
ಬೆಂಗಳೂರು(ನ.03): ಫೋನ್ ಕದ್ದಾಲಿಕೆ ಪ್ರಕರಣ ಸಂಬಂಧ ಬೆಂಗಳೂರು ನಗರ ಸೇರಿದಂತೆ ರಾಜ್ಯದ 54 ಇನ್ಸ್ಪೆಕ್ಟರ್ಗಳಿಗೆ ವಿಚಾರಣೆ ಹಾಜರಾಗುವಂತೆ ಸಿಬಿಐ ನೋಟಿಸ್ ಜಾರಿಗೊಳಿಸಿದೆ. ವಿವಿಧ ಅಪರಾಧ ಪ್ರಕರಣಗಳ ತನಿಖಾಧಿಕಾರಿಗಳಾಗಿದ್ದ ಇನ್ಸ್ಪೆಕ್ಟರ್ಗಳು, ತನಿಖೆ ಸಂದರ್ಭದಲ್ಲಿ ಕೆಲವರ ಫೋನ್ ಕದ್ದಾಲಿಕೆ ನಡೆಸುತ್ತಿದ್ದರು.
ಈ ಹಿನ್ನೆಲೆಯಲ್ಲಿ ಸಿಬಿಐ, ಇನ್ಸ್ಪೆಕ್ಟರ್ಗಳಿಂದ ವಿವರಣೆ ಪಡೆಯಲು ಮುಂದಾಗಿದೆ. ಅದರಂತೆ ನ.4 ಮತ್ತು 5ರಂದು ವಿಚಾರಣೆಗೆ ಹಾಜರಾಗುವಂತೆ ಇನ್ಸ್ಪೆಕ್ಟರ್ಗಳಿಗೆ ಸೂಚಿಸಿದೆ ಎಂದು ತಿಳಿದು ಬಂದಿದೆ.
ಫೋನ್ ಕದ್ದಾಲಿಕೆ : ಮತ್ತಷ್ಟು ಅಧಿಕಾರಿಗಳಿಗೆ ಎದುರಾಗಿದೆ ಸಂಕಷ್ಟ
ತಾವು ತನಿಖೆ ನಡೆಸಿದ ಪ್ರಕರಣಗಳಲ್ಲಿ ಯಾವ ಕಾರಣಕ್ಕೆ ಕದ್ದಾಲಿಕೆ ನಡೆಸಲಾಯಿತು? ಆ ಪ್ರಕರಣದಲ್ಲಿ ಕದ್ದಾಲಿಕೆಗೆ ಒಳಗಾದ ವ್ಯಕ್ತಿಯ ಪಾತ್ರವೇನು? ಕದ್ದಾಲಿಕೆ ಬಳಿಕ ಆ ವ್ಯಕ್ತಿ ಮೇಲೆ ಕೈಗೊಂಡ ಕ್ರಮವೇನು ಎಂಬುದು ಸೇರಿದಂತೆ ಹಲವು ಪ್ರಶ್ನೆಗಳನ್ನು ಸಿಬಿಐ ಕೇಳಿ ಸ್ಪಷ್ಟೀಕರಣ ಪಡೆಯಲು ಸಿದ್ಧವಾಗಿದೆ ಎಂದು ಮೂಲಗಳು ಹೇಳಿವೆ.
ಯಾರೇ ಫೋನ್ ಟ್ಯಾಪ್ ಮಾಡಿದ್ದರೂ ಸುಮ್ಮನಿರಲ್ಲ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ