ಸಂಸತ್ ಭದ್ರತಾ ಲೋಪ ಪ್ರಕರಣ; ಬಾಗಲಕೋಟೆ ನಿವೃತ್ತ ಡಿವೈಎಸ್ಪಿ ಮನೆ ಬಾಗಿಲಿಗೆ ಬಂದ ದೆಹಲಿ ಪೊಲೀಸರು!

Published : Dec 21, 2023, 08:06 PM IST
ಸಂಸತ್ ಭದ್ರತಾ ಲೋಪ ಪ್ರಕರಣ; ಬಾಗಲಕೋಟೆ ನಿವೃತ್ತ ಡಿವೈಎಸ್ಪಿ ಮನೆ ಬಾಗಿಲಿಗೆ ಬಂದ ದೆಹಲಿ ಪೊಲೀಸರು!

ಸಾರಾಂಶ

ಸಂಸತ್ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು, ಬಾಗಲಕೋಟೆಯಲ್ಲಿ  ನಿವೃತ್ತ ಡಿವೈಎಸ್ಪಿ ಪುತ್ರನನ್ನು ವಶಕ್ಕೆ ತೆಗೆದುಕೊಂಡಿದ್ದು, ಮೈಸೂರಿನಲ್ಲಿ ಮತ್ತೊಬ್ಬ ವ್ಯಕ್ತಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿವೆ.

ಬೆಂಗಳೂರು (ಡಿ.21): ಸಂಸತ್ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು, ಬಾಗಲಕೋಟೆಯಲ್ಲಿ  ನಿವೃತ್ತ ಡಿವೈಎಸ್ಪಿ ಪುತ್ರನನ್ನು ವಶಕ್ಕೆ ತೆಗೆದುಕೊಂಡಿದ್ದು, ಮೈಸೂರಿನಲ್ಲಿ ಮತ್ತೊಬ್ಬ ವ್ಯಕ್ತಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿವೆ.

ಜಿಲ್ಲಾ ಕೇಂದ್ರವಾದ ಬಾಗಲಕೋಟೆ ಪಟ್ಟಣದ ವಿದ್ಯಾಗಿರಿಯಲ್ಲಿರುವ ನಿವೃತ್ತ ಡಿವೈಎಸ್ಪಿ ನಿವಾಸದಲ್ಲಿ ಬುಧವಾರ ರಾತ್ರಿ ಅವರ ಪುತ್ರ ಹಾಗೂ ಟೆಕ್ಕಿ ಸಾಯಿಕೃಷ್ಣ ಜಗಲಿ ಅವರನ್ನು ಬಂಧಿಸಲಾಗಿದೆ.

ಬೆಂಗಳೂರಿನ ಬಹುರಾಷ್ಟ್ರೀಯ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಜಗಲಿ, ಕಳೆದ ವಾರ ಲೋಕಸಭೆಯ ಸಭಾಂಗಣಕ್ಕೆ ನುಗ್ಗಿದ ಇಬ್ಬರಲ್ಲಿ ಒಬ್ಬರಾದ ಮೈಸೂರಿನ ಮನೋರಂಜನ್ ಡಿ ಅವರ ಸ್ನೇಹಿತ ಎಂದು ಹೇಳಲಾಗಿದೆ.

Parliament Security Breach: ಮನೋರಂಜನ್‌ ಜೊತೆ ಸಂಬಂಧ ಹೊಂದಿದ್ದ ನಿವೃತ್ತ ಡಿವೈಎಸ್‌ಪಿ ಪುತ್ರನ ಬಂಧನ

ಸಾಯಿಕೃಷ್ಣ ಜಗಲಿ, ಕಾಲೇಜು ದಿನಗಳಲ್ಲಿ ಮನೋರಂಜನ್ ಅವರ ರೂಮ್‌ಮೇಟ್ ಕೂಡ ಆಗಿದ್ದರು ಎಂದು ಮೂಲಗಳು ತಿಳಿಸಿವೆ.

ದೆಹಲಿ ಪೊಲೀಸ್ ತಂಡ ಬಂದು ತನ್ನ ಸಹೋದರನನ್ನು ಕರೆದುಕೊಂಡು ಹೋಗಿದೆ ಎಂದು ಜಗಲಿಯ ಸಹೋದರಿ ಸ್ಪಂದನಾ ಅವರು ತಿಳಿಸಿದ್ದಾರೆ.

"ದೆಹಲಿ ಪೊಲೀಸರು ಬಂದಿದ್ದು ನಿಜ. ನನ್ನ ಸಹೋದರನನ್ನು ವಿಚಾರಣೆಗೆ ಒಳಪಡಿಸಲಾಗಿದೆ. ನಾವು ವಿಚಾರಣೆಗೆ ಸಂಪೂರ್ಣವಾಗಿ ಸಹಕರಿಸಿದ್ದೇವೆ. ನನ್ನ ಸಹೋದರ "ಯಾವುದೇ ತಪ್ಪು ಮಾಡಿಲ್ಲ" ಎಂದು ಅವರು ಹೇಳಿದ್ದಾರೆ.

ಮನೋರಂಜನ್-ಸಾಯಿಕೃಷ್ಣ ಲಿಂಕ್..? ಮೈಸೂರಿನ ಬಳಿಕ ಬಾಗಲಕೋಟೆಗೂ ಹಬ್ಬಿದ ದಾಳಿ ನಂಟು !

"ಮನೋರಂಜನ್ ಮತ್ತು ಸಾಯಿಕೃಷ್ಣ ಜಗಲಿ ಇಬ್ಬರೂ ರೂಮ್‌ಮೇಟ್‌ಗಳಾಗಿದ್ದರು. ಈಗ ನನ್ನ ಸಹೋದರ ಮನೆಯಿಂದಲೇ ಕೆಲಸ ಮಾಡುತ್ತಿದ್ದಾರೆ" ಎಂದು ಸ್ಪಂದನಾ ತಿಳಿಸಿದ್ದಾರೆ.

ಮೈಸೂರಿನ ಮನೋರಂಜನ್‌ ಅವರ ಮತ್ತೊಬ್ಬ ಸ್ನೇಹಿತನನ್ನೂ ದೆಹಲಿ ಪೊಲೀಸರು ಗುರುವಾರ ವಿಚಾರಣೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವಿಚಾರಣೆಗೆ ಒಳಗಾದ ವ್ಯಕ್ತಿ ಮೈಸೂರಿನಲ್ಲಿ ಸಲೂನ್ ನಡೆಸುತ್ತಿದ್ದು, ಮನೋರಂಜನ್ ಜತೆ ಹಣಕಾಸಿನ ವ್ಯವಹಾರ ನಡೆಸುತ್ತಿದ್ದ ಎಂದು ಅವರು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!
'ಅಫಿಡವಿಟ್‌ನಲ್ಲಿ ಡಿಕ್ಲೇರ್ ಮಾಡಿದ್ದರೂ ಟೀಕೆ 'ಚಿಲ್ಲರ್ ಕೆಲಸ': ಸಿಎಂ ಡಿಸಿಎಂ ದುಬಾರಿ ವಾಚ್ ಬಗ್ಗೆ ಬಿಜೆಪಿ ಹೇಳಿಕೆಗೆ ಕಾಶೆಪ್ಪನವರು ಕಿಡಿ