ರಾಜ್ಯದಲ್ಲಿ ಮತ್ತೆ ದೂರವಾಣಿ ಕರೆ ಕದ್ದಾಲಿಕೆ ಗದ್ದಲ: ಕುಮಾರಸ್ವಾಮಿ ಆರೋಪ

Published : May 21, 2024, 04:32 AM ISTUpdated : May 21, 2024, 01:48 PM IST
ರಾಜ್ಯದಲ್ಲಿ ಮತ್ತೆ ದೂರವಾಣಿ ಕರೆ ಕದ್ದಾಲಿಕೆ ಗದ್ದಲ: ಕುಮಾರಸ್ವಾಮಿ ಆರೋಪ

ಸಾರಾಂಶ

ಸಂಸದ ಪ್ರಜ್ವಲ್‌ ರೇವಣ್ಣ ರಾಸಲೀಲೆ ವಿಡಿಯೋ ಪ್ರಕರಣ ಸಂಬಂಧ ತಮ್ಮ ಸುತ್ತಮುತ್ತಲಿನ 40 ಜನರ ಫೋನ್‌ಗಳನ್ನು ರಾಜ್ಯ ಸರ್ಕಾರ ಕದ್ದಾಲಿಕೆ ಮಾಡುತ್ತಿದೆ ಎಂದು ಗಂಭೀರ ಆರೋಪ ಮಾಡಿದ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ 

ಬೆಂಗಳೂರು(ಮೇ.21):  ರಾಜ್ಯ ರಾಜಕಾರಣದಲ್ಲಿ ಮತ್ತೆ ದೂರವಾಣಿ ಕದ್ದಾಲಿಕೆ ಆರೋಪ ಕೇಳಿಬಂದಿದೆ. ಸಂಸದ ಪ್ರಜ್ವಲ್‌ ರೇವಣ್ಣ ರಾಸಲೀಲೆ ವಿಡಿಯೋ ಪ್ರಕರಣ ಸಂಬಂಧ ತಮ್ಮ ಸುತ್ತಮುತ್ತಲಿನ 40 ಜನರ ಫೋನ್‌ಗಳನ್ನು ರಾಜ್ಯ ಸರ್ಕಾರ ಕದ್ದಾಲಿಕೆ ಮಾಡುತ್ತಿದೆ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಇದಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿರುಗೇಟು ನೀಡಿದ್ದು, ಕುಮಾರಸ್ವಾಮಿ ಹಾಗೂ ಅವರ ಕುಟುಂಬದ ಫೋನ್‌ ಟ್ಯಾಪಿಂಗ್‌ ಮಾಡುವ ಮುಠ್ಠಾಳತನದ ಕೆಲಸವನ್ನು ನಾವು ಮಾಡುವುದಿಲ್ಲ. ಅವರು ಪ್ರಚಾರಕ್ಕಾಗಿ ಆರೋಪ ಮಾಡುತ್ತಿದ್ದಾರೆ ಎಂದಿದ್ದಾರೆ. 

ನಾನ್ಯಾಕೆ ಆದಿಚುಂಚನಗಿರಿ ಸ್ವಾಮೀಜಿ ಪೋನ್‌ ಟ್ಯಾಪ್‌ ಮಾಡಲಿ: ಎಚ್‌.ಡಿ.ಕುಮಾರಸ್ವಾಮಿ

ಈ ನಡುವೆ, ಹಾಗೆಲ್ಲಾ ಕದ್ದಾಲಿಕೆ ಮಾಡಲು ಬರುವುದಿಲ್ಲ. ಕುಮಾರಸ್ವಾಮಿ ಅವರ ಬಳಿ ಮಾಹಿತಿ ಇದ್ದರೆ ಮಾಹಿತಿ ಕೊಡಲಿ, ತನಿಖೆ ಮಾಡುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ್‌ ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ
ರಾಜ್ಯದಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ: 24,300 ಹುದ್ದೆ ಭರ್ತಿಗೆ ಅಂಕಿತ! ಇಲಾಖಾವಾರು ಮಾಹಿತಿ ಇಲ್ಲಿದೆ!