ಪಂಚಮಸಾಲಿ ಮೀಸಲಾತಿಗಾಗಿ ಬೃಹತ್ ಅಭಿಯಾನಕ್ಕೆ ಸಜ್ಜು

Suvarna News   | Asianet News
Published : Aug 25, 2021, 01:43 PM IST
ಪಂಚಮಸಾಲಿ ಮೀಸಲಾತಿಗಾಗಿ ಬೃಹತ್ ಅಭಿಯಾನಕ್ಕೆ ಸಜ್ಜು

ಸಾರಾಂಶ

ಪಂಚಮಸಾಲಿ ಲಿಂಗಾಯತ ಸಮುದಾಯವನ್ನ 2A ಗೆ ಸೇರಿಸಲು ನಾಳೆಯಿಂದ (ಆ.26) ಬೃಹತ್ ಅಭಿಯಾನ ಬೃಹತ್ ಅಭಿಯಾನದ ಬಗ್ಗೆ ಜಯಮೃತ್ಯುಂಜಯ ಸ್ವಾಮೀಜಿ ಹೇಳಿಕೆ

ಬೆಂಗಳೂರು (ಆ.25):  ಪಂಚಮಸಾಲಿ ಲಿಂಗಾಯತ ಸಮುದಾಯವನ್ನ 2A ಗೆ ಸೇರಿಸಲು ನಾಳೆಯಿಂದ (ಆ.26) ಬೃಹತ್ ಅಭಿಯಾನ ಆರಂಭಿಸುತ್ತಿದ್ದೇವೆ ಎಂದು ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಬೆಂಗಳೂರಿನಲ್ಲಿಂದು  ಸುವರ್ಣ ನ್ಯೂಸ್.ಕಾಂ ಜೊತೆಗೆ ಮಾತನಾಡಿದ ಸ್ವಾಮೀಜಿ ಚಾಮರಾಜನಗರದ ಮಲೆಮಹಾದೇಶ್ವರ ದೇವಸ್ಥಾನದಿಂದ ರಾಜ್ಯಾದ್ಯಂತ ಜಾಗೃತಿ ಅಭಿಯಾನ ನಡೆಯಲಿದೆ. ಹೋರಾಟಕ್ಕೆ ಪಂಚಮಸಾಲಿ ಸಮುದಾಯದ ರಾಜಕೀಯ ಎಲ್ಲಾ ನಾಯಕರ ಬೆಂಬಲ ನಮಗಿದೆ ಎಂದರು.

ಪ್ರಬಲ ಜಾತಿಗಳು 2ಎಗೆ ಬೇಡ: ಸಿಎಂ ಬೊಮ್ಮಾಯಿಗೆ ಮನವಿ

ಲಿಂಗಾಯತ ಎಲ್ಲಾ ಒಳಪಂಗಡಗಳನ್ನು ಕೇಂದ್ರದ ಒಬಿಸಿಗೆ ಸೇರಿಸಲು ಬೇಡಿಕೆ ಇಟ್ಟಿದ್ದೇವೆ. ಪಂಚಮಸಾಲಿ ಸಮುದಾಯದವರು ಸಿಎಂ ಆಗಲಿ ಎನ್ನುವ ಕಾರಣಕ್ಕೆ ನಾವು ಪಾದಯಾತ್ರೆ ಮಾಡಿರಲಿಲ್ಲ. ಪಂಚಮಸಾಲಿ ಸಮುದಾಯದವರಿಗೆ ಸಿಗಬೇಕಾದ ಸಿಎಂ ಸ್ಥಾನ ಯಡಿಯೂರಪ್ಪ ಅವರಿಂದ ತಪ್ಪಿತು. ಆದರೂ ಯಡಿಯೂರಪ್ಪ ಅವರ ಮೇಲೆ ನಮಗೆ ಬೇಸರವಿಲ್ಲ. ಪಂಚಾಮಸಾಲಿ ನಾಯಕರಿಗೆ ಮಂತ್ರಿ, ಮುಖ್ಯಮಂತ್ರಿ ಸ್ಥಾನಕ್ಕಿಂತ ನಮ್ಮ ಮಕ್ಕಳಿಗೆ ಶಿಕ್ಷಣದಲ್ಲಿ ಮೀಸಲಾತಿ ಕೊಡಿ ಎಂದು ಕೇಳುತ್ತೇವೆ ಎಂದರು.

ಸಿಎಂ ಬಸವರಾಜ ಬೊಮ್ಮಾಯಿ ಅವರ ಮೇಲೆ ವಿಶ್ವಾಸವಿದೆ. ಬಸವರಾಜ್ ಬೊಮ್ಮಾಯಿ ಅವರ ತಂದೆ ಎಸ್.ಆರ್ ಬೊಮ್ಮಾಯಿ ಅವರು ಲಿಂಗಾಯತರನ್ನ OBC 3B ಗೆ ಸೇರಿಸಿದ್ದರು. ಈಗ ಅವರ ಮಗ ಬಸವರಾಜ್ ಬೊಮ್ಮಾಯಿ ಪಂಚಮಸಾಲಿ, ಗೌಡ ಲಿಂಗಾಯತ, ಮಲೆಗೌಡರು, ದೀಕ್ಷ ಲಿಂಗಾಯತರನ್ನ 2A ಗೆ ಸೇರಿಸುವ ಕೆಲಸ ಮಾಡಲಿ. ಈ ನಿಟ್ಟಿನಲ್ಲಿ ನಾಳೆಯಿಂದ ಅಕ್ಟೋಬರ್ 1 ರ ವರೆಗೆ ಜಾಗೃತಿ ಅಭಿಯಾನ ನಡೆಸುತ್ತಿದ್ದೇವೆ. ಮೀಸಲಾತಿಗಾಗಿ ಪಾದಯಾತ್ರೆ ಮಾಡಿ ಪಂಚಮಸಾಲಿ ಶಕ್ತಿ ತೋರಿಸಿದ್ದೇವೆ. ಅಂದು ಸರ್ಕಾರ ಕೊಟ್ಟ ಭರವಸೆಯನ್ನ ಮತ್ತೊಮ್ಮೆ ನೆನಪಿಸಲು ನಾಳೆಯಿಂದ ಅಭಿಯಾನ ಆರಂಭಿಸುತ್ತಿದ್ದೇವೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಯಕ್ಷಗಾನ ಕಲಾವಿದರ ಅಪಮಾನ: 'ಬಿಳಿಮಲೆಗೆ ಒಂದು ನೋಟಿಸ್ ಕೊಡೋಕೂ ಕಷ್ಟವೇ? ಸುನೀಲ್ ಕುಮಾರ್ ಪ್ರಶ್ನೆ, ಈ ವಿಷಯ ದೊಡ್ಡದು ಮಾಡೋದು ಬೇಡ ಎಂದ ತಂಗಡಗಿ
ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!