ಪೇಜಾವರ ಶ್ರೀಗೆ ಪದ್ಮವಿಭೂಣ, ಕರುನಾಡಿನ ಇತರೆ 7 ಸಾಧಕರಿಗೆ ಪದ್ಮಶ್ರೀ ಪ್ರಶಸ್ತಿ

Published : Jan 25, 2020, 09:49 PM IST
ಪೇಜಾವರ ಶ್ರೀಗೆ ಪದ್ಮವಿಭೂಣ, ಕರುನಾಡಿನ ಇತರೆ 7 ಸಾಧಕರಿಗೆ ಪದ್ಮಶ್ರೀ ಪ್ರಶಸ್ತಿ

ಸಾರಾಂಶ

71ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಭಾರತದ ನಾಗರೀಕ ಪ್ರಶಸ್ತಿಗಳ ಘೋಷಣೆಯಾಗಿದೆ. 118 ಪದ್ಮಶ್ರೀ,  7 ಪದ್ಮವಿಭೂಷಣ ಹಾಗೂ 16 ಪದ್ಮಭೂಷಣ ಪ್ರಶಸ್ತಿಗಳನ್ನು ನೀಡಲಾಗಿದೆ. ಇದರಲ್ಲಿ  ಕರ್ನಾಟಕದ 8 ಸಾಧಕರಿಗೆ ಪ್ರಶಸ್ತಿ ಲಭಿಸಿರುವುದು ವಿಶೇಷ.

ಬೆಂಗಳೂರು, (ಜ.25): 71ನೇ ಗಣರಾಜ್ಯೋತ್ಸವ ಹಿನ್ನೆಲೆ 2020ನೇ ಸಾಲಿನ  ಪದ್ಮವಿಭೂಷಣ,  ಪದ್ಮಭೂಷಣ ಹಾಗೂ ಪದ್ಮಶ್ರೀ ಪ್ರಶಸ್ತಿ ಘೋಷಣೆಯಾಗಿದೆ.

118 ಪದ್ಮಶ್ರೀ,  7 ಪದ್ಮವಿಭೂಷಣ ಹಾಗೂ 16 ಪದ್ಮಭೂಷಣ ಪ್ರಶಸ್ತಿಗಳನ್ನು ನೀಡಲಾಗಿದು, ಒಟ್ಟು 141 ಸಾಧಕರಿಗೆ ಪ್ರಶಸ್ತಿ ಲಭಿಸಿವೆ. ಈ ಪೈಕಿ ಕರ್ನಾಟಕದ 8 ಸಾಧಕರಿಗೆ ಪ್ರತಿಷ್ಠಿತ ಪ್ರಶಸ್ತಿಗಳು ಲಭಿಸಿವೆ.

2020ರ ಪದ್ಮ ಪ್ರಶಸ್ತಿ ಪ್ರಕಟ: ಇಲ್ಲಿದೆ ಸಾಧಕರ ಪಟ್ಟಿ!

ಪೇಜಾವರ ಶ್ರೀಗಳಿಗೆ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಇನ್ನು, ಅಕ್ಷರ ಸಂತ ಮಂಗಳೂರಿನ ಹರೇಕಳ ಹಾಜಬ್ಬಗೆ ಪದ್ಮಶ್ರೀ ಪ್ರಶಸ್ತಿಯ ಗೌರವ ಸಿಕ್ಕಿದ್ರೆ. ಉತ್ತರ ಕನ್ನಡದ ಹಾಲಕ್ಕಿ ಸಮುದಾಯದ ಪರಿಸರ ರಕ್ಷಕಿ ತುಳಸೀಗೌಡಗೆ ಪದ್ಮಶ್ರೀ ಗೌರವ ಸಿಕ್ಕಿದೆ. 

ಕ್ರೀಡಾ ಕ್ಷೇತ್ರದಲ್ಲಿ ಎಂ.ಪಿ. ಗಣೇಶ್ , ವೈದ್ಯಕೀಯ ಕ್ಷೇತ್ರದಲ್ಲಿ ಡಾ. ಬೆಂಗಳೂರು ಗಂಗಾಧರ್, ಉದ್ಯಮಿ ವಿಜಯ ಸಂಕೇಶ್ವರ್ , ಸಾಹಿತ್ಯ ಕ್ಷೇತ್ರದಲ್ಲಿ ಕೆ.ವಿ. ಸಂಪತ್ ಕುಮಾರ್ , ವಿದುಷಿ ಜಯಲಕ್ಷ್ಮೀಗೆ ಪದ್ಮಶ್ರೀ ಗೌರವ ನೀಡಿ ಗೌರವಿಸಲಾಗಿದೆ.  

ಕನ್ನಡಪ್ರಭ-ಸುವರ್ಣ ನ್ಯೂಸ್ ವರ್ಷದ ವ್ಯಕ್ತಿಗೆ ಪದ್ಮಶ್ರೀ ಪ್ರಶಸ್ತಿ

ಕರ್ನಾಟಕದ 8 ಸಾಧಕರಿಗೆ ಪ್ರಶಸ್ತಿ
1. ಹರೇಕಳ ಹಾಜಬ್ಬ- ಪದ್ಮಶ್ರೀ (ಶಿಕ್ಷಣ)
2.ತುಳಸೀಗೌಡ-ಪದ್ಮಶ್ರೀ  (ಪರಿಸರ)
3. ಎಂ.ಪಿ. ಗಣೇಶ್-ಪದ್ಮಶ್ರೀ  (ಕ್ರೀಡಾ ಕ್ಷೇತ್ರ)
4. ಡಾ. ಬೆಂಗಳೂರು ಗಂಗಾಧರ್-ಪದ್ಮಶ್ರೀ  (ವೈದ್ಯಕೀಯ)
5. ಕೆ.ವಿ. ಸಂಪತ್ ಕುಮಾರ್ -ಪದ್ಮಶ್ರೀ (ಶಿಕ್ಷಣ ಕ್ಷೇತ್ರ)
6.ವಿಜಯ ಸಂಕೇಶ್ವರ್ -ಪದ್ಮಶ್ರೀ (ಉದ್ಯಮ)
7.ವಿದುಷಿ ಜಯಲಕ್ಷ್ಮೀ ಕೆ.ಎಸ್.-ಪದ್ಮಶ್ರೀ (Education-Journalism)

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ
ನಾನು ಕೃಷ್ಣತತ್ತ್ವ ನಂಬಿದವನೇ ಹೊರತು, ಕಾಂಗ್ರೆಸ್‌ನ ಕಂಸ ಹಿಂಸೆಯನ್ನಲ್ಲ: ಹೆಚ್.ಡಿ.ಕುಮಾರಸ್ವಾಮಿ!