
ನವದೆಹಲಿ(ಜು.03): ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆಯಲ್ಲಿ (ನ್ಯಾಷನಲ್ ಲಾ ಸ್ಕೂಲ್) ಕನ್ನಡಿಗ ವಿದ್ಯಾರ್ಥಿಗಳಿಗೆ ಶೇ.25 ಮೀಸಲು ನೀಡಿರುವ ಕರ್ನಾಟಕ ಸರ್ಕಾರದ ನಿರ್ಧಾರ ಪ್ರಶ್ನಿಸಿ ದಿಲ್ಲಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿದೆ.
ಗುರುವಾರ ಈ ಅರ್ಜಿ ಮುಖ್ಯ ನ್ಯಾ ಡಿ.ಎನ್.ಪಟೇಲ್ ಹಾಗೂ ನ್ಯಾ ಪ್ರತೀಕ್ ಜಲಾನ್ ಅವರ ಪೀಠದ ಮುಂದೆ ಈ ಅರ್ಜಿ ವಿಚಾರಣೆಗೆ ಬಂತು. ಆದರೆ ಅವರು ವಿಚಾರಣೆಯಿಂದ ಹಿಂದೆ ಸರಿದು ಬೇರೆ ಪೀಠವು ಇದರ ವಿಚಾರಣೆ ನಡೆಸಬೇಕು ಎಂದು ಸೂಚಿಸಿದರು.
‘ಪ್ರತಿಜ್ಞೆ’ಗೂ ಮುನ್ನ ಮನೆಯಲ್ಲಿ ಡಿಕೆಶಿ ಪೂಜೆ, ಕೆಪಿಸಿಸಿ ಕಚೇರಿಯಲ್ಲಿ ಅರಳಿ ಮರಕ್ಕೂ ಪೂಜೆ
ದಿಲ್ಲಿ ಹೈಕೋರ್ಟ್ನ ಬೇರೆ ಪೀಠ ದಿಲ್ಲಿ ಕಾನೂನು ವಿವಿಯಲ್ಲಿ ತರಲಾದಂಥ ‘ಸ್ಥಳೀಯರಿಗೆ ಶೇ.50 ಮೀಸಲು’ ನಿಯಮಕ್ಕೆ ತಡೆ ನೀಡಿತ್ತು. ಇದೇ ಮಾದರಿಯಲ್ಲಿ ಬೆಂಗಳೂರಿನ ಕಾನೂನು ಕಾಲೇಜಿನಲ್ಲಿ ತರಲಾದ ಶೇ.25 ‘ಸ್ಥಳೀಯ (ಕನ್ನಡಿಗ) ಮೀಸಲು’ ನಿಯಮ ರದ್ದುಗೊಳಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ. ಕಳೆದ ಮಾಚ್ರ್ನಲ್ಲಿ ಕರ್ನಾಟಕ ವಿಧಾನಸಭೆ ರಾಷ್ಟ್ರೀಯ ಕಾನೂನು ಶಾಲೆ (ತಿದ್ದುಪಡಿ) ವಿಧೇಯಕಕ್ಕೆ ಅಂಗೀಕಾರ ನೀಡಿ ಸ್ಥಳೀಯರಿಗೆ ಮೀಸಲು ನೀಡಲು ನಿರ್ಧರಿಸಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ