ಕರ್ಫ್ಯೂ ಇದ್ದರೂ ಕೋವಿಡ್‌ ಟೆಸ್ಟ್‌, ಲಸಿಕೆಗೆ ಜನಸಂದಣಿ

Kannadaprabha News   | Asianet News
Published : Apr 25, 2021, 07:29 AM IST
ಕರ್ಫ್ಯೂ ಇದ್ದರೂ ಕೋವಿಡ್‌ ಟೆಸ್ಟ್‌, ಲಸಿಕೆಗೆ ಜನಸಂದಣಿ

ಸಾರಾಂಶ

ರಾಜ್ಯಾದ್ಯಂತ ಕರ್ಫ್ಯೂ ಇದ್ದರು ಸಹ ಕೋವಿಡ್ ಲಸಿಕೆ ಪಡೆಯಲು ಜನರು ಹೆಚ್ಚು ಸಂಖ್ಯೆಯಲ್ಲಿ ತೆರಳುತ್ತಿದ್ದಾರೆ. ಕರ್ಫ್ಯೂ ನಡುವೆಯೂ ಲಸಿಕೆ ಪಡೆಯಲು ಜನಸಂದಣಿಯಾಗುತ್ತಿದೆ. 

ಬೆಂಗಳೂರು (ಏ.25): ವಾರಾಂತ್ಯದ ಕಫä್ರ್ಯ ವೇಳೆ ವೈದ್ಯಕೀಯ ಸೇವೆಗಳಿಗೆ ಅವಕಾಶ ಮುಕ್ತವಾಗಿದ್ದ ಹಿನ್ನೆಲೆಯಲ್ಲಿ ಶನಿವಾರ ಮೈಸೂರು, ತುಮಕೂರು ಸೇರಿದಂತೆ ರಾಜ್ಯದ ಕೆಲವೆಡೆಗಳಲ್ಲಿ ನಾಗರಿಕರು ಆರೋಗ್ಯ ಕೇಂದ್ರಗಳಲ್ಲಿ ಕೊರೋನಾ ಪರೀಕ್ಷೆ ಹಾಗೂ ಕೋವಿಡ್‌ ಲಸಿಕೆ ಹಾಕಿಸಿಕೊಳ್ಳಲು ಜನಸಂದಣಿ ಏರ್ಪಟ್ಟದೃಶ್ಯ ಕಂಡುಬಂತು.

ಮೈಸೂರಿನ ದೇವರಾಜ ಮಾರುಕಟ್ಟೆಯ ಚಿಕ್ಕ ಗಡಿಯಾರ ಬಳಿಯ ಕೊರೋನಾ ತಪಾಸಣಾ ಕೇಂದ್ರ ಸೇರಿ ವಿವಿಧ ಕಡೆಗಳಲ್ಲಿರುವ ಕೊರೋನಾ ತಪಾಸಣಾ ಕೇಂದ್ರಗಳಲ್ಲಿ ಎಂದಿನಂತೆ ಯಾವುದೇ ಅಡೆತಡೆಗಳಿಲ್ಲದೆ ಕೋವಿಡ್‌ ಪರೀಕ್ಷೆ ನಡೆಯಿತು. ಈ ಪರೀಕ್ಷೆ ಮಾಡಿಸಿಕೊಳ್ಳಲು ಮಕ್ಕಳು, ಮಹಿಳೆಯರು, ವೃದ್ಧರು ಸೇರಿದಂತೆ ಎಲ್ಲಾ ವಯೋಮಾನವದರು ಆಗಮಿಸಿದ್ದರು. ವಿವಿಧ ಲಸಿಕಾ ಕೇಂದ್ರಗಳಲ್ಲಿ 45 ವರ್ಷ ಮೇಲ್ಪಟ್ಟವರು ಕೋವಿಡ್‌ ಲಸಿಕೆ ಪಡೆದರು.

ಬೆಂಗಳೂರು: ಒಂದೇ ದಿನ 149 ಮಂದಿ ಸಾವು, ಸಾವಿನಲ್ಲೂ ಕೊರೋನಾ ದಾಖಲೆ..! .

ಇನ್ನು ತುಮಕೂರಿನ ಜಿಲ್ಲಾಸ್ಪತ್ರೆ ಆವರಣದಲ್ಲಿ 300ಕ್ಕೂ ಅಧಿಕ ಮಂದಿ ಆಗಮಿಸಿ ಸರತಿ ಸಾಲಿನಲ್ಲಿ ನಿಂತು ಕೋವಿಡ್‌ ಟೆಸ್ಟ್‌ ಮಾಡಿಸಿಕೊಂಡರು. ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಪಂಡಿತ ಸಾರ್ವಜನಿಕ ಆಸ್ಪತ್ರೆಯ ಹೊರಭಾಗದಲ್ಲಿ ಹಾಕಿದ್ದ ಟೆಂಟ್‌ನಲ್ಲಿ ಜನ ಕಾದು ಕುಳಿತು ಲಸಿಕೆ ಹಾಕಿಸಿಕೊಂಡರು. ಕುಮಟಾ, ರಾಣಿಬೆನ್ನೂರು ಆಸ್ಪತ್ರೆಯಲ್ಲೂ ಜನ ತಂಡೋಪತಂಡವಾಗಿ ಆಗಮಿಸಿ ವೈದ್ಯಕೀಯ ಸೇವೆ ಪಡೆದುಕೊಂಡರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಬೆಳಗ್ಗೆ 8 ಗಂಟೆಗೆ ಆಗಮಿಸಿ ಸರತಿ ಸಾಲಿನಲ್ಲಿ ನಿಂತರೂ 11 ಗಂಟೆವರೆಗೂ ವೈದ್ಯರ, ಆರೋಗ್ಯ ಸಿಬ್ಬಂದಿಯ ನೆರವು ದಕ್ಕಲಿಲ್ಲ ಎಂಬ ಆರೋಪ ಕೇಳಿಬಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ
ನಾನು ಕೃಷ್ಣತತ್ತ್ವ ನಂಬಿದವನೇ ಹೊರತು, ಕಾಂಗ್ರೆಸ್‌ನ ಕಂಸ ಹಿಂಸೆಯನ್ನಲ್ಲ: ಹೆಚ್.ಡಿ.ಕುಮಾರಸ್ವಾಮಿ!