ಖಾಸಗಿ ವಿಡಿಯೋ ಮುಂದಿಟ್ಟು ದರ್ಶನ್‌ಗೆ ಪವಿತ್ರಾ ಬ್ಲಾಕ್‌ಮೇಲ್, ಪತ್ನಿ ವಿಜಯಲಕ್ಷ್ಮಿಯಿಂದ ರಹಸ್ಯ ಬಯಲು!

Published : Sep 10, 2024, 09:49 AM ISTUpdated : Sep 10, 2024, 10:36 AM IST
ಖಾಸಗಿ ವಿಡಿಯೋ ಮುಂದಿಟ್ಟು ದರ್ಶನ್‌ಗೆ ಪವಿತ್ರಾ ಬ್ಲಾಕ್‌ಮೇಲ್, ಪತ್ನಿ ವಿಜಯಲಕ್ಷ್ಮಿಯಿಂದ ರಹಸ್ಯ ಬಯಲು!

ಸಾರಾಂಶ

ಖಾಸಗಿ ಫೋಟೋ ಹಾಗೂ ವಿಡಿಯೋಗಳನ್ನು ಮುಂದಿಟ್ಟುಕೊಂಡು ಪವಿತ್ರಾ ಗೌಡ, ನಟ ದರ್ಶನ್‌ಗೆ ಬ್ಲಾಕ್‌ಮೇಲ್ ಮಾಡುತ್ತಿದ್ದರು ಅನ್ನೋ ಸ್ಫೋಟಕ ಮಾಹಿತಿ ಬಯಲಾಗಿದೆ. ಈ ಮಾಹಿತಿಯನ್ನು ಖುದ್ದು ವಿಜಯಲಕ್ಷ್ಮಿ ಹೇಳಿಕೆ ನೀಡಿದ್ದಾಳೆ.

ಬೆಂಗಳೂರು(ಸೆ.10)  ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್‌ಶೀಟ್ ಇದೀಗ ಹಲವು ರಹಸ್ಯ ಮಾಹಿತಿಗಳನ್ನು ಬಯಲಿಗೆಳೆದಿದೆ. ಇದೀಗ ಪವಿತ್ರಾ ಹಾಗೂ ದರ್ಶನ್ ನಡುವಿನ ಸಂಬಂಧ, ಮನೆಯಲ್ಲಿನ ಜಗಳ ಕುರಿತು ಪೊಲೀಸರ ಮುಂದೆ ಪತ್ನಿ ವಿಜಯಲಕ್ಷ್ಮಿ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ. ಈ ಪೈಕಿ 2014ರಲ್ಲಿ ದರ್ಶನ್ ಹಾಗೂ ಪವಿತ್ರಾ ಗೌಡ ನಡುವಿನ ಸಂಬಂಧ ಮಾಹಿತಿ ಸಿಕ್ಕಿತ್ತು. ಬಳಿಕ ಮನೆಯಲ್ಲಿ ಇದೇ ವಿಚಾರಕ್ಕೆ ಕಲಹ ಆರಂಭಗೊಂಡಿತ್ತು ಎಂದು ವಿಜಯಲಕ್ಷ್ಮಿ ಹೇಳಿದ್ದಾರೆ. ಇಷ್ಟೇ ಅಲ್ಲ, ಪವಿತ್ರಾ ಗೌಡ ಜೊತೆ ದರ್ಶನ್ ಕಳೆದ ಖಾಸಗಿ ಕ್ಷಣಗಳ ಫೋಟೋ, ವಿಡಿಯೋಗಳನ್ನು ಮಾಧ್ಯಮಗಳಿಗೆ ನೀಡುವುದಾಗಿ ಬೆದರಿಸಿ ದರ್ಶನ್‌ಗೆ ಬ್ಲಾಕ್‌ಮೇಲ್ ಮಾಡುತ್ತಿದ್ದಳು ಎಂದು ವಿಜಯಲಕ್ಷ್ಮಿ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾರೆ. 

ಫೋಟೋ, ವಿಡಿಯೋಗಳನ್ನು ಮುಂದಿಟ್ಟುಕೊಂಡ ಪವಿತ್ರಾ ಗೌಡ, ದರ್ಶನ್‌ಗೆ ಬ್ಲಾಕ್‌ಮೇಲ್ ಮಾಡುತ್ತಿದ್ದಳು. ಇದೇ ಬ್ಲಾಕ್‌ಮೇಲ್ ಮೂಲಕ ಪವಿತ್ರಾ ಗೌಡ 1.75 ಕೋಟಿ ರೂಪಾಯಿ ಮನೆಯನ್ನು ದರ್ಶನ್ ಮೂಲಕ ಖರೀದಿಸಿದ್ದರು. 2024ರಲ್ಲಿ ಇದೇ ರೀತಿ ಬ್ಲಾಕ್‌ಮೇಲ್ ಮಾಡಿ ಕೋಟಿ ರೂಪಾಯಿ ಬೆಲೆ ಬಾಳುವ ರೇಂಜ್ ರೋವರ್ ಕಾರನ್ನು ಖರೀದಿಸಿದ್ದರು. ಇದೇ ಖಾಸಗಿ ಕ್ಷಣಗಳ ಫೋಟೋ, ವಿಡಿಯೋಗಳನ್ನು ಮುಂದಿಟ್ಟುಕೊಂಡು ದರ್ಶನ್‌ನನ್ನು ತನ್ನತ್ತ ಸೆಳೆಯಲು ಪ್ರಯತ್ನಿಸಿದ್ದಾಳೆ ಎಂದು ವಿಜಯಲಕ್ಷ್ಮಿ ಪೊಲೀಸರ ಮುಂದೆ ಹೇಳಿಕೆ ಕೊಟ್ಟಿದ್ದಾರೆ.

ಅಸ್ಸಾಂನ ಕಾಮಾಕ್ಯ ದೇಗುಲಕ್ಕೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಭೇಟಿ, ಶಕ್ತಿಪೀಠ ಆಶೀರ್ವಾದದಿಂದ ಸಿಗುತ್ತಾ ಮುಕ್ತಿ?

2014ರಲ್ಲಿ ಹುಡುಗಿಯಿಂದ ದರ್ಶನ್‌ಗೆ ಮೆಸೇಜ್ ಬಂದಿತ್ತು. ಈ ಕುರಿತು ವಿಚಾರಿಸಿದಾಗ ಅದು ಪವಿತ್ರಾ ಗೌಡ(@ಸ್ಮಿತಾ ಗೌಡ) ಅನ್ನೋ ಮಾಹಿತಿ ಸಿಕ್ಕಿತ್ತು. ಈ ಕುರಿತು ಅಂದೆ ದರ್ಶನ್ ಜೊತೆ ಕಲಹವಾಗಿತ್ತು. ಬಳಿಕ 2015ರಲ್ಲಿ ಮಹಿಳೆಯೊಬ್ಬಳು ನನಗೆ ಕರೆ ಮಾಡಿದ್ದಳು. ಈ ಮಹಿಳೆ ಪವಿತ್ರಾ ಗೌಡ. ನಿನ್ನ ಪತಿ(ದರ್ಶನ್) ನನ್ನ (ಪವಿತ್ರಾ ಗೌಡ) ಜೊತೆ ರಿಲೇಶನ್‌ಶಿಪ್‌ನಲ್ಲಿದ್ದಾರೆ. ನಮ್ಮ ಮನೆಗೆ ಬರುತ್ತಾರೆ. ನಿನ್ನ ಪತಿಗೆ ಬುದ್ದಿ ಹೇಳು ಎಂದು ಪವಿತ್ರಾ ಗೌಡ ಫೋನ್ ಮೂಲಕ ವಿಜಯಲಕ್ಷ್ಮಿಗೆ ಹೇಳಿದ್ದಳು. ಫೋನ್ ಮೂಲಕ ಪವಿತ್ರಾ ಗೌಡ  ವಿರುದ್ದ ಹರಿಹಾಯ್ದ ವಿಜಯಲಕ್ಷ್ಮಿ ಬಳಿಕ ದರ್ಶನ್‌ಗೆ ಕ್ಲಾಸ್ ತೆಗೆದುಕೊಂಡಿದ್ದರು. ಇಲ್ಲಿಂದ ಕಲಹ ಹೆಚ್ಚಾಯಿತು ಎಂದು ವಿಜಯಲಕ್ಷ್ಮಿ ಹೇಳಿರುವ ದಾಖಲೆಯನ್ನು ಪೊಲೀಸರು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

2009ರ ವರೆಗೆ ದರ್ಶನ್ ಹಾಗೂ ನನ್ನ ನಡುವೆ ಯಾವುದೇ ಕಲಹ ಇರಲಿಲ್ಲ ಎಂದು ವಿಜಯಲಕ್ಷ್ಮಿ ಹೇಳಿದ್ದಾರೆ. 2011ರಲ್ಲಿ ಪತ್ನಿ ವಿಜಯಲಕ್ಷ್ಮಿಗೆ ಹಲ್ಲೆ ಮಾಡಿ ಜೈಲು ಸೇರಿದ್ದ ದರ್ಶನ್ ಬಳಿಕ ಬಿಡುಗಡೆಯಾಗಿದ್ದರು. ಬಳಿಕ 2014ರ ವರೆಗೆ ಸಂಸಾರದಲ್ಲಿ ಮೂರನೆ ವ್ಯಕ್ತಿಗಳ ಪ್ರವೇಶ ಆಗಿರಲಿಲ್ಲ. ಯಾವಾಗ ಪವಿತ್ರಾ ಗೌಡ ನಮ್ಮ ಬದುಕಿನ ನಡುವೆ ಆಗಮಿಸಿದ ಬಳಿಕ ಕಲಹ ಜೋರಾಗಿತ್ತು ಎಂದು ವಿಜಯಲಕ್ಷ್ಮಿ ಹೇಳಿದ್ದಾರೆ.

ಲೈಂಗಿಕ ಕ್ರಿಯೆಗೆ ಕರೆದ ರೇಣುಕಾಸ್ವಾಮಿಯನ್ನು ಸಾಯಿಸಿಬಿಡಿ ಎಂದಿದ್ದೆ: ಪವಿತ್ರಾಗೌಡ
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್
ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!