ಬಂದ್‌ಗೆ ಕರೆ ನೀಡಿದವರಿಂದ 10 ಲಕ್ಷ ರೂ. ಬಾಂಡ್‌: ರಾವ್‌

Published : Feb 13, 2020, 08:49 AM ISTUpdated : Feb 13, 2020, 09:13 AM IST
ಬಂದ್‌ಗೆ ಕರೆ ನೀಡಿದವರಿಂದ 10 ಲಕ್ಷ ರೂ. ಬಾಂಡ್‌: ರಾವ್‌

ಸಾರಾಂಶ

ಬಂದ್‌ಗೆ ಕರೆ ನೀಡಿದವರಿಂದ .10 ಲಕ್ಷದ ಬಾಂಡ್‌: ರಾವ್‌| ಅಹಿತಕರ ಘಟನೆ ನಡೆದರೆ ಹೊಣೆ ಮಾಡಲು ಬಾಂಡ್‌: ಆಯುಕ್ತ

ಬೆಂಗಳೂರು[ಫೆ.13]: ನಗರದಲ್ಲಿ ಗುರುವಾರ ಬಂದ್‌ ಆಚರಣೆಗೆ ಅನುಮತಿ ನೀಡಿಲ್ಲ. ಅಹಿತಕರು ಘಟನೆಗಳು ನಡೆದರೆ ಬಂದ್‌ಗೆ ಕರೆ ನೀಡಿದವರನ್ನೇ ಹೊಣೆಗಾರನ್ನಾಗಿ ಮಾಡಲು .10 ಲಕ್ಷದ ಬಾಂಡ್‌ ಬರೆಸಿಕೊಳ್ಳಲಾಗಿದೆ ಎಂದು ನಗರ ಪೊಲೀಸ್‌ ಆಯುಕ್ತ ಎಸ್‌.ಭಾಸ್ಕರ್‌ ರಾವ್‌ ಹೇಳಿದ್ದಾರೆ.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಆಯುಕ್ತರು, ತಮ್ಮ ಬೇಡಿಕೆಗಳ ಆಗ್ರಹಿಸಿ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್ವರೆಗೆ ಪ್ರತಿಭಟನಾ ರಾರ‍ಯಲಿ ಆಯೋಜನೆಗೆ ಮಾತ್ರ ಸಂಘಟನೆಗಳಿಗೆ ಅನುಮತಿ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು.

ಅಪಘಾತದಲ್ಲಿ ಮೂಳೆ ಕಟ್‌: ಪರಿಹಾರ ಮೊತ್ತ ಕೇಳಿ ವಿಮಾ ಕಂಪನಿ ತಬ್ಬಿಬ್ಬು

ಬಂದ್‌ ವೇಳೆ ಯಾವುದೇ ರೀತಿ ಅಹಿತಕರ ಘಟನೆಗಳು ಸಂಭವಿಸದಂತೆ ಎಚ್ಚರಿಕೆ ವಹಿಸಲಾಗಿದೆ. ಕೆಲವರು ಮುಂಜಾನೆ ವೇಳೆ ಟೈರ್‌ಗಳಿಗೆ ಬೆಂಕಿ ಹಚ್ಚಿ ಜನರಲ್ಲಿ ಭೀತಿ ಮೂಡಿಸಲು ಯತ್ನಿಸುತ್ತಾರೆ. ಹೀಗಾಗಿ ನಸುಕಿನ 4.30ರಿಂದ ಎಲ್ಲ ಡಿಸಿಪಿಗಳು ಸೇರಿದಂತೆ ಪೊಲೀಸರಿಗೆ ಬಂದೋಸ್‌್ತಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.

ನಗರದಲ್ಲಿ ಬಂದ್‌ಗೆ ಅವಕಾಶ ನೀಡಿಲ್ಲ. ಶಾಂತಿ ಭಂಗ ಉಂಟು ಮಾಡಿದರೆ ಬಂದ್‌ಗೆ ಕರೆ ನೀಡಿದ ಸಂಘಟನೆಗಳ ಜವಾಬ್ದಾರಿ ಮಾಡಲಾಗುತ್ತದೆ. ಇದಕ್ಕಾಗಿ ಈಗಾಗಲೇ ಅವರಿಂದ .10 ಲಕ್ಷದ ಬಾಂಡ್‌ ಪಡೆಯಲಾಗಿದೆ ಎಂದು ಹೇಳಿದರು.

ಎಂದಿನಂತೆ ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳು ಕಾರ್ಯನಿರ್ವಹಿಸುತ್ತವೆ. ವಾಣಿಜ್ಯ ವಹಿವಾಟಿಗೆ ಯಾವುದೇ ತೊಂದರೆ ಇಲ್ಲ. ಬಲವಂತವಾಗಿ ಬಂದ್‌ ಆಚರಣೆಗೆ ಯತ್ನಿಸಿದರೆ ಕಠಿಣ ಕ್ರಮ ಜರುಗಿಸಲಾಗುತ್ತದೆ ಎಂದು ನುಡಿದರು.

ಇಂದು ಬಂದ್‌ ಆಗುತ್ತಾ?: ಕೆಲ ಸಂಘಟನೆಗಳ ಬೆಂಬಲ, ಇನ್ನು ಕೆಲವರದು ಇಲ್ಲ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಅನುದಾನಿತ ಶಾಲೆಯಲ್ಲಿ 9ನೇ ಕ್ಲಾಸ್ ಹುಡ್ಗೀರ ಎಣ್ಣೆ ಪಾರ್ಟಿ; ವೈರಲ್ ವಿಡಿಯೋ ಆಧರಿಸಿ 6 ವಿದ್ಯಾರ್ಥಿನಿಯರು ಅಮಾನತು!
ವಿಶ್ವ ಕನ್ನಡ ಹಬ್ಬ' ಹೆಸರಿನಲ್ಲಿ ಕೋಟಿ ಕೋಟಿ ವಂಚನೆ ಆರೋಪ: ಮಹಿಳೆಯರಿಗೆ ಪದವಿ ಆಮಿಷ; ಸರ್ಕಾರದ ₹40 ಲಕ್ಷ ದುರ್ಬಳಕೆ!