Potholes in Bengaluru: ಪ್ರಧಾನಿ ಮೋದಿ ಮನೆ ಹೊರಗೂ ರಸ್ತೆಗಳಲ್ಲಿ ಗುಂಡಿಗಳಿವೆ: ಡಿಸಿಎಂ

Kannadaprabha News, Ravi Janekal |   | Kannada Prabha
Published : Sep 24, 2025, 10:17 AM IST
DK Shivakumar

ಸಾರಾಂಶ

ಬೆಂಗಳೂರಿನ ರಸ್ತೆ ಗುಂಡಿಗಳ ಬಗ್ಗೆ ಮಾತ್ರ ಹೆಚ್ಚಿನ ಪ್ರಚಾರ ಸಿಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಪ್ರಧಾನಿ ನಿವಾಸದ ರಸ್ತೆಯಲ್ಲೂ ಗುಂಡಿಗಳಿವೆ ಎಂದಿದ್ದಾರೆ.

ಬೆಂಗಳೂರು (ಸೆ.24): ದೆಹಲಿ ರಸ್ತೆಗಳಲ್ಲೂ ಗುಂಡಿಯಿದ್ದು, ಪ್ರಧಾನಿ ನಿವಾಸದ ರಸ್ತೆಯನ್ನೂ ಮಾಧ್ಯಮಗಳು ನೋಡಬೇಕು. ಅದರ ಬಗ್ಗೆ ಯಾವುದೇ ಸುದ್ದಿಯಾಗುತ್ತಿಲ್ಲ. ಆದರೆ, ಬೆಂಗಳೂರಿನ ರಸ್ತೆ ಗುಂಡಿಗಳ ಬಗ್ಗೆ ಮಾತ್ರ ಹೆಚ್ಚಿನ ಪ್ರಚಾರ ಸಿಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅಸಮಾಧಾನ ವ್ಯಕ್ತಪಡಿಸಿದರು.

ಸದಾಶಿವನಗರ ತಮ್ಮ ನಿವಾಸದ ಬಳಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್‌, ನಗರದಲ್ಲಿ ಮಳೆಯ ನಡುವೆಯೂ ರಸ್ತೆ ಗುಂಡಿ ಮುಚ್ಚಲಾಗುತ್ತಿದ್ದು, ಪ್ರತಿದಿನ ಸರಾಸರಿ 1 ಸಾವಿರ ರಸ್ತೆ ಗುಂಡಿಗಳನ್ನು ಮುಚ್ಚಲಾಗುತ್ತಿದೆ. ಶೀಘ್ರ ಎಲ್ಲ ಗುಂಡಿಗಳನ್ನು ಮುಚ್ಚಲಾಗುವುದು. ಇನ್ನು ಕೆಲ ದಿನಗಳ ಹಿಂದೆ ದೆಹಲಿ ಪ್ರವಾಸದಲ್ಲಿದ್ದಾಗ ಅಲ್ಲಿನ ರಸ್ತೆಗಳ ಪರಿಸ್ಥಿತಿಯನ್ನೂ ನಾನು ಗಮನಿಸಿದೆ. ಪ್ರಧಾನಿ ನಿವಾಸದ ರಸ್ತೆಯಲ್ಲೂ ಗುಂಡಿಗಳಿವೆ. ಅದನ್ನೂ ಮಾಧ್ಯಮಗಳು ನೋಡಬೇಕು. ರಸ್ತೆ ಗುಂಡಿ ದೇಶದ ಎಲ್ಲ ನಗರಗಳಲ್ಲಿರುವ ಸಮಸ್ಯೆ. ಆದರೆ, ಬೆಂಗಳೂರಿನ ಬಗ್ಗೆ ಮಾತ್ರ ಹೆಚ್ಚಿನ ಪ್ರಚಾರ ಸಿಗುತ್ತಿದೆ ಎಂದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಒಂದು ರಸ್ತೆ ಗುಂಡಿ ಮುಚ್ಚಲು 5 ಲಕ್ಷ ಖರ್ಚು ಮಾಡ್ತಿದ್ಯಾ ಸರ್ಕಾರ?

ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ರಸ್ತೆಗಳು ಗುಣಮಟ್ಟದಿಂದ ನಿರ್ಮಿಸಿದ್ದರೆ ರಸ್ತೆ ಗುಂಡಿ ಸಮಸ್ಯೆ ಉದ್ಭವಿಸುತ್ತಿರಲಿಲ್ಲ. ಆದರೆ, ಗುಣಮಟ್ಟದ ರಸ್ತೆ ನಿರ್ಮಾಣವಾಗದ ಕಾರಣ ಈಗ ಗುಂಡಿಗಳು ಕಾಣಿಸುತ್ತಿವೆ. ಅಲ್ಲದೆ, ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ 5 ಪಾಲಿಕೆಗಳ ಚುನಾವಣೆ ಹತ್ತಿರವಾಗುತ್ತಿದೆ ಎಂಬ ಕಾರಣಕ್ಕಾಗಿ ಬಿಜೆಪಿ ರಸ್ತೆ ಗುಂಡಿ ಬಗ್ಗೆ ರಾಜಕೀಯ ಮಾಡುತ್ತಿದೆ ಎಂದು ಹರಿಹಾಯ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತನಿಗೆ ಪರಿಹಾರ ನೀಡದ ಶಿವಮೊಗ್ಗ ಡಿಸಿ ಕಚೇರಿ, ಕಾರು ಜಪ್ತಿಗೆ ಕೋರ್ಟ್ ಆದೇಶ! ಏನಿದು ಪ್ರಕರಣ?
'ನಿಮಗೆ ಧಮ್ ಇದ್ರೆ..; ದ್ವೇಷ ಭಾಷಣ ಮಸೂದೆ ಜಾರಿಗೆ ಮುಂದಾಗಿರೋ ಕಾಂಗ್ರೆಸ್ ಸರ್ಕಾರಕ್ಕೆ ಸಿಟಿ ರವಿ ನೇರ ಸವಾಲು!