ಲಸಿಕೆ ಪಡೆಯಲು ರಾಜ್ಯದ ಕೆಲವೆಡೆ ನೂಕುನುಗ್ಗಲು!

Kannadaprabha News   | Asianet News
Published : Jul 04, 2021, 07:50 AM IST
ಲಸಿಕೆ ಪಡೆಯಲು ರಾಜ್ಯದ ಕೆಲವೆಡೆ ನೂಕುನುಗ್ಗಲು!

ಸಾರಾಂಶ

* ಬೆಂಗಳೂರು, ಬೆಳಗಾವಿ ಸೇರಿ ಕೆಲವೆಡೆ ಘಟನೆ * ಕೋವಿಡ್‌ ಲಸಿಕೆ ಹಾಕುವಲ್ಲಿ ಉಡುಪಿ ಜಿಲ್ಲೆ ಅತ್ಯುತ್ತಮ ಸಾಧನೆ  * ಟೋಕನ್‌ ಸಿಗದಿದ್ದಕ್ಕೆ ಜನರ ಆಕ್ರೋಶ 

ಬೆಂಗಳೂರು(ಜು.04): ವೀಕೆಂಡ್‌ ಹಿನ್ನೆಲೆಯಲ್ಲಿ ಕೊರೋನಾ ಲಸಿಕೆ ಪಡೆಯಲು ಹೆಚ್ಚಿನ ಸಂಖ್ಯೆ ಜನರು ಆಗಮಿಸಿದ್ದರಿಂದ ರಾಜಧಾನಿ ಬೆಂಗಳೂರು, ಬೆಳಗಾವಿ, ಕಾರಾವಾರ ಸೇರಿದಂತೆ ಕೆಲವು ಲಸಿಕಾ ಕೇಂದ್ರಗಳಲ್ಲಿ ನೂಕುನುಗ್ಗಲು ಉಂಟಾದ ಘಟನೆ ಶನಿವಾರ ನಡೆದಿದೆ.

ಬೆಂಗಳೂರಿನ ಕೆ.ಸಿ.ಜನರಲ್‌ ಆಸ್ಪತ್ರೆಯ ಲಸಿಕೆ ಕೇಂದ್ರದ ಬಳಿ ಲಸಿಕೆಗೆ ಮುಗಿಬಿದ್ದರು. ಇನ್ನು ಬೆಳಗಾವಿಯ ಸಮಾದೇವಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಲಸಿಕಾ ಶಿಬಿರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದ್ದರಿಂದ ನೂಕು ನುಗ್ಗಲು ಉಂಟಾಗಿತ್ತು.

ರಾಜ್ಯದಾದ್ಯಂತ ಕೋವಿಡ್‌ ಲಸಿಕೆ ಕೊರತೆ, ಜನರ ಪರದಾಟ

ಕಾರವಾರದ ಮೆಡಿಕಲ್‌ ಕಾಲೇಜಿನಲ್ಲಿ ಜನತೆ ಮುಗಿ ಬಿದ್ದು ಬಾಗಿಲಿನಲ್ಲಿ ನೂಕಾಟ ನಡೆಸಿ ಲಸಿಕೆ ಕೇಂದ್ರಕ್ಕೆ ನುಗ್ಗಲು ಪ್ರಯತ್ನಿಸಿದರು. 150 ಜನರಿಗೆ ಟೋಕನ್‌ ನೀಡಲಾಗಿತ್ತು. ಆದರೆ 500ಕ್ಕೂ ಹೆಚ್ಚು ಜನರು ಲಸಿಕೆ ಪಡೆಯಲು ಆಗಮಿಸಿದ್ದರಿಂದ ಟೋಕನ್‌ ಸಿಗದವರು ಲಸಿಕೆ ಕೊರತೆಗೆ ಕಿಡಿಕಾರಿದ್ದ ಕಂಡು ಬಂದಿತ್ತು.

ಅಲ್ಲದೇ ಕೋವಿಡ್‌ ಲಸಿಕೆ ಹಾಕುವಲ್ಲಿ ಉಡುಪಿ ಜಿಲ್ಲೆ ಅತ್ಯುತ್ತಮ ಸಾಧನೆ ಮಾಡಿದ್ದು, ರಾಜ್ಯಕ್ಕೆ 2ನೇ ಸ್ಥಾನದಲ್ಲಿದೆ. ಆದರೆ ಜಿಲ್ಲೆಗೆ ನಿಯಮಿತವಾಗಿ ಲಸಿಕೆ ಪೂರೈಕೆ ಇಲ್ಲದೆ ಸುಮಾರು 2 ಲಕ್ಷ ಮಂದಿ ಲಸಿಕೆಗೆ ಕಾಯುವಂತಾಗಿದೆ. ಜಿಲ್ಲೆಯಲ್ಲಿ ಸುಮಾರು 10 ಲಕ್ಷ ಮಂದಿ ಲಸಿಕೆ ಪಡೆಯಲು ಅರ್ಹರಿದ್ದಾರೆ. ಅವರಲ್ಲಿ 5.42 ಲಕ್ಷ ಮಂದಿ ಈಗಾಗಲೇ ಲಸಿಕೆ ಪಡೆದಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!