ಬಂಡೀಪುರ ರೋದನೆ: ಇದು ಕಾಡ್ಗಿಚ್ಚು ಅಲ್ಲ? ಫೋಟೋದಲ್ಲಿ ಬಯಲಾಯ್ತು ಕರಾಳ ಸತ್ಯ

Published : Feb 25, 2019, 05:43 PM ISTUpdated : Feb 25, 2019, 05:56 PM IST
ಬಂಡೀಪುರ ರೋದನೆ: ಇದು ಕಾಡ್ಗಿಚ್ಚು ಅಲ್ಲ? ಫೋಟೋದಲ್ಲಿ ಬಯಲಾಯ್ತು ಕರಾಳ ಸತ್ಯ

ಸಾರಾಂಶ

ಬಂಡೀಪುರದಲ್ಲಿ ಕಾಣಿಸಿಕೊಂಡಿರುವ ಭೀಕರ ಅಗ್ನಿ ಜ್ವಾಲೆ ರಾಜ್ಯದ ಜನರನ್ನು ಆತಂಕಕ್ಕೀಡು ಮಾಡಿದೆ. ಸಿಬ್ಬಂದಿಯೊಂದಿಗೆ ಸಾರ್ವಜನಿಕರೂ ಈ ಬೆಂಕಿಯನ್ನು ನಂದಿಸಲು ಯತ್ನಿಸುತ್ತಿದ್ದರೂ, ಇನ್ನೂ ಇದು ನಿಯಂತ್ರಣಕ್ಕೆ ಬಂದಿಲ್ಲ. ಹೀಗಿರುವಾಗ ಕೆಲ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಬೆಂಕಿ ಅನಾಹುತದ ಕುರಿತಾಗಿ ಹಲವಾರು ಅನುಮಾನಗಳನ್ನು ಹುಟ್ಟು ಹಾಕಿವೆ.

ಚಾಮರಾಜನಗರ[ಫೆ.25]: ಬಂಡೀಪುರದಲ್ಲಿ ಅಗ್ನಿ ನರ್ತನ ಮುಂದುವರೆದಿದ್ದು, ಮುಗ್ಧ ಪ್ರಾಣಿಗಳು ಸುಟ್ಟು ಕರಕಲಾಗಿವೆ. ಬಂಡೀಪುರ ರಕ್ಷಿತಾರಣ್ಯದಲ್ಲಿ ಹಬ್ಬಿಕೊಂಡಿರುವ ಈ ಬೆಂಕಿ ಇತಿಹಾಸದಲ್ಲಿ ಇದೇ ಮೊದಲ ಬಾರಿ ಅತೀ ಹೆಚ್ಚು ಪ್ರದೇಶವನ್ನು ಭಸ್ಮ ಮಾಡಿದೆ. ಬೆಂಕಿಯ ಕೆನ್ನಾಲಿಗೆ ಕಾಡನ್ನು ಆವರಿಸುತ್ತಿದ್ದಂತೆಯೇ ಈ ಬೆಂಕಿ ಹೊತ್ತಿಕೊಂಡಿದ್ದು ಹೇಗೆ ಎಂಬ ಚರ್ಚೆಗಳೂ ಆರಂಭವಾಗಿವೆ. ಕೆಲವರು ಇದು ಕಾಡ್ಗಿಚ್ಚು ಎಂದು ವಾದಿಸಿದರೆ, ಅನೇಕರು ಇದು ಮಾನವ ನಿರ್ಮಿತ ಎಂದು ಆರೋಪಿಸುತ್ತಿದ್ದಾರೆ. ಇವೆಲ್ಲದರ ನಡುವೆ ಬೆಂಕಿ ತಗುಲಿರುವುದರ ಹಿಂದೆ ಟಿಂಬರ್ ಮಾಫಿಯಾ ಕೈವಾಡ ಇರುವ ಶಂಕೆಯೂ ವ್ಯಕ್ತವಾಗಿದೆ. ಆದರೀಗ ಈ ಅಂತೆ ಕಂತೆಗಳ ನಡುವೆ ಕೆಲ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡಿದ್ದು, ಕಾಡಿಗೆ ಮನುಷ್ಯರೇ ಬೆಂಕಿ ಹಚ್ಚಿದ್ದಾರೆಂಬ ಅನುಮಾನ ವ್ಯಕ್ತವಾಗಿದೆ.

ಬಂಡೀಪುರದಲ್ಲಿ ಬೆಂಕಿ ನಂದಿಸಲು ಹೆಲಿಕಾಪ್ಟರ್ ಬಳಸಿ: ಸಿಎಂ ಕುಮಾರಸ್ವಾಮಿ

ಹೌದು ಟ್ವಿಟರ್ ನಲ್ಲಿ United Conservation Movement ಎಂಬ ಖಾತೆಯಲ್ಲಿ ಕೆಲ ಫೋಟೋಗಳನ್ನು ಶೇರ್ ಮಾಡಲಾಗಿದ್ದು, ಬಂಡೀಪುರದಲ್ಲಿ ನಿಯಂತ್ರಿಸಲು ಸಾಧ್ಯವಾಗದ ಬೆಂಕಿಯನ್ನು ಮನುಷ್ಯರೇ ಹಚ್ಚಿದ್ದಾರೆ ಎಂಬ ಅನುಮಾನವನ್ನು ಗಟ್ಟಿಗೊಳಿಸಿದೆ. '2016ರಲ್ಲಿ ಬಂಡೀಪುರ ಅರಣ್ಯದ ಕಲ್ಕೆರೆ, ಬೇಗೂರು ಹಾಗೂ ಗುಂಡ್ರೆ ಬೆಟ್ಟಗಳಂತೆ  ಈ ವರ್ಷವೂ ಬಂಡೀಪುರ ಬೆರಣಿ/ಲದ್ದಿಗೆ ಹಚ್ಚಿದ ಬೆಂಕಿಗೆ ಬಲಿಯಾದಂತೆ ಭಾಸವಾಗುತ್ತಿದೆ. ಬಂಡೀಪುರದಲ್ಲಿ ಬಹುದೊಡ್ಡ ಅಗ್ನಿ ಅನಾಹುತ ಸಂಭವಿಸಿದ ಸುಮಾರು 20 ನಿಮಿಷದ ಬಳಿಕ ಹರೇಕೆರೆ, ಗೋಪಾಲಸ್ವಾಮಿ ಬೆಟ್ಟದಲ್ಲಿ ಈ ದೃಶ್ಯಗಳು ಕಂಡು ಬಂದಿವೆ ' ಎಂದು ಬರೆದುಕೊಂಡಿದ್ದಾರೆ.

ಬಂಡೀಪುರದ 8650 ಎಕರೆ ಭಸ್ಮ: ಇಲ್ಲಿ ಈ ಪ್ರಮಾಣದ ಅರಣ್ಯ ಹಾನಿ ಇದೇ ಮೊದಲು!
ಅಕೌಂಟ್ ನಲ್ಲಿ ನೀಡಿದ ಮಾಹಿತಿ ಅನ್ವಯ  United Conservation Movement ಎಂಬುವುದು ಪರಿಸರ ಪ್ರೇಮಿ ನಾಗರಿಕರ ಸಂಘವಾಗಿದೆ. ಇದು ಅರಣ್ಯ ರಕ್ಷಣೆಯ ಕುರಿತಾಗಿ ಜಾಗೃತಿ ಮೂಡಿಸುವ ಕಾರ್ಯ ನಿರ್ವಹಿಸುತ್ತದೆ. ಸದ್ಯ ಈ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದ್ದು, ಹಲವಾರು ಅನುಮಾನಗಳನ್ನು ಹುಟ್ಟು ಹಾಕಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಗ್ಯಾರಂಟಿ ಸ್ಕೀಮ್ ಅಧ್ಯಕ್ಷ ರೇವಣ್ಣ ಪುತ್ರನಿಂದ ಹಿಟ್ ಅಂಡ್ ರನ್; ಕಾರು ಗುದ್ದಿ ಬೈಕ್ ಸವಾರ ಸ್ಥಳದಲ್ಲೇ ಸಾವು!
ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!