ಕೊರೋನಾ ಭೀತಿ: 'ಪೂರಕ ಪರೀಕ್ಷೆ ಇಲ್ಲದೇ ಮೊದಲ ಪಿಯು ಪಾಸ್‌ ಮಾಡಿ'

Kannadaprabha News   | Asianet News
Published : Jul 13, 2020, 08:28 AM ISTUpdated : Jul 13, 2020, 08:46 AM IST
ಕೊರೋನಾ ಭೀತಿ: 'ಪೂರಕ ಪರೀಕ್ಷೆ ಇಲ್ಲದೇ ಮೊದಲ ಪಿಯು ಪಾಸ್‌ ಮಾಡಿ'

ಸಾರಾಂಶ

ಎಂಜಿನಿಯರಿಂಗ್‌, ಸಾಮಾನ್ಯ ಪದವಿ, ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೊಮಾ ವ್ಯಾಸಂಗ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳನ್ನು ಆಂತರಿಕ ಮೌಲ್ಯಮಾಪನ ಮೂಲಕ ಮುಂದಿನ ತರಗತಿಗಳಿಗೆ ಉತ್ತೀರ್ಣ| ಇದೇ ಮಾದರಿಯಲ್ಲಿ ಪಿಯು ವಿದ್ಯಾರ್ಥಿಗಳನ್ನು ಸಹ ಪಾಸ್‌ ಮಾಡುವುದು ಸೂಕ್ತ|

ಬೆಂಗಳೂರು(ಜು.13): ಪ್ರಥಮ ಪಿಯುಸಿಯ ಪೂರಕ ಪರೀಕ್ಷೆಗಳನ್ನು ರದ್ದುಗೊಳಿಸಿ ದ್ವಿತೀಯ ಪಿಯುಗೆ ಪಾಸ್‌ ಮಾಡುವಂತೆ ಶಿಕ್ಷಣ ತಜ್ಞ ಹಾಗೂ ಬೆಂಗಳೂರು ಕೇಂದ್ರ ವಿವಿ ಸಿಂಡಿಕೇಟ್‌ ಸದಸ್ಯ ಕರಣ್‌ಕುಮಾರ್‌ ಅವರು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಇದಕ್ಕೆ ಕೆಲವು ಶಿಕ್ಷಣ ತಜ್ಞರು ಸಹ ಸಹಮತ ಸೂಚಿಸಿದ್ದಾರೆ.

ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯು ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಉಳಿದ ಎಂಜಿನಿಯರಿಂಗ್‌, ಸಾಮಾನ್ಯ ಪದವಿ, ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೊಮಾ ವ್ಯಾಸಂಗ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳನ್ನು ಆಂತರಿಕ ಮೌಲ್ಯಮಾಪನ ಮೂಲಕ ಮುಂದಿನ ತರಗತಿಗಳಿಗೆ ಉತ್ತೀರ್ಣ ಮಾಡುವಂತೆ ಘೋಷಿಸಿದೆ.

ಆನ್ ಲೈನ್ ಶಿಕ್ಷಣ ಕಷ್ಟಸಾಧ್ಯ, ಹಾಗಾಗಿ ಸುರೇಶ್ ಕುಮಾರ್ ಹೊಸ ಪರಿಹಾರ

ಇದೇ ಮಾದರಿಯಲ್ಲಿ ಪಿಯು ವಿದ್ಯಾರ್ಥಿಗಳನ್ನು ಸಹ ಪಾಸ್‌ ಮಾಡುವುದು ಸೂಕ್ತ. ಮತ್ತೊಂದು ಕಡೆ ಕೊರೋನಾ ನಿಯಂತ್ರಿಸುವ ಸಲುವಾಗಿ ರಾಜ್ಯ ಸರ್ಕಾರ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳನ್ನು ಜು.14ರಿಂದ 22ರವರೆಗೆ ಲಾಕ್‌ಡೌನ್‌ ಘೋಷಿಸಿದೆ. ಇಂತಹ ಸಮಯದಲ್ಲಿ ಸಾಕಷ್ಟು ವೆಚ್ಚ ಮಾಡಿ ಪಿಯು ಪೂರಕ ಪರೀಕ್ಷೆ ನಡೆಸುವುದು ಸರಿಯಲ್ಲ. ಹೀಗಾಗಿ, ವಿದ್ಯಾರ್ಥಿಗಳನ್ನು ಪಾಸ್‌ ಮಾಡುವಂತೆ ಒತ್ತಾಯಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ವನ್ಯಜೀವಿ ಸಂರಕ್ಷಣೆ: ಏಷ್ಯಾನೆಟ್ ಸುವರ್ಣ ನ್ಯೂಸ್ & ಕನ್ನಡಪ್ರಭದ ಅಭಿಯಾನಕ್ಕೆ ಗೋಲ್ಡನ್ ಸ್ಟಾರ್ ಗಣೇಶ್ ಸಾಥ್!
ಚಿಕ್ಕಮಗಳೂರು: ಹೈಟೆಕ್ ಕಾರ್‌ನಲ್ಲಿ ಗೋ ಕಳ್ಳತನ; ಸಿನಿಮೀಯ ಶೈಲಿಯಲ್ಲಿ ಹಿಂದೂಪರ ಸಂಘಟನೆ ಕಾರ್ಯಕರ್ತರಿಂದ ಚೇಸಿಂಗ್!