
ಬೆಂಗಳೂರು, (ಮೇ.08): ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಮತ್ತಷ್ಟು ಕೆಲ ಕಠಿಣ ನಿಯಮಗಳನ್ನು ಕೈಗೊಳ್ಳುತ್ತಿದೆ.
ಅದರಲ್ಲೂ ಈಗ ಮದುವೆ ಸೀಜನ್ ಇರುವುದರಿಂದ ಒಂದೇ ಕಡೆ ಹೆಚ್ಚು ಜನರು ಗುಂಪು-ಗುಂಪಾಗಿ ಸೇರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇದನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಮದುವೆ ಸಮಾರಂಭದಲ್ಲಿ ಭಾಗಿಯಾಗುವ ಜನರ ಸಂಖ್ಯೆಯನ್ನು ಸಹ ನಿಗದಿಪಡಿಸಿ ಆದೇಶ ಹೊರಡಿಸಿದೆ.
ಮದುವೆಗೆ ಬಂದ ಅತಿಥಿಗಳಿಗೆ ಲಾಠಿ ಭೋಜನ.. ಹೆಚ್ಚಿನ ಜನ ಸೇರಿದ್ರೆ!
ಮದುವೆ ಸಮಾರಂಭದಲ್ಲಿ ಭಾಗಿಯಾಗಲು 50 ಜನರಿಗೆ ಮಾತ್ರ ಸರ್ಕಾರ ಅನುಮತಿ ನೀಡಿತ್ತು. ಆದ್ರೆ, ಇದೀಗ ಇದನ್ನು 40ಕ್ಕೆ ಇಳಿಸಿ ಸರ್ಕಾರ ಪರಿಷ್ಕೃತ ಆದೇಶ ಹೊರಡಿಸಿದೆ.
ಹೌದು... ಮದುವೆ ಸಮಾರಂಭದಲ್ಲಿ ಭಾಗಿಯಾಗಲು ಸರ್ಕಾರ ಕೇವಲ 40 ಜನರಿಗಷ್ಟೇ ಅವಕಾಶ ಕಲ್ಪಿಸಿ ಇಂದು (ಶನಿವಾರ) ಹೊಸ ಆದೇಶ ಹೊರಡಿಸಿದೆ. ಸಮುದಾಯ ಭವನ, ಕಲ್ಯಾಣ ಮಂಟಪಗಳಲ್ಲಿ ಮದುವೆ ಮಾಡಲು ಸರ್ಕಾರ ಅನುಮತಿ ನಿರಾಕರಿಸಿದ್ದು, ಕೇವಲ ಮನೆಗಳಲ್ಲಿ ಮಾತ್ರ ಮದುವೆ ಸಮಾರಂಭ ನಡೆಸಲು ಪರಿಷ್ಕೃತ ಆದೇಶದಲ್ಲಿ ಉಲ್ಲೇಖಿಸಿದೆ.
ಇನ್ನು ಮುಖ್ಯವಾಗಿ ಮದುವೆಗೆ ಹೋಗಬೇಕಾದರೆ ಪಾಸ್ ಕಡ್ಡಾಯವಾಗಿದ್ದು, ಆಹ್ವಾನ ಪತ್ರಿಕೆ ತೋರಿಸಿ ಬಿಬಿಎಂಪಿ ಅಥವಾ ಆಯಾ ತಾಲೂಕಿ ತಹಶೀಲ್ದಾರ್ ರಿಂದ ಅನುಮತಿ ಪಡೆದು ಮದುವೆ ಕಾರ್ಯಕ್ರಮಕ್ಕೆ ತೆರಳಬೇಕು.
ರಾಜ್ಯದಲ್ಲಿ ಕೋವಿಡ್ 2ನೇ ಅಲೆ ದಿನದಿಂದ ದಿನಕ್ಕೆ ಹೆಚ್ಚಳವಾಗುತಿರುವುದರಿಂದ ಬಿಎಸ್ವೈ ಸರ್ಕಾರ ಮೇ.10ರಿಂದ ಮೇ.24ರವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ