ಕ್ಯಾನ್ಸರ್‌, ಹೃದ್ರೋಗ ಔಷಧ ಸಿಗದೆ ಜನರ ಪರದಾಟ!

Published : Apr 20, 2020, 12:46 PM IST
ಕ್ಯಾನ್ಸರ್‌, ಹೃದ್ರೋಗ ಔಷಧ ಸಿಗದೆ ಜನರ ಪರದಾಟ!

ಸಾರಾಂಶ

ಕ್ಯಾನ್ಸರ್‌, ಹೃದ್ರೋಗ ಔಷಧ ಸಿಗದೆ ಜನರ ಪರದಾಟ| ಸಿವಿಟಿ, ಅಸ್ತಮಾ, ಬೀಪಿ, ಕಿಡ್ನಿ ಸಮಸ್ಯೆಗೂ ಔಷಧಗಳ ಕೊರತೆ| ತಾಲೂಕು ಕೇಂದ್ರಗಳಲ್ಲಿ ಔಷಧವಿಲ್ಲ, ಹೊರಗೆ ಹೋಗಲು ಅನುಮತಿಯಿಲ್ಲ

ಬೆಂಗಳೂರು(ಏ.20): ರಾಜ್ಯದಲ್ಲಿ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಬೆಂಗಳೂರೇತರ ನಗರ, ಪಟ್ಟಣ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ಕ್ಯಾನ್ಸರ್‌, ಹೃದ್ರೋಗ ಸಮಸ್ಯೆ, ಸಿವಿಟಿ (ಮೆದುಳಲ್ಲಿ ರಕ್ತ ಹೆಪ್ಪುಗಟ್ಟಿರುವುದು) ಮುಂತಾದ ಗಂಭೀರ ಸಮಸ್ಯೆಯುಳ್ಳವರಿಗೆ ಔಷಧಗಳು ದೊರೆಯದೆ ತೀವ್ರ ತೊಂದರೆ ಉಂಟಾಗಿದೆ.

ಕ್ಯಾನ್ಸರ್‌, ಹೃದ್ರೋಗ ಸಮಸ್ಯೆ, ಸಿವಿಟಿ, ಅಸ್ತಮಾ, ಅಧಿಕ ರಕ್ತದೊತ್ತಡ, ಕಿಡ್ನಿ ಕಸಿ ಮತ್ತಿತರ ಸಮಸ್ಯೆಯುಳ್ಳವರು ನಿರಂತರವಾಗಿ ಔಷಧ ಸೇವನೆ ಮಾಡಬೇಕು. ಆದರೆ, ಕೆಲವೊಂದು ತಾಲೂಕು ಮಟ್ಟದ ಔಷಧಾಲಯಗಳಲ್ಲಿ ಮಧುಮೇಹ ಕಾಯಿಲೆಗೂ ಸಹ ಔಷಧಗಳು ದೊರೆಯದಂತಾಗಿದೆ.

ಬೆಂಗಳೂರು ಸುತ್ತಮುತ್ತಲಿನ ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ರಾಮನಗರ, ಚಿತ್ರದುರ್ಗ ಮತ್ತಿತರ ಜಿಲ್ಲೆಗಳು ಮಾತ್ರವಲ್ಲದೆ ಉತ್ತರ ಕರ್ನಾಟಕದ ನಾಗರಿಕರು ಹೃದ್ರೋಗ ಸಮಸ್ಯೆಗೆ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಬರುತ್ತಾರೆ. ಇದೀಗ ಲಾಕ್‌ಡೌನ್‌ನಿಂದಾಗಿ ಒಂದೂವರೆ ತಿಂಗಳಾದರೂ ಮಾತ್ರೆಗಳನ್ನು ಕೊಳ್ಳಲು ಬರುವುದಕ್ಕೆ ಸಾಧ್ಯವಾಗಿಲ್ಲ.

ಕಿದ್ವಾಯಿಯಲ್ಲಿ ಚಿಕಿತ್ಸೆ ಪಡೆದಿರುವ ರೋಗಿಗಳು ಇಲ್ಲೇ ಬಂದು ಔಷಧ ತೆಗೆದುಕೊಳ್ಳಬೇಕು. ಸಾಮಾನ್ಯ ರೋಗಿಗಳಿಗೆ 2 ವಾರ ಔಷಧ ತಡವಾದರೂ ಸಮಸ್ಯೆ ಇಲ್ಲ. ಆದರೆ ಲಾಕ್‌ಡೌನ್‌ ದೀರ್ಘವಾಗಿರುವುದರಿಂದ ತುರ್ತು ಸಮಸ್ಯೆಯಿರುವ ರೋಗಿಗಳು ಹತ್ತಿರದ ಕ್ಯಾನ್ಸರ್‌ ತಜ್ಞರನ್ನು ಸಂಪರ್ಕಿಸಿದರೆ ಯಾವ ಬದಲಿ ಔಷಧ ನೀಡಬಹುದು ಎಂಬುದನ್ನು ನಾವು ಸಲಹೆ ನೀಡುತ್ತೇವೆ.

- ಡಾ.ಸಿ.ರಾಮಚಂದ್ರ, ನಿರ್ದೇಶಕ, ಕಿದ್ವಾಯಿ ಕ್ಯಾನ್ಸರ್‌ ಆಸ್ಪತ್ರೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ