
ರಾಮನಗರ (ಅ.17): ಕೈ ಆಪರೇಷನ್ಗೆ ಖಾಸಗಿ ಆಸ್ಪತ್ರೆಗೆ ಬಂದಿದ್ದ ವ್ಯಕ್ತಿ ವೈದ್ಯರ ನಿರ್ಲಕ್ಷ್ಯದಿಂದ ಮೃತಪಟ್ಟಿರುವ ಆಘಾತಕಾರಿ ಘಟನೆ ರಾಮನಗರ ಟೌನ್ ಐಜೂರು ನಾರಾಯಣ ಆಸ್ಪತ್ರೆಯಲ್ಲಿ ನಡೆದಿದೆ.
ವರದರಾಜು(58) ಮೃತ ದುರ್ದೈವಿ. ರಾಮನಗರದ ಬಾಲಗೇರಿ ನಿವಾಸಿಯಾಗಿರುವ ವರದರಾಜು ಕೈ ಮೂಳೆ ಮುರಿತದಿಂದ ನಿನ್ನೆ ಮಧ್ಯಾಹ್ನ ಆಸ್ಪತ್ರೆಗೆ ದಾಖಲಾಗಿದ್ದರು. ಕೈಮೂಳೆ ಮುರಿತ ಗಂಭೀರವಾಗಿದೆ ಆಪರೇಷನ್ ಮಾಡಬೇಕು ಎಂದು ವೈದ್ಯರು ಮುಂಚಿತವಾಗಿ ಒಂದು ಲಕ್ಷ ಹಣ ಕಟ್ಟಿಸಿಕೊಂಡಿದ್ದರು.
ಆಪರೇಷನ್ ವೇಳೆ ದಿಢೀರ್ ಸಾವು:
ಆದರೆ ಆಪರೇಷನ್ ವೇಳೆ ದಿಢೀರ್ ಸಾವನ್ನಪ್ಪದ್ದಾರೆ. ಸಾವಿಗೆ ನಿಖರ ಕಾರಣ ತಿಳಿದಿಲ್ಲ. ಆಪರೇಷನ್ ಮಾಡವಾಗ ಹೃದಯಾಘಾತ ಸಂಭವಿಸಿ ಮೃತಪಟ್ಟಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ. ಆದರೆ ಕುಟುಂಬಸ್ಥರು ವೈದ್ಯರ ಹೇಳಿಕೆಯನ್ನ ಒಪ್ಪುತ್ತಿಲ್ಲ. ವೈದ್ಯರ ನಿರ್ಲಕ್ಷ್ಯದಿಂದಲೇ ಈ ಸಾವು ಸಂಭವಿಸಿದೆ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.
ವೈದ್ಯರ ವಿರುದ್ಧ ಕುಟುಂಬಸ್ಥರು ಆಕ್ರೋಶ:
ಮೃತ ವರದರಾಜುಗೆ ಹೃದಯಾಘಾತವಾಗಿಲ್ಲ. ವೈದ್ಯರ ನಿರ್ಲಕ್ಷ್ಯದಿಂದ ಮೃತಪಟ್ಟಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿ ವೈದ್ಯರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ನ್ಯಾಯ ಸಿಗುವವರೆಗೆ ಶವ ಪಡೆಯುವುದಿಲ್ಲ ಎಂದು ಆಸ್ಪತ್ರೆ ಎದುರಲ್ಲೇ ಕುಳಿತ ಕುಟುಂಬಸ್ಥರು. ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಐಜೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ