ಅಂತರ್ಜಾತಿ ಮದುವೆಗೆ ಪೋಷಕರ ವಿರೋಧ; ಸಿನಿಮೀಯ ರೀತಿ ಕಾರಿನಲ್ಲಿ ವಿವಾಹವಾದ ಜೋಡಿಹಕ್ಕಿ!

Published : Jan 04, 2024, 07:09 AM IST
ಅಂತರ್ಜಾತಿ ಮದುವೆಗೆ ಪೋಷಕರ ವಿರೋಧ; ಸಿನಿಮೀಯ ರೀತಿ ಕಾರಿನಲ್ಲಿ ವಿವಾಹವಾದ ಜೋಡಿಹಕ್ಕಿ!

ಸಾರಾಂಶ

ಪೋಷಕರ ವಿರೋಧದ ನಡುವೆ ಸಿನಿಮೀಯ ರೀತಿಯಲ್ಲಿ ಕಾರಿನಲ್ಲಿಯೇ ಪ್ರೇಮಿಗಳು ವಿವಾಹವಾದ ಘಟನೆ ಜಿಲ್ಲೆಯಲ್ಲಿ ಇತ್ತೀಚೆಗೆ ಜರುಗಿದೆ. ಕೊಪ್ಪಳದ ಯುವತಿಯೊಂದಿಗೆ ಜಿಲ್ಲೆಯ ಸಿರುಗುಪ್ಪ ತಾಲೂಕಿನ ತೆಕ್ಕಲಕೊಟೆಯ ಯುವಕನಿಗೆ ಪ್ರೇಮಾಂಕುರವಾಗಿದೆ. ಆದರೆ ಜಾತಿ ಕಾರಣಕ್ಕೆ ಪೋಷಕರು ಒಪ್ಪಿರಲಿಲ್ಲ. ಹೀಗಾಗಿ ಕಾರಿನಲ್ಲಿ ಮುದವೆಯಾದ ಜೋಡಿಗಳು.

ಬಳ್ಳಾರಿ (ಜ.4) : ಪೋಷಕರ ವಿರೋಧದ ನಡುವೆ ಸಿನಿಮೀಯ ರೀತಿಯಲ್ಲಿ ಕಾರಿನಲ್ಲಿಯೇ ಪ್ರೇಮಿಗಳು ವಿವಾಹವಾದ ಘಟನೆ ಜಿಲ್ಲೆಯಲ್ಲಿ ಇತ್ತೀಚೆಗೆ ಜರುಗಿದೆ.

ಕೊಪ್ಪಳದ ಯುವತಿಯೊಂದಿಗೆ ಜಿಲ್ಲೆಯ ಸಿರುಗುಪ್ಪ ತಾಲೂಕಿನ ತೆಕ್ಕಲಕೊಟೆಯ ಯುವಕನಿಗೆ ಪ್ರೇಮಾಂಕುರವಾಗಿದೆ. ಅಂತರ್ಜಾತಿ ಎಂಬ ಕಾರಣಕ್ಕೆ ಎರಡೂ ಕಡೆಯ ಪೋಷಕರು ಮದುವೆಗೆ ನಿರಾಕರಿಸಿದ್ದರು. ಹೀಗಾಗಿ ಮನೆಯಿಂದ ತಪ್ಪಿಸಿಕೊಂಡ ಜೋಡಿ ಡಿ.26ರಂದು ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಕಾರಿನಲ್ಲಿಯೇ ಮದುವೆಯಾಗಿದ್ದಾರೆ. ಇಬ್ಬರೂ ಹೂವಿನ ಹಾರ ಬದಲಾಯಿಸಿಕೊಳ್ಳುವ ದೃಶ್ಯದ ವೀಡಿಯೋ ವೈರಲ್ ಆಗುತ್ತಿದ್ದಂತೆ ಪ್ರೇಮಿಗಳ ಪೋಷಕರು ತೆಕ್ಕಲಕೋಟೆಗೆ ಆಗಮಿಸಿ, ಪೊಲೀಸರ ನೆರವಿನಿಂದ ಯುವತಿಯನ್ನು ಬಳ್ಳಾರಿಯ ಶಾಂತಿಧಾಮ ಸಾಂತ್ವನ ಕೇಂದ್ರಕ್ಕೆ ಕಳುಹಿಸಿದ್ದಾರೆ. 

 

ಪ್ರೇಮಿಗಳು ಪ್ರೀತಿಸಿ ಮದುವೆಯಾಗಿದ್ದಕ್ಕೆ; ಯುವಕನ ಪೋಷಕರ ಮೇಲೆ ಹುಡುಗಿಯ ಮಾವಂದಿರು ಹಲ್ಲೆ!

ಸಾಂತ್ವನ ಕೇಂದ್ರದಲ್ಲಿದ್ದ ಯುವತಿಯನ್ನು ಕರೆದೊಯ್ಯಲು ಯುವತಿ ಪೋಷಕರು ಜ.2ರಂದು ಆಗಮಿಸಿದ್ದರು. ಯುವತಿಯನ್ನು ಬಲವಂತವಾಗಿ ಕರೆದೊಯ್ಯಲು ಯತ್ನಿಸಿದ ವೇಳೆ ಪ್ರೇಮಿ ಕಾರಿನಲ್ಲಿ ಬಂದು ಅಡ್ಡಗಟ್ಟಿದ್ದಾನೆ. ಹೀಗಾಗಿ ಯುವತಿಯ ಪೋಷಕರು ಪುನಃ ಕೇಂದ್ರದಲ್ಲಿಯೇ ಬಿಟ್ಟು ವಾಪಸ್‌ ತೆರಳಿದ್ದಾರೆ. ರಾತ್ರಿ ಇಡೀ ಕೇಂದ್ರದ ಮುಂದೆ ಕುಳಿತ ಯುವಕನನ್ನು ಹಾಗೂ ಕೇಂದ್ರದಲ್ಲಿದ್ದ ಯುವತಿಯನ್ನು ಬುಧವಾರ ತೆಕ್ಕಲಕೋಟೆ ಠಾಣೆಗೆ ಪೊಲೀಸರು ಕರೆದೊಯ್ದು ಯುವತಿಯ ಒಪ್ಪಿಗೆಯಂತೆ ಯುವಕನೊಂದಿಗೆ ಕಳುಹಿಸಿ ಪ್ರೇಮ ಪ್ರಕರಣಕ್ಕೆ ಸುಖಾಂತ್ಯ ಹಾಡಲಾಗಿದೆ. 

ಕೋಲಾರದಲ್ಲಿ ಮತ್ತೊಂದು ಮರ್ಯಾದಾ ಹತ್ಯೆ: 17 ವರ್ಷದ ಮಗಳನ್ನು ಕೊಲೆಗೈದು ಸುಟ್ಟು ಹಾಕಿದ ಅಪ್ಪ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ
Breaking ಮಂಡ್ಯ ಬಸ್ ಅಪಘಾತದಲ್ಲಿ 23 ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ