
ಬೆಂಗಳೂರು, (ಡಿ.23): ಕೊರೋನಾ ವೈರಸ್ ಲಂಡನ್ನಲ್ಲಿ ರೂಪಾಂತರವಾಗಿದೆ ಎನ್ನುವ ವಿಚಾರ ಸಾಕಷ್ಟು ಆತಂಕ ಮೂಡಿಸಿದೆ. ಈ ಬೆನ್ನಲ್ಲೇ ರಾಜ್ಯದಲ್ಲಿ ಡಿ.24ರ ರಾತ್ರಿ 11 ಗಂಟೆಯಿಂದ ಬೆಳಗ್ಗೆ 5ರ ವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗುತ್ತಿದೆ.
ಆದ್ರೆ, ಈ ನೈಟ್ ಕರ್ಫ್ಯೂ ಕ್ರಮಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡಲಾಗುತ್ತಿದ್ದು, ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ವ್ಯಂಗ್ಯವಾಗಿ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.
ರಾಜ್ಯದಲ್ಲಿ ನೈಟ್ ಕರ್ಫ್ಯೂ ಡೇಟ್, ಟೈಮಿಂಗ್ ಬದಲಾವಣೆ: ಸಿಎಂ ಮಹತ್ವದ ಆದೇಶ
ಜನರು ಓಡಾಡದ ಸಂದರ್ಭದಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ. ಅಂದ್ರೆ, ಎಲ್ಲರೂ ಮಲಗಿದ ಮೇಲೆ ಕೊರೋನಾ ಓಡಾಡುತ್ತಿರುತ್ತಾ..? ಈ ಕೊರೋನಾ ರಾತ್ರಿ ಅಷ್ಟೇ ಇರುತ್ತಾ..? ಅಂತೆಲ್ಲಾ ಹಾಸ್ಯ ಚಟಾಕೆ ಹಾರಿಸುತ್ತಿದ್ದಾರೆ.
ನೈಟ್ ಕರ್ಫ್ಯೂ ಜಾರಿ ಮಾಡಿದ್ರೆ ಕೊರೋನಾ ಬರಲ್ವಾ..? ಇದು ರಾತ್ರಿ ಅಷ್ಟೆ ಹರಡುತ್ತಾ..? ಇದು ನೈಟ್ ಶಿಫ್ಟ್ ಕೊರೋನಾ ಅಂತೆಲ್ಲಾ ಬರೆದುಕೊಂಡಿದ್ದಾರೆ.
ಇನ್ನು ಈ ಬಗ್ಗೆ ಮಾಜಿ ಸಚಿವ ಹೆಚ್.ಸಿ. ಮಹಾದೇವಪ್ಪ ಸರ್ಕಾರದ ಈ ಕಾಟಾಚಾರದ ನೈಟ್ ಕರ್ಫ್ಯೂ ನಿರ್ಧಾರಕ್ಕೆ ಚಾಟಿ ಬೀಸಿದ್ದು, ರಾತ್ರಿ ಮಾತ್ರ ಎಚ್ಚರವಿರಲು ಕೊರೋನಾ ಏನು ಗೂಬೇನಾ? ಕೋವಿಡ್ ನೆಗೆಟಿವ್ ರಿಪೋರ್ಟ್ ಇಲ್ಲದೇ ಬಿಟ್ಟುಕೊಂಡಿರುವುದು ಸರ್ಕಾರದ ನಿರ್ಲಕ್ಷ್ಯ ತೋರುತ್ತದೆ ಎಂದು ಕಿಡಿಕಾರಿದ್ದಾರೆ.
ಜನರು ಮಲಗಿದ ಮೇಲೆ ನೈಟ್ ಕರ್ಫ್ಯೂ ಜಾರಿಯಿಂದ ಕೊರೋನಾ ತಡೆಗಟ್ಟಲು ಸಾಧ್ಯನಾ? ನೈಟ್ ಕರ್ಫ್ಯೂ ಬಗ್ಗೆ ಸರ್ಕಾರವೇ ಸ್ಪಷ್ಟನೆ ಕೊಡಬೇಕಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ