
ಚಾಮರಾಜನಗರ (ಸೆ.15): ಚಾಮರಾಜನಗರ ಜಿಲ್ಲೆಯ ಎಂಟಳ್ಳಿ ಗ್ರಾಮದ ಬಂಡಹಳ್ಳಿ ದೊಡ್ಡಮಠದ ಪೀಠಾಧಿಪತಿ ಶ್ರೀ ಫಲಹಾರ ಪ್ರಭುದೇವ ಸ್ವಾಮೀಜಿ (64) ಅವರು ಹೃದಯಾಘಾತದಿಂದ ಲಿಂಗೈಕ್ಯರಾಗಿದ್ದಾರೆ. ಕಳೆದ ರಾತ್ರಿ ಎದೆನೋವಿನಿಂದ ಬಳಲುತ್ತಿದ್ದ ಸ್ವಾಮೀಜಿಯವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.
ಈ ದುಃಖದ ಸುದ್ದಿ ಜಿಲ್ಲೆಯಾದ್ಯಂತ ಭಕ್ತರಲ್ಲಿ ಆಘಾತ ಮೂಡಿಸಿದೆ. ಶ್ರೀ ಪ್ರಭುದೇವ ಸ್ವಾಮೀಜಿಯವರು ತಮ್ಮ ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಗಳ ಮೂಲಕ ಚಾಮರಾಜನಗರ ಜಿಲ್ಲೆಯಲ್ಲಿ ಅಪಾರ ಭಕ್ತರನ್ನ ಹೊಂದಿದ್ದರು. ಇದೀಗ ಅವರು ದಿಡೀರ ಹೃದಯಾಘಾತದಿಂದ ಲಿಂಗೈಕ್ಯರಾಗಿರುವುದು ಭಕ್ತರು ಆಘಾತಕ್ಕೊಳಗಾಗಿದ್ದಾರೆ.
ಇದನ್ನೂ ಓದಿ: ರಜೆ ಮೇಲೆ ಊರಿಗೆ ಬಂದಿದ್ದ ಯೋಧ ಹೃದಯಾಘಾತದಿಂದ ಸಾವು!
ಇಂದು ಮಧ್ಯಾಹ್ನ ಅಂತ್ಯಕ್ರಿಯೆ:
ಶ್ರೀ ಪ್ರಭುದೇವ ಸ್ವಾಮೀಜಿ ಅವರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ಬಂಡಹಳ್ಳಿ ದೊಡ್ಡಮಠದಲ್ಲಿ ನಡೆಯಲಿದೆ. ಸ್ಥಳೀಯ ಭಕ್ತರು ಮತ್ತು ಗಣ್ಯರು ಸ್ವಾಮೀಜಿಯವರ ಅಂತಿಮ ದರ್ಶನ ಪಡೆಯಲು ಮಠಕ್ಕೆ ಆಗಮಿಸುವ ಸಾಧ್ಯತೆಯಿದೆ.
ರಾಜ್ಯದಲ್ಲಿ ಹೃದಯಾಘಾತ ಪ್ರಮಾಣ ಹೆಚ್ಚಳ ಆತಂಕ:
ಕರ್ನಾಟಕದಲ್ಲಿ ಕೋವಿಡ್ ನಂತರ ಹೃದಯಾಘಾತದ ಸಂಖ್ತೆ ಏರಿಕೆಯಾಗಿದ್ದು, ಜೀವನಶೈಲಿ ಬದಲಾವಣೆಗಳು ಮುಖ್ಯ ಕಾರಣ ಎಂದು ತಜ್ಞರು ತಿಳಿಸಿದ್ದಾರೆ. ತಂಬಾಕು, ಮದ್ಯಪಾನ ಒತ್ತಡ ಆಹಾರಾಭ್ಯಾಸಗಳು ಹೃದಯಾಘಾತ ಹೆಚ್ಚಳಕ್ಕೆ ಕಾರಣವಾಗಿವೆ. ಆರೋಗ್ಯಕರ ಜೀವನಶೈಲಿ, ನಿಯಮಿತವಾಗಿ ಹೃದಯ ತಪಾಸಣೆ ಮೂಲಕ ಹೃದಯಾಘಾತವನ್ನು ತಪ್ಪಿಸಬಹುದಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ