ಸಿದ್ದು ಮುಸ್ಲಿಂ ಪರ ಹೇಳಿಕೆ: ಪೇಜಾವರಶ್ರೀ ಅಸಮಾಧಾನ

By Kannadaprabha NewsFirst Published Dec 6, 2023, 9:27 AM IST
Highlights

ಸಿಎಂ ಸಿದ್ದರಾಮಯ್ಯ‌ ಅವರ ಮುಸ್ಲಿಮರನ್ನು ಓಲೈಸುವ ಹೇಳಿಕೆಗೆ ಪೇಜಾವರ ಶ್ರೀಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಅವರು ಒಂದು ಸಮುದಾಯ ವರ್ಗದ ಜೊತೆ ನಿಲ್ಲುತ್ತೇವೆ, ನಿಮ್ಮ ಪಾಲು ಕೊಡುತ್ತೇವೆ ಎನ್ನುವುದು ಎಷ್ಟು ಸರಿ ಎಂದು ತೀವ್ರವಾಗಿ ಪ್ರಶ್ನಿಸಿದ ಶ್ರೀಗಳು 

ಉಡುಪಿ(ಡಿ.06):  ಮುಖ್ಯಮಂತ್ರಿಗಳು ತಾವು ಒಂದು ಸಮುದಾಯದ ಪರವಾಗಿದ್ದೇವೆ ಎಂದು ಹೇಳುವುದು ಸರಿಯಲ್ಲ, ಇದರಿಂದ ಬಹುಸಂಖ್ಯಾತ ಹಿಂದೂ ಸಮಾಜಕ್ಕೆ ನೋವಾಗುತ್ತದೆ ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಎಚ್ಚರಿಕೆ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ‌ ಅವರ ಮುಸ್ಲಿಮರನ್ನು ಓಲೈಸುವ ಹೇಳಿಕೆಗೆ ಪೇಜಾವರ ಶ್ರೀಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಅವರು ಒಂದು ಸಮುದಾಯ ವರ್ಗದ ಜೊತೆ ನಿಲ್ಲುತ್ತೇವೆ, ನಿಮ್ಮ ಪಾಲು ಕೊಡುತ್ತೇವೆ ಎನ್ನುವುದು ಎಷ್ಟು ಸರಿ ಎಂದು ಶ್ರೀಗಳು ತೀವ್ರವಾಗಿ ಪ್ರಶ್ನಿಸಿದ್ದಾರೆ. 

ಸನಾತನಧರ್ಮ ಎಂಬುದು ಸದಾಕಾಲ ಇರುವಂತದ್ದು; ಪೇಜಾವರಶ್ರೀ

ಸಿಎಂ ಹೇಳಿಕೆಯಿಂದ ಹಿಂದೂ ಸಮಾಜವನ್ನು ಯಾರೂ ಕೇಳುವವರಿಲ್ಲ ಎಂಬ ಭಾವನೆ ಬರುತ್ತದೆ. ಇಂತಹ ಹೇಳಿಕೆಯಿಂದ ಹಿಂದೂ ಸಮಾಜಕ್ಕೆ ನೋವಾಗುತ್ತದೆ ಎಂದಿದ್ದಾರೆ.

click me!