ತಿಂದಿದ್ದನ್ನು ತೇಗಲು ಬಂದಿದ್ದ ಪಿಡಿಒಗೆ ಗ್ರಾಮಸ್ಥರ ದಿಗ್ಬಂದನ!

Published : Aug 05, 2018, 02:25 PM IST
ತಿಂದಿದ್ದನ್ನು ತೇಗಲು ಬಂದಿದ್ದ ಪಿಡಿಒಗೆ ಗ್ರಾಮಸ್ಥರ ದಿಗ್ಬಂದನ!

ಸಾರಾಂಶ

ಗ್ರಾಮ ಪಂಚಾಯ್ತಿಗೆ ಪಿಡಿಒ ಅಕ್ರಮ ಪ್ರವೇಶ! ದಾಖಲೆ ತಿದ್ದುಪಡಿ ಮಾಡಲೆತ್ನಿಸಿದ ಪಿಡಿಒ! ಅಕ್ರಮ ಎಸಗಿ ವರ್ಗಾವಣೆಗೊಂಡಿದ್ದ ನಾಗರಾಜು! ಪಿಡಿಒ ನಡೆ ಖಂಡಿಸಿ ಗ್ರಾಮಸ್ಥರಿಂದ ಪ್ರತಿಭಟನೆ  

ಮಂಡ್ಯ(ಆ.5): ಅಕ್ರಮ ಎಸಗಿದ ಆರೋಪದ ಮೇಲೆ ವರ್ಗಾವಣೆ ಶಿಕ್ಷೆಗೆ ಗುರಿಯಾಗಿದ್ದ ಪಿಡಿಒ ಓರ್ವ, ಗ್ರಾಮ ಪಂಚಾಯ್ತಿ ಕಚೇರಿಗೆ ನುಗ್ಗಿ ದಾಖಲೆ ತಿದ್ದುಪಡಿ ಮಾಡಲೆತ್ನಿಸಿದ ಘಟನೆ ನಡೆದಿದೆ.

ಇಲ್ಲಿನ ಪಾಂಡವಪುರ ತಾಲೂಕಿನ ಕ್ಯಾತನಹಳ್ಳಿ ಗ್ರಾ.ಪಂ. ಪಿಡಿಒ ಆಗಿದ್ದ ನಾಗರಾಜು, ಅಕ್ರಮ ಎಸಗಿದ ಆರೋಪದ ಮೇಲೆ ವರ್ಗಾವಣೆ ಶಿಕ್ಷೆಗೆ ಗುರಿಯಾಗಿದ್ದ. ಆದರೆ ವಿರುದ್ದದ ತನಿಖೆಯ ದಿಕ್ಕು ತಪ್ಪಿಸಲು ಯತ್ನಿಸಿದ ನಾಗರಾಜು, ಈ ಹಿಂದೆ ಕೆಲಸ ಮಾಡುತ್ತಿದ್ದ ಗ್ರಾ.ಪಂ. ಕಚೇರಿಗೆ ನುಗ್ಗಿ ದಾಖಲೆ ತಿದ್ದುಪಡಿ ಮಾಡಲು ಪ್ರಯತ್ನಿಸಿದ್ದಾನೆ ಎನ್ನಲಾಗಿದೆ.

ಕ್ಯಾತನಹಳ್ಳಿ ಗ್ರಾ.ಪಂ. ಸಿಬ್ಬಂದಿ ಕೆಲಸ ಮುಗಿಸಿ ತೆರಳಿದ ಮೇಲೆ ಹೊಸ ಪಿಡಿಒದಿಂದ ಕೀ ಪಡೆದ ನಾಗರಾಜು, ದಾಖಲೆಗಳನ್ನು ತಿರುಚಲು ಪ್ರಯತ್ನಿಸಿದ್ದಾನೆ. ನಾಗರಾಜು ನಡೆಯಿಂದ ಅನುಮಾನಗೊಂಡ ಗ್ರಾಮಸ್ಥರು ಕಚೇರಿಗೆ ತೆರಳಿ ಆತನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ನಾಗರಾಜು ನಡೆ ಖಂಡಿಸಿ ಆತನಿಗೆ ಘೇರಾವ್ ಹಾಕಿದ ಗ್ರಾಮಸ್ಥರು, ಮೇಲಾಧಿಕಾರಿಗಳಿಗೆ ಕರೆ ಮಾಡಿದರೂ ಯಾರೂ ಅತ್ತ ಸುಳಿಯಲಿಲ್ಲ. ಮೇಲಾಧಿಕಾರಿಗಳ ವರ್ತನೆ ಖಂಡಿಸಿ ಗ್ರಾಮಸ್ಥರು ಪ್ರತಿಭಟನೆ ಕೂಡ ನಡೆಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದ್ವೇಷ ಭಾಷಣಕ್ಕೆ 7 ವರ್ಷ ಜೈಲು: ವಿಧೇಯಕ ಮಂಡಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್‌
ಉ.ಕರ್ನಾಟಕ ಬಗ್ಗೆ ರಾಜ್ಯ ಸರ್ಕಾರ ದಿವ್ಯ ನಿರ್ಲಕ್ಷ್ಯ: ವಿಜಯೇಂದ್ರ