
ಯಾದಗಿರಿ (ಅ.31) ಮದ್ಯ ಸೇವಿಸಿ ರೈಲ್ವೆ ನಿಲ್ದಾಣದಲ್ಲಿ ಮಲಗಿದ್ದ ಪ್ರಯಾಣಿಕರಿಗೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಯಾದಗಿರಿ ಜಿಲ್ಲೆ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.
ತಡರಾತ್ರಿ ನಡೆದಿರುವ ಘಟನೆ. ಮದ್ಯ ಸೇವಿಸಿ ರೈಲ್ವೆ ನಿಲ್ದಾಣದಲ್ಲಿ ಮಲಗಿದ್ದ ಪ್ರಯಾಣಿಕರು. ರೈಲ್ವೆ ನಿಲ್ದಾಣದಲ್ಲಿ ಕುಡಿದು ಮಲಗಿದ್ರೆ ಬೇರೆ ಪ್ರಯಾಣಿಕರಿಗೆ ತೊಂದರೆಯಾಗ್ತದೆ ಎಂದು ಮೊದಲಿಗೆ ಬುದ್ದಿ ಮಾತು ಹೇಳಿದ ರೈಲ್ವೆ ಪೋಲಿಸರು ಆದರೆ ಪೊಲೀಸರ ಮಾತು ಕೇಳದೇ ಅಲ್ಲೇ ಮಲಗಿದ್ದ ಪ್ರಯಾಣಿಕರು. ಇದರಿಂದ ಸಿಟ್ಟಿಗೆದ್ದ ಆರ್ಪಿಎಫ್ ಪೊಲೀಸರು ಕುಡಿದು ಮಲಗಿದ್ದ ಪ್ರಯಾಣಿಕರನ್ನು ಕಚೇರಿಯೊಳಗೆ ಕರೆದುಕೊಂಡು ಕೂಡಿಹಾಕಿದ್ದಾರೆ. ಈ ವೇಳೆ ಕೊಠಡಿಯಲ್ಲಿ ಪ್ರಯಾಣಿಕರಿಗೆ ಹಿಗ್ಗಾಮುಗ್ಗಾ ಥಳಿಸಿರುವ ಪೊಲೀಸರು. ಇದರಿಂದ ಆರ್ಪಿಎಫ್ ಪೊಲೀಸರ ವಿರುದ್ಧ ಕೆರಳಿದ ಪ್ರಯಾಣಿಕರು. ಪರಿಸ್ಥಿತಿ ತಿಳಿಗೊಳಿಸಲು ಹೋದ ಇನ್ನೊಬ್ಬ ಆರ್ಪಿಎಫ್ ಪೊಲೀಸ್ ಪೇದೆಯನ್ನ ತರಾಟೆಗೆ ತೆಗೆದುಕೊಂಡ ಪ್ರಯಾಣಿಕರು. ಪೊಲೀಸರು ನಮಗೆ ಹೊಡೆಯುತ್ತಾರೆ? ರೂಮ್ನಲ್ಲಿ ಕರೆದುಕೊಂಡು ಹೊಡೆದಿದ್ದಾರೆ. ನಾವು ಏನು ತಪ್ಪು ಮಾಡಿದ್ದೇವೆಂದು ಆಕ್ರೋಶ ವ್ಯಕ್ತಪಡಿಸಿರುವ ಪ್ರಯಾಣಿಕರು.
ಸಿದ್ದರಾಮಯ್ಯ ಸರ್ಕಾರಕ್ಕೆ ಸ್ವಪಕ್ಷೀಯರಿಂದಲೇ ಸವಾಲು; ಎಐಸಿಸಿ ಅಧ್ಯಕ್ಷ ಖರ್ಗೆ ಆಪ್ತನಿಂದಲೇ ಸರ್ಕಾರ ಬದಲಾವಣೆ ಮಾತು!
ಒಟ್ಟಿನಲ್ಲಿ ರೈಲ್ವೆ ನಿಲ್ದಾಣದಲ್ಲಿ ಮದ್ಯ ಸೇವಿಸಿ ಮಲಗಬೇಡಿ ಎಂದು ಬುದ್ಧಿಮಾತು ಕೇಳದ್ದಕ್ಕೆ ರೈಲ್ವೆ ಪೊಲೀಸರು ಕೊಠಡಿಯೊಳಗೆ ಕೂಡಿಹಾಕಿ ಥಳಿಸಿರುವುದು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ