Namma Bengaluru: ಮಹಿಳೆಯರಿಗೆ BMTC ಉಚಿತ ಪಾಸ್‌ ನೀಡುವಂತೆ ಪ್ರಯಾಣಿಕರ ವೇದಿಕೆ ಆಗ್ರಹ

Published : Feb 14, 2023, 10:39 PM ISTUpdated : Feb 17, 2023, 07:07 AM IST
Namma Bengaluru: ಮಹಿಳೆಯರಿಗೆ BMTC ಉಚಿತ ಪಾಸ್‌ ನೀಡುವಂತೆ ಪ್ರಯಾಣಿಕರ ವೇದಿಕೆ ಆಗ್ರಹ

ಸಾರಾಂಶ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಜೆಟ್‌ನಲ್ಲಿ ಬಿಎಂಟಿಸಿಗೆ ಹೆಚ್ಚು ಅನುದಾನ ನೀಡಬೇಕು. ದೆಹಲಿ, ಪಂಜಾಬ್‌, ತಮಿಳುನಾಡು ಮಾದರಿಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಬೆಂಗಳೂರು ಬಸ್‌ ಪ್ರಯಾಣಿಕರ ವೇದಿಕೆ ಒತ್ತಾಯಿಸಿದೆ.

ಬೆಂಗಳೂರು (ಫೆ.15) : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಜೆಟ್‌ನಲ್ಲಿ ಬಿಎಂಟಿಸಿಗೆ ಹೆಚ್ಚು ಅನುದಾನ ನೀಡಬೇಕು. ದೆಹಲಿ, ಪಂಜಾಬ್‌, ತಮಿಳುನಾಡು ಮಾದರಿಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಬೆಂಗಳೂರು ಬಸ್‌ ಪ್ರಯಾಣಿಕರ ವೇದಿಕೆ ಒತ್ತಾಯಿಸಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ಸದಸ್ಯ ಶಹೀನ್‌ ಶಾಸ, ದೆಹಲಿ, ಪಂಜಾಬ್‌, ತಮಿಳುನಾಡು ಮಾದರಿಯಲ್ಲಿ ಮಹಿಳೆಯರಿಗೆ(Women)ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿಕೊಡಬೇಕು. ಜೊತೆಗೆ ಲೈಂಗಿಕ ಅಲ್ಪಸಂಖ್ಯಾತರು, ಹಿರಿಯ ನಾಗರಿಕರು, ವಿದ್ಯಾರ್ಥಿಗಳು, ನಗರದಲ್ಲಿರುವ ಹಿಂದುಳಿದ ಸಮುದಾಯಗಳಿಗೂ ಉಚಿತ ಪ್ರಯಾಣ(BMTC Free BUS Pass)ಕ್ಕೆ ಅವಕಾಶ ನೀಡಬೇಕು. ಇದಕ್ಕೆ ಅಂದಾಜು 100 ಕೋಟಿ ರು. ಅನುದಾನ ಬೇಕಾಗಬಹುದು ಎಂದು ಅಭಿಪ್ರಾಯಪಟ್ಟರು.

Karnataka Budget 2023 LIVE updates

Bengaluru: ಬಿಎಂಟಿಸಿ ಉಚಿತ ಪಾಸ್ ಸೇವೆ ದಿಢೀರ್ ರದ್ದು!

ಬಿಎಂಟಿಸಿ(BMTC)ಗೆ ಹೊರಗುತ್ತಿಗೆ ಆಧಾರದಲ್ಲಿ ನೌಕರರನ್ನು ನೇಮಕ ಮಾಡಿಕೊಳ್ಳದೇ ಸಂಸ್ಥೆಯಿಂದಲೇ ಸಿಬ್ಬಂದಿ ನೇಮಿಸಿಕೊಳ್ಳಬೇಕು. ನಗರದ ಅನೇಕ ಭಾಗಗಳಲ್ಲಿ ಸಂಪರ್ಕದ ಕೊರತೆ ಇದೆ. ಜನಸಂಖ್ಯೆಗೆ ಅನುಗುಣವಾಗಿ ಮುಂದಿನ ಎರಡ್ಮೂರು ವರ್ಷದಲ್ಲಿ ಬಿಎಂಟಿಸಿ ಸೇವೆಗೆ ಕನಿಷ್ಟ3 ಸಾವಿರ ಬಸ್‌ಗಳನ್ನು ಸೇರ್ಪಡೆಗೊಳಿಸಲು ಬಜೆಟ್‌ನಲ್ಲಿ ಅನುದಾನ ನೀಡಬೇಕು ಎಂದು ಮನವಿ ಮಾಡಿದರು.

ಬಸವರಾಜ ಬೊಮ್ಮಾಯಿ(CM Bassavaraj Bommai) ಅವರು ಫೆ.17 ರಂದು ಬಜೆಟ್‌(Budget) ಮಂಡಿಸಲಿದ್ದು ಅಂದು ವಿಧಾನಸೌಧ(Vidhanasoudha)ಕ್ಕೆ ಬಸ್‌ ಮೂಲಕ ಆಗಮಿಸಬೇಕು. ಬಿಎಂಟಿಸಿ ಬೆಂಗಳೂರಿನ ಜೀನನಾಡಿಯಾಗಿದ್ದು ಬಸ್‌ ಹತ್ತುವ ಮೂಲಕ ಮುಖ್ಯಮಂತ್ರಿಗಳು ಸಕಾರಾತ್ಮಕ ಸಂದೇಶ ರವಾನಿಸಬೇಕು. ನಗರ ವ್ಯಾಪ್ತಿಯ 28 ಶಾಸಕರು ಬಿಎಂಟಿಸಿಗೆ ಅಗತ್ಯವಿರುವ ಬೆಂಬಲ ನೀಡುವಂತೆ ಮುಖ್ಯಮಮಂತ್ರಿಗಳಿಗೆ ಮನವಿ ಮಾಡಬೇಕು ಎಂದು ಒತ್ತಾಯಿಸಿದರು.

ಬಿಎಂಟಿಸಿ ನಿಗಮದಲ್ಲಿ ಆಡಿದ್ದೇ ಆಟ: ನ್ಯಾಯ ಕೇಳಿದ ಡ್ರೈವರ್ ಸಸ್ಪೆಂಡ್

ವಿದೇಶಗಳ ಲಂಡನ್‌, ಬೀಜಿಂಗ್‌, ಹಾಂಕಾಂಗ್‌ ನಗರಗಳು, ಅಷ್ಟೇ ಏಕೆ ದೇಶದ ದೆಹಲಿ, ಚೆನ್ನೈ, ಮುಂಬೈಗಳಲ್ಲಿರುವಂತೆ ಬೆಂಗಳೂರಿನಲ್ಲೂ ಸಾರ್ವಜನಿಕ ಸಾರಿಗೆ ಬಸ್‌ಗಳ ಅವಶ್ಯಕತೆ ಹೆಚ್ಚಿದೆ. ಇದರಿಂದಾಗಿ ಸಂಚಾರ ದಟ್ಟಣೆ, ವಾಯು ಮಾಲಿನ್ಯ, ಅಪಘಾತಗಳು ಕಡಿಮೆಯಾಗಲಿವೆ.

-ವಿನೋದ್‌ ಜಾಕೋಬ್‌, ನಮ್ಮ ಬೆಂಗಳೂರು ಪ್ರತಿಷ್ಠಾನ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಡಿಕೆಸು ಹೆಸರಿನಲ್ಲಿ ಕೋಟ್ಯಂತರ ವಂಚನೆ ಪ್ರಕರಣ.. 'ಬಂಗಾರಿ' ಕೇಸ್‌ನಲ್ಲಿ ನಟ ಧರ್ಮಗೆ ಧ್ವನಿ ಪರೀಕ್ಷೆ?
ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ