಗಿದೆ. ಫೆ.21 ರಂದು ಸಮಾವೇಶ ನಡೆಸುವ ಮೂಲಕ ಪಂಚಮಸಾಲಿ 2ಎ ಮೀಸಲಾತಿಗೆ ಆಗ್ರಹಿಸಿ ರಾಜ್ಯ ಸರ್ಕಾರದ ಗಮನ ಸೆಳೆಯುತ್ತೇವೆ ಎಂದು ಶ್ರೀಗಳು ಹೇಳಿದರು.

ಸಮುದಾಯದ ಜನರು, ಪ್ರತಿನಿಧಿಗಳು ಸೇರಿದಂತೆ ಸಮಾವೇಶದಲ್ಲಿ ಸುಮಾರು 10 ಲಕ್ಷ ಜನರು ಭಾಗಿಯಾಗಲಿದ್ದಾರೆ. ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರದ ಜನರು ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ ಎಂದು ಶ್ರೀಗಳು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮೂರು ವರ್ಷಗಳಲ್ಲಿ 57,733 ಸೈಬರ್ ಅಪರಾಧ, ₹5,473 ಕೋಟಿ ವಂಚನೆ: ಗೃಹ ಸಚಿವ ಪರಮೇಶ್ವರ್
ಮೇಕೆದಾಟು, ಭದ್ರಾ, ಕೃಷ್ಣಾ ಯೋಜನೆಗಳಲ್ಲಿ ಕೇಂದ್ರ ಸರ್ಕಾರ ವಿಳಂಬ: ಡಿ.ಕೆ.ಶಿವಕುಮಾರ್ ಆಕ್ರೋಶ