ನಾಳೆ ಬೆಂಗಳೂರಿಗೆ ಮೋದಿ: ಇಸ್ರೋ ಸಾಧನೆ ಕಣ್ತುಂಬಿಕೊಳ್ಳಲಿರುವ ಪ್ರಧಾನಿ!

Published : Sep 05, 2019, 07:49 PM ISTUpdated : Sep 05, 2019, 07:55 PM IST
ನಾಳೆ ಬೆಂಗಳೂರಿಗೆ ಮೋದಿ: ಇಸ್ರೋ ಸಾಧನೆ ಕಣ್ತುಂಬಿಕೊಳ್ಳಲಿರುವ ಪ್ರಧಾನಿ!

ಸಾರಾಂಶ

ನಾಳೆ(ಸೆ.06) ಬೆಂಗಳೂರಿಗೆ ಆಗಮಿಸಲಿರುವ ಪ್ರಧಾನಿ ಮೋದಿ|  ಸೆ.07ರಂದು ಚಂದ್ರಯಾನ-2 ನೌಕೆ ಚಂದ್ರನ ನೆಲ ಸ್ಪರ್ಶಿಸುವ ಕ್ಷಣಕ್ಕೆ ಸಾಕ್ಷಿ| ಇಸ್ರೋ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಪ್ರಧಾನಿ ಮೋದಿ| ಪೀಣ್ಯ ಬಳಿ ಇರುವ  ಇಸ್ರೋದ ಇಸ್ಟ್ರಾಕ್‍ನಲ್ಲಿ ವೀಕ್ಷಣೆ|

ಬೆಂಗಳೂರು(ಸೆ.05): ನಾಳೆ(ಸೆ.06) ರಾಜ್ಯ ರಾಜಧಾನಿ ಬೆಂಗಳೂರಿಗೆ ಆಗಮಿಸಲಿರುವ ಪ್ರಧಾನಿ ಮೋದಿ, ಸೆ.07ರಂದು ಇಸ್ರೋದ ಚಂದ್ರಯಾನ-2 ನೌಕೆಯ ವಿಕ್ರಮ್ ಲ್ಯಾಂಡರ್ ಚಂದ್ರನ ನೆಲ ಸ್ಪರ್ಶಿಸುವ ಕ್ಷಣ ಕಣ್ತುಂಬಿಕೊಳ್ಳಲಿದ್ದಾರೆ.

ಪೀಣ್ಯ ಬಳಿ ಇರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಕೇಂದ್ರ(ಇಸ್ರೋ)ದ ಇಸ್ಟ್ರಾಕ್‍ನಲ್ಲಿ ಚಂದ್ರಯಾನ-2 ವೀಕ್ಷಣೆ ಕಾರ್ಯಕ್ರಮದಲ್ಲಿ ಮೋದಿ ಪಾಲ್ಗೊಳ್ಳಲಿದ್ದಾರೆ.

ಇದೇ ವೇಳೆ ಇಸ್ರೋ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರೊಂದಿಗೆ ರಾಯಚೂರು ಜಿಲ್ಲೆ ಸಿಂಧನೂರು ನಗರದ ಡಾಫಡಿಲ್ಸ್‌ ಕಾನ್ಸೆಫ್ಟ್‌ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಜಿ.ವೈಷ್ಣವಿ ನಾಗರಾಜ ಕೂಡ ಭಾಗವಹಿಸಲಿದ್ದಾರೆ.

ಬಳಿಕ ಅಲ್ಲಿಂದ ನೇರವಾಗಿ ಪ್ರಧಾನಿ ಮೋದಿ ಮುಂಬೈಗೆ ತೆರಳಲಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ